ದಾಸನ​ ಬೆನ್ನುನೋವು ಜೈಲು ಅಧಿಕಾರಿಗಳಿಗೆ ತಲೆನೋವು; ದರ್ಶನ್ ಇನ್ ಡೇಂಜರ್!

ದಾಸನ​ ಬೆನ್ನುನೋವು ಜೈಲು ಅಧಿಕಾರಿಗಳಿಗೆ ತಲೆನೋವು; ದರ್ಶನ್ ಇನ್ ಡೇಂಜರ್!

Published : Oct 25, 2024, 12:54 PM ISTUpdated : Oct 25, 2024, 12:56 PM IST

ಇದೀಗ MRI ಸ್ಕ್ಯಾನಿಂಗ್ ರಿಪೋರ್ಟ್ ಜೈಲು ಅಧಿಕಾರಿಗಳ ಕೈ ಸೇರಿದೆ. ವೈದ್ಯರು ಕೊಟ್ಟಿರೋ ರಿಪೋರ್ಟ್​​ನಲ್ಲಿ ಶಾಕಿಂಗ್ ಸಂಗತಿಗಳೇ ಇವೆ. L5, S1 ಭಾಗದಲ್ಲಿ ದರ್ಶನ್​ಗೆ ಊತ ಕಾಣಿಸಿಕೊಂಡಿದ್ದು, ನಿರ್ಲಕ್ಷ ಮಾಡದೇ ತಕ್ಷಣ ಶಸ್ತ್ರಚಿಕಿತ್ಸೆ ಪಡೆದುಕೊಳ್ಳಿ ಅಂತ ವೈದ್ಯರು..

ತೀವ್ರ ಬೆನ್ನು ನೋವಿನಿಂದ ಬಳಲ್ತಾ ಇರೋ ದರ್ಶನ್​ಗೆ ಮಂಗಳವಾರ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಮಾಡಲಾಗಿತ್ತು. ಇದೀಗ ಸ್ಕ್ಯಾನಿಂಗ್ ರಿಪೋರ್ಟ್ ಜೈಲು ಅಧಿಕಾರಿಗಳ ಕೈ ಸೇರಿದ್ದು, ದರ್ಶನ್ ಸ್ಥಿತಿ ಕ್ರಿಟಿಕಲ್ ಅನ್ನೋ ವರದಿ ಬಂದಿದೆ. ನಿರ್ಲಕ್ಷ ಮಾಡದೇ ಅತೀ ಶೀಘ್ರದಲ್ಲಿ ಸರ್ಜರಿ ಮಾಡಿಸೋಕೆ ಸೂಚನೆ ನೀಡಲಾಗಿದೆ. ವೈದ್ಯರ ರಿಪೋರ್ಟ್ ದರ್ಶನ್ ನಿದ್ದೆಗೆಡಿಸಿದೆ.

ಬೆನ್ನು ನೋವಿನಿಂದ ತೀವ್ರ ತೊಂದರೆಗೀಡಾಗಿರೋ ದರ್ಶನ್​ಗೆ ಕಳೆದ ಮಂಗಳವಾರ ವಿಮ್ಸ್ ಆಸ್ಪತ್ರೆಗೆ ಕರೆದೊಯ್ದು MRI ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ವಿಮ್ಸ್ ಆಸ್ಪತ್ರೆಗೆ ಕರೆತಂದ ವೇಳೆ ಅಭಿಮಾನಿಗಳ ತಳ್ಳಾಟದಲ್ಲಿ ದರ್ಶನ್ ಪರದಾಡಿ ಹೋಗಿದ್ರು. ದರ್ಶನ್ ಮುಖದಲ್ಲಿ ನೋವಿನ ಗೆರೆಗಳು ಕಾಣ್ತಾ ಇದ್ವು. ನಡೆದಾಡೋದಕ್ಕೂ ಪರದಾಡ್ತಾ ಇರೋದು ಫ್ಯಾನ್ಸ್ ಕಣ್ಣಿಗೆ ಬಿದ್ದಿತ್ತು.

ಇದೀಗ MRI ಸ್ಕ್ಯಾನಿಂಗ್ ರಿಪೋರ್ಟ್ ಜೈಲು ಅಧಿಕಾರಿಗಳ ಕೈ ಸೇರಿದೆ. ವೈದ್ಯರು ಕೊಟ್ಟಿರೋ ರಿಪೋರ್ಟ್​​ನಲ್ಲಿ ಶಾಕಿಂಗ್ ಸಂಗತಿಗಳೇ ಇವೆ. L5, S1 ಭಾಗದಲ್ಲಿ ದರ್ಶನ್​ಗೆ ಊತ ಕಾಣಿಸಿಕೊಂಡಿದ್ದು, ಈ ಸಮಸ್ಯೆಗಳ ಬಗ್ಗೆ ಖುದ್ದು ವೈದ್ಯರು ಜೈಲಿಗೆ ಬಂದು ಮನವರಿಕೆ ಮಾಡಿಕೊಟ್ಟಿದ್ದಾರೆ. ನಿರ್ಲಕ್ಷ ಮಾಡದೇ ತತ್ ಕ್ಷಣ ಶಸ್ತ್ರಚಿಕಿತ್ಸೆ ಪಡೆದುಕೊಳ್ಳಿ ಅಂತ ಸೂಚನೆ ಕೊಟ್ಟಿದ್ದಾರೆ.

ಅಸಲಿಗೆ ದರ್ಶನ್​ಗೆ ಬೆನ್ನು ನೋವು ಕಾಣಿಸಿಕೊಂಡ ಬೆನ್ನಲ್ಲೇ ಜೈಲಾಧಿಕಾರಿಗಳು ಸರ್ಕಾರಿ ಆ್ಪಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಿದ್ರು. ಆದ್ರೆ ದರ್ಶನ್ ತನಗೆ ಬೆಂಗಳೂರಿನ ಮಣಿಪಾಲ್​ನಲ್ಲೇ ಚಿಕಿತ್ಸೆ ಆಗಬೇಕು ಅಂತ ಪಟ್ಟು ಹಿಡಿದಿದ್ರು. ಬೆನ್ನು ನೋವಿನ ಕಾರಣ ಕೊಟ್ರೆ ಹೈಕೋರ್ಟ್ ಬೇಗ ಬೇಲ್ ಕೊಟ್ಟುಬಿಡುತ್ತೆ ಅನ್ನೋದು ದರ್ಶನ್ ನಂಬಿಕೆಯಾಗಿತ್ತು. ಆದ್ರೆ ಆ ನಂಬಿಕೆ ಹುಸಿಯಾಗಿದೆ. ಹೈಕೋರ್ಟ್​​ನಲ್ಲೂ ಬೇಲ್ ಮುಂದೂಡಿಕೆ ಆಗ್ತಾ ಇದೆ. ಬೆನ್ನು ನೋವು ಮಾತ್ರ ಹೆಚ್ಚಾಗ್ತಾ ಇದೆ.. ಮುಂದೇನು ದರ್ಶನ್ ಕಥೆ, ವಿಡಿಯೋ ನೋಡಿ..

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more