Darshan: ನಟ ದರ್ಶನ್‌ಗೆ ಡಬಲ್ ಶಾಕ್..! ಇನ್ನೂ 14 ದಿನ ನ್ಯಾಯಾಂಗ ಬಂಧನದಲ್ಲಿ, ಮತ್ತೆ ಮುಂದುವರೆದ ಜೈಲೂಟ!

Darshan: ನಟ ದರ್ಶನ್‌ಗೆ ಡಬಲ್ ಶಾಕ್..! ಇನ್ನೂ 14 ದಿನ ನ್ಯಾಯಾಂಗ ಬಂಧನದಲ್ಲಿ, ಮತ್ತೆ ಮುಂದುವರೆದ ಜೈಲೂಟ!

Published : Jul 19, 2024, 09:38 AM ISTUpdated : Jul 19, 2024, 10:03 AM IST

ಕನ್ನಡ ನಟ ದರ್ಶನ್ ಬಹುಷಃ ತಮ್ಮ ಜಿವನದಲ್ಲಿ ಮತ್ತೆ ಜೈಲು ಮೆಟ್ಟಿಲು ಹತ್ತೊ ಕನಸನ್ನೂ ಕಂಡಿರಲಿಲ್ಲ ಅನ್ನಿಸುತ್ತೆ. ಆದ್ರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್‌ಗೆ ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣಿಸುತ್ತಿಲ್ಲ.

ಜುಲೈ 18 ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy murder case) ಆರೋಪಿಗಳ ನ್ಯಾಯಾಂಗ ಬಂಧನದ(Judicial custody) ಅವಧಿ ಮುಕ್ತಾಯವಾದ ಹಿನ್ನೆಲೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್(Darshn), ಪವಿತ್ರಾ ಗೌಡ (Pavithra Gowda)ಹಾಗೂ ಇನ್ನುಳಿದ ಆರೋಪಿಗಳು ಹಾಜರಾಗಿದ್ದರು. ಎಲ್ಲರಿಗೂ ಆಗಸ್ಟ್ 1ರ ತನಕ ನ್ಯಾಯಾಂಗ ಬಂಧನ ಮುಂದುವರಿಯಲಿದೆ. ಈ ಮೂಲಕ ದರ್ಶನ್ ಮತ್ತೆ ಹಿನ್ನೆಡೆಯಾಗಿದ್ದು ದರ್ಶನ್ಗೆ ದೊಡ್ಡ ನಿರಾಸೆ ಎದುರಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನನ್ನು  ಪವಿತ್ರಗೌಡಾಗೆ ಅಶ್ಲೀಲ ಮೆಸೇಜ್ ಕಳುಹಿಡಿದ ಎಂಬ ಕಾರಣಕ್ಕೆ ಬೆಂಗಳೂರಿಗೆ ಕರೆದುಕೊಂಡು ಬಂದು, ಕೊಲೆ ಮಾಡಿದ ಆರೋಪದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿ 17 ಜನರು ಜೈಲು ಪಾಲಾಗಿದ್ದಾರೆ. ಆದಷ್ಟು ಬೇಗ ಜಾಮೀನು ಪಡೆಯಬೇಕು ಎಂದು ದರ್ಶನ್ ಪ್ರಯತ್ನಿಸುತ್ತಿದ್ದಾರೆ. ಆದರೆ ಇದು ಕೊಲೆ ಪ್ರಕರಣ ಆದ್ದರಿಂದ ಅವರಿಗೆ ಜಾಮೀನು ಪಡೆಯುವುದು ಕಷ್ಟವಾಗಿದೆ. ಇನ್ನೂ 14 ದಿನಗಳ ಕಾಲ ಅವರು ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯ ಆಗಿದೆ. ದರ್ಶನ್‌ಗೆ ಮತ್ತೆ ಜೈಲೂಟವೇ ಫಿಕ್ಸಾಗಿದೆ. ಇದು ಅವರ ಅಭಿಮಾನಿಗಳಿಗೂ ನುಂಗಲಾರದ ತುತ್ತಾಗಿದೆ. ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೂ ಮುನ್ನವೇ ಹೈಕೋರ್ಟ್‌ನಲ್ಲಿ ದರ್ಶನ್ ಅವರಿಗೆ ನಿರಾಸೆಯಾಗಿದೆ. 

ಇದನ್ನೂ ವೀಕ್ಷಿಸಿ:  ಜೈಲಿಗೆ ಹೋಗುತ್ತಿದ್ದಂತೆ ದರ್ಶನ್‌ಗೆ ಆರೋಗ್ಯ ಕೆಟ್ಟಿದ್ದೇಕೆ..? ನಟನ ಬೇಡಿಕೆ ಒಪ್ಪದಂತೆ ಪೊಲೀಸ್ ಕೊಟ್ಟ ಕಾರಣವೇನು..?

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more