Darshan: ಜೈಲಿನಲ್ಲಿ ಬಯಲಾಯ್ತು ದರ್ಶನ್ ವಿಗ್ ಸ್ಟೋರಿ! 'ಶಿವಾಜಿ' ಲುಕ್‌ನಲ್ಲಿ  ಮೊಟ್ಟೆ ಬಾಸ್ ಆದ ನಟ ?

Darshan: ಜೈಲಿನಲ್ಲಿ ಬಯಲಾಯ್ತು ದರ್ಶನ್ ವಿಗ್ ಸ್ಟೋರಿ! 'ಶಿವಾಜಿ' ಲುಕ್‌ನಲ್ಲಿ ಮೊಟ್ಟೆ ಬಾಸ್ ಆದ ನಟ ?

Published : Jul 17, 2024, 09:09 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿಗೆ ಹೋಗಿರುವ ದರ್ಶನ್ ಈಗಾಗಲೇ 1 ತಿಂಗಳಿಂದ ಜೈಲಲ್ಲಿ ಕಂಬಿ ಎಣಿಸುತ್ತಿದ್ದಾರೆ. ಜೈಲೂಟ ಸೇರದೆ ನಿದ್ದೆ ಬಾರದೆ ಏಕಾಂಗಿಯಾಗಿ ಒದ್ದಾಡುತ್ತಿದ್ದಾರೆ.

ದರ್ಶನ್‌ರನ್ನು ಇಲ್ಲಿಯವರೆಗೆ ಮೂರ್ನಾಲ್ಕು ಬಾರಿ ಜೈಲಲ್ಲಿ ಭೇಟಿಯಾಗಿರೋ ವಿಜಯಲಕ್ಷ್ಮೀ ದರ್ಶನ್(Vijayalakshmi) ಈಗ ಮತ್ತೊಮ್ಮೆ ಭೇಟಿಯಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ(Parappana Agrahara) ದರ್ಶನ್‌ರನ್ನು ಭೇಟಿಯಾಗಿರೋ ವಿಜಯಲಕ್ಷ್ಮಿ ದರ್ಶನ್‌ಗೆ(Darshan) ಜಾಮೀನು ಸಿಗುವುದು ಸದ್ಯ ಬಹಳ ಕಷ್ಟ ಎಂದಿದ್ದಾರಂತೆ. ಇದು ದರ್ಶನ್ ನುಂಗಲಾರದ ತುತ್ತಾಗಿದೆ. ಲಾಯರ್‌ನ ಬದಲಿಸ್ತೀಯೋ.. ಕೋಟಿ ಕೋಟಿ ಹಣ ಅವರಿಗೆ ಕೊಡ್ತೀಯೋ ಒಟ್ಟಿನಲ್ಲಿ ನಾನು ಆಚೆ ಬರಬೇಕಷ್ಟೆ. ಬೇಗ ಜಾಮೀನು(Bail) ಸಿಗುವಂತೆ ಮಾಡು ಎಂದು  ಪತ್ನಿಯ ಮೇಲೆ ಒತ್ತಡ ಹೇರುತ್ತಿದ್ದಾರಂತೆ ದರ್ಶನ್. ದರ್ಶನ್ ಹೊಡೆದಾಗ ಹೊಡೆಸಿಕೊಂಡು, ನಟಿಯರ ಜೊತೆ ಅಫೇರ್ ಇಟ್ಟುಕೊಂಡಾಗಲೂ ಸಹಿಸಿಕೊಂಡು, ದರ್ಶನ್‌ಗೆ ಅಪಘಾತವಾದಾಗಲೂ ಆಸ್ಪತ್ರೆಗೆ ಹೋಗಿ ಅವರನ್ನು ನೋಡಿಕೊಂಡು ಒಬ್ಬ ಧರ್ಮ ಪತ್ನಿ ಎಷ್ಟೆಲ್ಲಾ ಸಹಿಸಿಕೊಳ್ಳಬಹುದೊ ಅಷ್ಟೂ ಮಾಡುತ್ತಾ ಇದೀಗ ಪವಿತ್ರ ಗೌಡಗಾಗಿ ಕೊಲೆಗೆ ಸಂಚು ರೂಪಿಸಿ ಜೈಲಿಗೆ ಹೋದಾಗಲೂ ಪತಿಯನ್ನು ಕಾಪಾಡಿಕೊಳ್ಳಲು ವಿಜಯಲಕ್ಮೀ ದರ್ಶನ್ ತನ್ನೆಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ದರ್ಶನ್ನನ್ನು ಜೈಲಿಂದ ಬಿಡಿಸಲು ಎಷ್ಟೆ ಪ್ರಯತ್ನ ಪಟ್ಟರು ಎಲ್ಲ ಕಡೆಯಿಂದಲೂ ಹಿನ್ನಡೆಯಾಗುತ್ತಿರುವ ಬಗ್ಗೆ ವಿಜಯಲಕ್ಮಿ ದರ್ಶನ್ಗೆ ತಿಳಿಸಿದಾಗ ದರ್ಶನ್ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ ಎನ್ನಲಾಗಿದೆ. ದರ್ಶನ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಜೈಲಿನಲ್ಲಿ ದರ್ಶನ್ ದರ್ಪ, ದೌಲತ್ತಿಗೆ ಲಗಾಮು ಬಿದ್ದಿದೆ. ಇದೀಗ ಅವರ ಕೃತಕ ಕೂದಲಿಗೂ ಕತ್ತರಿ ಬಿದ್ದಿದೆ ಎನ್ನುವಂತಹ ಸಂಗತಿ ತಿಳಿದು ಬಂದಿದೆ. ಇದರಿಂದ ದರ್ಶನ್ ವಿಗ್ ಸ್ಟೋರಿ ಗೊತ್ತಿಲ್ಲದವರಿಗೂ ತಿಳಿಯುವಂತಾಗಿದೆ. ತುಂಬಾ ಜನರಿಗೆ ಗೊತ್ತಿಲ್ಲದ ವಿಚಾರ ಅಂದರೆ ದರ್ಶನ್ ತಲೆ ಕೂದಲು ವರ್ಜಿನಲ್ ಅಲ್ಲ ಅನ್ನೋದು. 

ಇದನ್ನೂ ವೀಕ್ಷಿಸಿ:  ಫಾಸ್ಟ್ ಟ್ರ್ಯಾಕ್ ಕೋರ್ಟ್‌ ಮನವಿಗೆ ಪೊಲೀಸರ ನಿರ್ಧಾರ.. ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ಮನವಿ ಮಾಡುವ ಸಾಧ್ಯತೆ

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?