Darshan: ನಟ ದರ್ಶನ್‌ಗೆ ಡಬಲ್ ಶಾಕ್..! ಇನ್ನೂ 14 ದಿನ ನ್ಯಾಯಾಂಗ ಬಂಧನದಲ್ಲಿ, ಮತ್ತೆ ಮುಂದುವರೆದ ಜೈಲೂಟ!

Darshan: ನಟ ದರ್ಶನ್‌ಗೆ ಡಬಲ್ ಶಾಕ್..! ಇನ್ನೂ 14 ದಿನ ನ್ಯಾಯಾಂಗ ಬಂಧನದಲ್ಲಿ, ಮತ್ತೆ ಮುಂದುವರೆದ ಜೈಲೂಟ!

Published : Jul 19, 2024, 09:38 AM ISTUpdated : Jul 19, 2024, 10:03 AM IST

ಕನ್ನಡ ನಟ ದರ್ಶನ್ ಬಹುಷಃ ತಮ್ಮ ಜಿವನದಲ್ಲಿ ಮತ್ತೆ ಜೈಲು ಮೆಟ್ಟಿಲು ಹತ್ತೊ ಕನಸನ್ನೂ ಕಂಡಿರಲಿಲ್ಲ ಅನ್ನಿಸುತ್ತೆ. ಆದ್ರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್‌ಗೆ ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣಿಸುತ್ತಿಲ್ಲ.

ಜುಲೈ 18 ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy murder case) ಆರೋಪಿಗಳ ನ್ಯಾಯಾಂಗ ಬಂಧನದ(Judicial custody) ಅವಧಿ ಮುಕ್ತಾಯವಾದ ಹಿನ್ನೆಲೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್(Darshn), ಪವಿತ್ರಾ ಗೌಡ (Pavithra Gowda)ಹಾಗೂ ಇನ್ನುಳಿದ ಆರೋಪಿಗಳು ಹಾಜರಾಗಿದ್ದರು. ಎಲ್ಲರಿಗೂ ಆಗಸ್ಟ್ 1ರ ತನಕ ನ್ಯಾಯಾಂಗ ಬಂಧನ ಮುಂದುವರಿಯಲಿದೆ. ಈ ಮೂಲಕ ದರ್ಶನ್ ಮತ್ತೆ ಹಿನ್ನೆಡೆಯಾಗಿದ್ದು ದರ್ಶನ್ಗೆ ದೊಡ್ಡ ನಿರಾಸೆ ಎದುರಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನನ್ನು  ಪವಿತ್ರಗೌಡಾಗೆ ಅಶ್ಲೀಲ ಮೆಸೇಜ್ ಕಳುಹಿಡಿದ ಎಂಬ ಕಾರಣಕ್ಕೆ ಬೆಂಗಳೂರಿಗೆ ಕರೆದುಕೊಂಡು ಬಂದು, ಕೊಲೆ ಮಾಡಿದ ಆರೋಪದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿ 17 ಜನರು ಜೈಲು ಪಾಲಾಗಿದ್ದಾರೆ. ಆದಷ್ಟು ಬೇಗ ಜಾಮೀನು ಪಡೆಯಬೇಕು ಎಂದು ದರ್ಶನ್ ಪ್ರಯತ್ನಿಸುತ್ತಿದ್ದಾರೆ. ಆದರೆ ಇದು ಕೊಲೆ ಪ್ರಕರಣ ಆದ್ದರಿಂದ ಅವರಿಗೆ ಜಾಮೀನು ಪಡೆಯುವುದು ಕಷ್ಟವಾಗಿದೆ. ಇನ್ನೂ 14 ದಿನಗಳ ಕಾಲ ಅವರು ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯ ಆಗಿದೆ. ದರ್ಶನ್‌ಗೆ ಮತ್ತೆ ಜೈಲೂಟವೇ ಫಿಕ್ಸಾಗಿದೆ. ಇದು ಅವರ ಅಭಿಮಾನಿಗಳಿಗೂ ನುಂಗಲಾರದ ತುತ್ತಾಗಿದೆ. ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೂ ಮುನ್ನವೇ ಹೈಕೋರ್ಟ್‌ನಲ್ಲಿ ದರ್ಶನ್ ಅವರಿಗೆ ನಿರಾಸೆಯಾಗಿದೆ. 

ಇದನ್ನೂ ವೀಕ್ಷಿಸಿ:  ಜೈಲಿಗೆ ಹೋಗುತ್ತಿದ್ದಂತೆ ದರ್ಶನ್‌ಗೆ ಆರೋಗ್ಯ ಕೆಟ್ಟಿದ್ದೇಕೆ..? ನಟನ ಬೇಡಿಕೆ ಒಪ್ಪದಂತೆ ಪೊಲೀಸ್ ಕೊಟ್ಟ ಕಾರಣವೇನು..?

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more