Umapati VS Darshan: ದರ್ಶನ್, ಉಮಾಪತಿ ಮಧ್ಯೆ ನಿಲ್ಲದ ವಾರ್! ಉಮಾಪತಿ ಕ್ಷೇತ್ರದಲ್ಲೇ  ರ‍್ಯಾಲಿಗೆ ಸಿದ್ಧರಾಗಿದ್ದ ಫ್ಯಾನ್ಸ್!

Umapati VS Darshan: ದರ್ಶನ್, ಉಮಾಪತಿ ಮಧ್ಯೆ ನಿಲ್ಲದ ವಾರ್! ಉಮಾಪತಿ ಕ್ಷೇತ್ರದಲ್ಲೇ ರ‍್ಯಾಲಿಗೆ ಸಿದ್ಧರಾಗಿದ್ದ ಫ್ಯಾನ್ಸ್!

Published : Feb 27, 2024, 09:56 AM IST

ನಿರ್ಮಾಪಕ ಅನ್ನದಾನ ಅನ್ನೋದು ಅಣ್ಣಾವ್ರ ಕಾಲಕ್ಕೆ ಮುಗಿದು ಹೋದಂತಿದೆ. ಈಗ ಹೀರೋಗಳೇ ನಿರ್ಮಾಪರಿಗೆ ಅನ್ನದಾತರು ಅನ್ನೋ ಹಾಗೆ ವರ್ತಿಸುತ್ತಿದ್ದಾರೆ. ಈ ಮಾತನ್ನ ನಾವ್ ಹೇಳ್ತಿಲ್ಲ. ನಿರ್ಮಾಪಕ ಉಮಾಪತಿ ಬಗ್ಗೆ ನಟ ದರ್ಶನ್ ಆಡಿರೋ ಮಾತುಗಳನ್ನ ಕೇಳಿ ಸ್ಯಾಂಡಲ್‌ವುಡ್ ಮಂದಿಯೇ ಹೇಳುತ್ತಿರೋ ಮಾತು.

ಉಮಾಪತಿ ದರ್ಶನ್ ಮಧ್ಯೆ ವಾರ್ ಹೇಗೆಲ್ಲಾ ನಡೆಯುತ್ತಿದೆ ಅನ್ನೋ ಅಪ್‌ಡೇಟ್ ನಿಮ್ಮ ಮುಂದೆ ಇಟ್ಟಿದ್ದೇವೆ. ಇದೀಗ ಇವರಿಬ್ಬರ ಟಾಕ್ ವಾರ್ ಇಲ್ಲಿಗೆ ನಿಂತಿಲ್ಲ. ಇಬ್ಬರ ಮಧ್ಯೆ ಅಭಿಮಾನಿಗಳು ಎಂಟ್ರಿ ಕೊಟ್ಟಿದ್ದಾರೆ. ನಿರ್ಮಾಪಕ ಉಮಾಪತಿ(Producer Umapati) ಯಾರಿಗೂ ಬಗ್ಗೋ ಜಗ್ಗೋ ಪ್ರೊಡ್ಯೂಸರ್ ಅಲ್ಲ. ಹೀರೋಗಳ ಮೇಲೆ ಹಣ ಹಾಕಿ ಸಿನಿಮಾ ಮಾಡೋ ನಿರ್ಮಾಪಕರಾರು ಹೀರೋಗಳಿಗೆ ಹೆದರಿ ಬೆದರಿ ಇರೋ ಅವಶ್ಯಕತೆಯೂ ಇಲ್ಲ. ಯಾಕಂದ್ರೆ ಪ್ರೊಡ್ಯೂಸರ್ ಆದವನು ನಿಜಕ್ಕೂ ಅನ್ನದಾತನೆ. ಒಂದ್ ಸಿನಿಮಾ ಬಂದ್ರೆ ನೂರಾರು ಜನರಿಗೆ ಕೆಲಸ ಸಿಗುತ್ತೆ. ಹತ್ತಾರು ಕುಟುಂಬಗಳು ಊಟ ಮಾಡ್ತಾರೆ. ಆದ್ರೆ ಅದ್ಯಾವು ಕೌಂಟ್ಗೆ ಬರೋಲ್ಲ. ಹೀಗಾಗಿ ನಟ ದರ್ಶನ್(Actor Darshan) ಹಾಗು ನಿರ್ಮಾಪಕ ಉಮಾಪತಿ ಮಧ್ಯೆ ಫೈಟ್ ಶುರುವಾಗಿದ್ದು, ಈಗ ಈ ವಾರ್‌ಗೆ ನಟ ದರ್ಶನ್ ಅಭಿಮಾನಿಗಳು(Fans) ಡೈರೆಕ್ಟ್ ಆಗೆ ಎಂಟ್ರಿ ಕೊಡೋಕೆ ರೆಡಿಯಾಗಿದ್ರು. ನಟ ದರ್ಶನ್ ರ 1000 ಜನ ಅಭಿಮಾನಗಳು ಉಮಾಪತಿ ಕ್ಷೇತ್ರ ಬೊಮ್ಮನ ಹಳ್ಳಿಯಲ್ಲಿ ಬೈಕ್ ರಾಲಿ ಮ್ಯಾಡಿ ಉಮಾಪತಿ ವಿರುದ್ಧ ಘೋಷಣೆ ಕೂಗಲು ಸಿದ್ಧರಾಗಿದ್ರು. ಈ ರ‍್ಯಾಲಿಯಲ್ಲಿ(Bike Ralley) ನಟ ದರ್ಶನ್ ಕೂಡ ಭಾಗಿ ಆಗ್ತಾರೆ ಅಂತ ಹೇಳಲಾಗಿತ್ತು. ಆದ್ರೆ ಸೇರಿಗೆ ವಾರಾ ಸೇರು ಅನ್ನೋ ಹಾಗೆ ಉಮಾಪತಿ ಅವರ 10 ಸಾವಿರ ಜನ ಬೆಂಬಲಿಗರು ದರ್ಶನ್ ವಿರುದ್ಧ ಬೈಕ್ ರಾಲಿಗೆ ಸಿದ್ಧರಾಗಿದ್ರು. ಆದ್ರೆ ಈ ಗಲಾಟೆ ಬೇರೆಯದ್ದೇ ರೂಪ ಪಡೆಯುತ್ತೆ ಅಂತ ದರ್ಶನ್ ಫ್ಯಾನ್ಸ್ ಮಾಡೋಕೆ ಹೊರಟಿದ್ದ ರ‍್ಯಾಲಿಗೆ ಬೊಮ್ಮನಹಳ್ಳಿ ಪೊಲೀಸರು ಅನುಮಪತಿ ಕೊಟ್ಟಿಲ್ಲ. ಹೀಗಾಗಿ ದರ್ಶನ್ ಬೈಕ್ ರ‍್ಯಾಲಿ ಕ್ಯಾನ್ಸಲ್ ಆಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಈ ದಿನ ಶುಭಕಾರ್ಯಗಳಿಗೆ ಉತ್ತಮವಾಗಿದ್ದು, ಮುತ್ತೈದೆಯರನ್ನ ಮನೆಗೆ ಕರೆದು ಮಂಗಲ ದ್ರವ್ಯಗಳ ದಾನ ಮಾಡಿ..

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!