ಹೆಣ್ಣು, ಹೆಂಡದ ಚಟದಿಂದ ದರ್ಶನ್ ವಿಲನ್ ಆಗಿದ್ದಾನೆ! ಶಿಷ್ಯನ ನಡವಳಿಕೆಗೆ ಕೋಪಗೊಂಡ ಗುರು!

ಹೆಣ್ಣು, ಹೆಂಡದ ಚಟದಿಂದ ದರ್ಶನ್ ವಿಲನ್ ಆಗಿದ್ದಾನೆ! ಶಿಷ್ಯನ ನಡವಳಿಕೆಗೆ ಕೋಪಗೊಂಡ ಗುರು!

Published : Jun 16, 2024, 09:07 AM IST

ನಟ ದರ್ಶನ್ ಲೈಫ್‌ನಲ್ಲಿ ಆಗಬಾರದಲ್ಲೇ ಆಗುತ್ತಿದೆ. ತೆರೆ ಮೇಲೆ ನಾಯಕನಾಗಿ ಎಲ್ಲರ ಮನಸ್ಸು ಗೆಲ್ಲುತ್ತಿದ್ದ ದರ್ಶನ್ ರೀಯಲ್ ಲೈಫ್‌ನಲ್ಲಿ ಖಳ ನಟ, ಕ್ರೂರಿ ಮನಸ್ಸಿನ ತುಂಬೆಲ್ಲಾ ಕ್ರೌರ್ಯವನ್ನೇ ತುಂಬಿಕೊಂಡಿರೋ ನಟ ಅನ್ನೋ ಪಟ್ಟ ಕಟ್ಟಿಕೊಂಡು ಓಡಾಡಬೇಕಾಗಿದೆ. ಅದಕ್ಕೆ ಕಾರಣ ದರ್ಶನ್ ತನ್ನ ವೈಯಕ್ತಿಕ ಜೀವನಲ್ಲಿ ಅಂಟಿಸಿಕೊಂಡಿರೋ ಹೆಣ್ಣು ಹೆಂಡದ ಚಟ ಎನ್ನಲಾಗುತ್ತಿದೆ.

ಇಷ್ಟು ದಿನ ನಟ ಅನ್ನೋ ಪಟ್ಟದಲ್ಲಿ ಸಾಮ್ರಾಜ್ಯ ಕಟ್ಟಿಕೊಂಡಿದ್ದ ದರ್ಶನ್(Darshan) ಈಗ ಪವಿತ್ರಾ ಗೌಡ ಸಹವಾಸದಿಂದ ಜೈಲು ಸೇರಿದ್ದಾರೆ. ಪವಿತ್ರಾ ಗೌಡಗೆ(Pavitra Gowda) ಕೆಟ್ಟ ಮೆಸೇಜ್ ಕಳಿಸಿದ ಅನ್ನೋ ಒಂದೇ ಕಾರಣಕ್ಕೆ ತನ್ನ ಅಭಿಮಾನಿ ಆಗಿದ್ದ ರೇಣುಕಾಸ್ವಾಮಿಯನ್ನೇ (Renukaswamy) ಕ್ರೂರವಾಗಿ ಕೊಂದ ಆರೋಪ ದರ್ಶನ್ ಮೇಲೆ ಬಂದಿದೆ. ತೆರೆ ಮೇಲಿದ್ದ ಈ ಹೀರೋ ಈಗ ಕಂಬಿ ಹಿಂದೆ ಸೇರಿರೋ ವಿಲನ್ ಆಗಿದ್ದಾರೆ. ಇದನ್ನ ನೋಡಿ ದರ್ಶನ್ಗೆ ನಟನೆ ಹೇಳಿಕೊಟ್ಟ ಮೊದಲು ಗುರು ಅಡ್ಡಂಡ ಕಾರ್ಯಪ್ಪ(Addanda Cariappa) ಸಂಕಟ ಪಡುತ್ತಿದ್ದಾರೆ. ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು. ತಪ್ಪು ಮಾಡಿದ್ರೆ ಶಿಕ್ಷೆ ಅನುಭವಿಸಲೇ ಬೇಕು. ಕಳೆದ ಐದು ದಿನದಿಂದ ಪೊಲೀಸ್ ಕಸ್ಟಡಿಯಲ್ಲಿ ಕಂಬಿ ಹಿಂದೆ ಸೇರಿರೋ ದರ್ಶನ್ಗೆ ಈಗ ತಪ್ಪಿನ ಅರಿವಾಗಿದೆಯಂತೆ. ತಾನು ಮಾಡಿದ ಕೆಲಸಕ್ಕೆ ಪಶ್ಛಾತಾಪ ಪಡುತ್ತಿದ್ದಾರಂತೆ. ದರ್ಶನ್ ಪರಿಚಯಸ್ಥ ಅಧಿಕಾರಿಗಳ ಬಳಿ‌ತಪ್ಪಾಗೋಯ್ತು ಅಂದಿದ್ದಾರೆ. ಕೋತಿ ತಾನು ಕೆಡೋದಲ್ಲದೇ ವನವನ್ನೆಲ್ಲಾ ಕೆಡಿಸಿತು ಅಂತಾರಲ್ಲ. ಆ ಮಾತು ಈ ಡಿ ಗ್ಯಾಂಗ್‌ಗೆ ಪಕ್ಕಾ ಸೂಟ್ ಆಗುತ್ತೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜೊತೆ ಕೈ ಜೋಡಿಸಿದ್ದ ಉಳಿದ ಆರೋಪಿಗಳು ಈಗ ಪಶ್ಚಾತಾಪ ಪಡುತ್ತಿದ್ದಾರಂತೆ. ಅತಿರೇಕದ ಅಭಿಮಾನದಲ್ಲಿ ದರ್ಶನ್ಗೆ ಉಪಕಾರ ಮಾಡಲು ಹೋಗಿ ಹಿಂಬದಿ ಸುಟ್ಟುಕೊಂಡು ಕೂರಲೂ ಆಗದೇ ನಿಲ್ಲಲೂ ಆಗದೆ ಒದ್ದಾಡುತ್ತಿದ್ದಾರಂತೆ. ಯಾಕಂದ್ರೆ ಎ ಒನ್ ಆರೋಪಿ ಪವಿತ್ರಾ ಗೌಡ ಎ 2 ಆರೋಪಿ ದರ್ಶನ್ ಹೊರತು ಪಡಿಸಿ ಉಳಿದ ಆರೋಪಿಗಳ ಸಪೋರ್ಟ್ಗೆ ಯಾರು ಬರುತ್ತಿಲ್ಲವಂತೆ. ಬಾಸ್ ಎಂದು ಜೈ ಕಾರ ಹಾಕಿ ಕಂಬಿ ಹಿಂದೆ ಸೇರಿದವರ ಕುಟುಂಬಗಳು ಈಗ ಕಣ್ಣೀರು ಹಾಕುತ್ತಿವೆ.

ಇದನ್ನೂ ವೀಕ್ಷಿಸಿ:  Weekly-Horoscope: ಈ ರಾಶಿಯವರಿಗೆ ವೃತ್ತಿಯಲ್ಲಿ ವಿಶೇಷ ಅನುಕೂಲವಿದ್ದು, ಹೆಚ್ಚಿನ ವ್ಯಯ ಇದೆ..

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?