ಜೈಲಲ್ಲಿ ದರ್ಶನ್‌ಗೆ ಆತಿಥ್ಯ ನೀಡಲು ಕುಖ್ಯಾತ ರೌಡಿಗಳಿಂದ ಪೈಪೋಟಿ ? ನಟನ ಕುರಿತ ಅಚ್ಚರಿಯ ವಿಷಯ ಬಹಿರಂಗ..!

ಜೈಲಲ್ಲಿ ದರ್ಶನ್‌ಗೆ ಆತಿಥ್ಯ ನೀಡಲು ಕುಖ್ಯಾತ ರೌಡಿಗಳಿಂದ ಪೈಪೋಟಿ ? ನಟನ ಕುರಿತ ಅಚ್ಚರಿಯ ವಿಷಯ ಬಹಿರಂಗ..!

Published : Jun 26, 2024, 10:09 AM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ 4 ದಿನಗಳಾಗುತ್ತಿವೆ. ಸಾಮಾನ್ಯ ಕೈದಿಗಳಂತೆ ದಿನ ಕಳೆಯುತ್ತಿರುವ ದರ್ಶನ್ ಊಟ, ತಿಂಡಿ ಹಾಗೂ ನಿದ್ರೆಯನ್ನು ಸರಿಯಾಗಿ ಮಾಡದೇ ಚಿಂತೆಗೆ ಬಿದ್ದು, ಮಂಕಾಗಿದ್ದಾರೆ ಎನ್ನಲಾಗಿದೆ. ನಾನ್ ವೆಜ್ ಕೊಟ್ರೂ ಬೇಡ ಎನ್ನುತ್ತಿದ್ದಾರಂತೆ.


13 ವರ್ಷಗಳ ನಂತರ ಮತ್ತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ(Parappana Agrahara Jail) ದರ್ಶನ್‌ಗೆ ಅತಿಥ್ಯ ನೀಡಲು ರೌಡಿಗಳ ಪಡೆ ನಾ ಮುಂದು ತಾ ಮುಂದು ಎಂದು ಬಂದಿದೆ ಅಂತಾ ಹೇಳಲಾಗುತ್ತಿದೆ. ದರ್ಶನ್‌ಗೆ (Darshan) ಅತಿಥ್ಯ ನೀಡಲು ಮುಂದಾಗಿರುವ ರೌಡಿಗಳು ಯಾರು ಅನ್ನೋದು ಕೂಡ ಇಂಟ್ರೆಸ್ಟಿಂಗ್ ಆಗಿದೆ. ಕುಖ್ಯಾತ ವಿಲ್ಸನ್ ಗಾರ್ಡನ್ ನಾಗ ಹಾಗೂ ಸೈಕಲ್ ರವಿ ಕಡೆಯಿಂದ ದರ್ಶನ್ ನೋಡಿಕೊಳ್ಳಲು ಪೈಪೋಟಿ ಬಿದ್ದಿದ್ಯಂತೆ. ಪರಪ್ಪನ ಆಗ್ರಹಾರ ಜೈಲಲ್ಲೇ ವಿಲ್ಸನ್ ಗಾರ್ಡನ್ ನಾಗ ಇದ್ದಾನೆ. ಆದರೆ ಸೈಕಲ್ ರವಿ ಜೈಲಲ್ಲಿ ಇಲ್ಲ. ಆದರೂ ದರ್ಶನ್ ಜೈಲಲ್ಲಿ ನೋಡಿಕೊಳ್ಳಲು ರವಿ ಹುಡುಗರು ಪೈಪೋಟಿ ನಡೆಸುತ್ತಿದ್ದಾರೆ. ಇದಕ್ಕಾಗಿ ರವಿಯ ಬಂಟನೊಬ್ಬ ಹಳೆ ಕೇಸಲ್ಲಿ ಜೈಲು ಸೇರೋ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 2011ರಲ್ಲಿ ದರ್ಶನ್ ಜೈಲಲ್ಲಿದ್ದಾಗ ಸೈಕಲ್ ರವಿ ಅತಿಥ್ಯ ನೀಡಿದ್ದ ಎನ್ನಲಾಗಿದೆ. ಈಗಲೂ ತಾನೇ ನೀಡುತ್ತೇವೆ ಎಂದು ಸೈಕಲ್ ಗ್ಯಾಂಗ್ ಮುಂದಾಗಿದೆ ಎಂದು ಹೇಳಲಾಗಿದೆ. ಆದರೆ ವಿಲ್ಸನ್ ಗಾರ್ಡನ್ ನಾಗ ಜೈಲಲ್ಲೇ ಇದ್ದು ಅವರು ಕೂಡ ದರ್ಶನ್‌ಗೆ ಅತಿಥ್ಯ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಮತ್ತೊಂದು ಕಡೆ  ಸೆಂಟ್ರಲ್ ಜೈಲು ಪರಪ್ಪನ ಅಗ್ರಹಾರದಲ್ಲಿರೋ ದರ್ಶನ್‌ಗೆ ಬಿಗಿ ಭದ್ರತೆ ಒದಗಿಸಲಾಗಿದೆ. ಬ್ಯಾರಕ್ ನಂ.3 ರ ಭದ್ರತಾ ಕೊಠಡಿಯಲ್ಲಿರೋ ದರ್ಶನ್ ಗೆ ಜೈಲಿನ ಇನ್ಸ್ ಪೆಕ್ಟರ್ ಮತ್ತು ಮೂವರು ಸಿಬ್ಬಂದಿ ಭದ್ರತೆ ನೀಡುತ್ತಿದ್ದಾರೆ. ದರ್ಶನ್ ನೋಡಲು ಜೈಲಿನ ಕೈದಿಗಳು ಬರವ ಸಾಧ್ಯತೆಗಳಿವೆ. ಹೀಗಾಗಿ ಬ್ಯಾರಕ್ 3 ಬಳಿ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ವೀಕ್ಷಿಸಿ:  ಅವನು ಬರದಿದ್ರೆ ಲೆಕ್ಕ ನಾನು ಕೊಡ್ತೀನಿ ಅಂದಿದ್ದೇಕೆ ದೈವ..? ಮೈ ನವಿರೇಳಿಸುವಂತಿದೆ ಗುಳಿಗನ ಕಾರ್ಣಿಕ..!

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more