Mandya: ಮತ್ತೆ ಶುರುವಾಯ್ತು ಸಕ್ಕರೆ ನಾಡು ಚುನಾವಣೆ ಹೀಟು..! ಈ ಭಾರಿ ಮತ್ತೆ ಮಂಡ್ಯಕ್ಕೆ ಬರುತ್ತಾರಾ ಜೋಡೆತ್ತು..?

Mandya: ಮತ್ತೆ ಶುರುವಾಯ್ತು ಸಕ್ಕರೆ ನಾಡು ಚುನಾವಣೆ ಹೀಟು..! ಈ ಭಾರಿ ಮತ್ತೆ ಮಂಡ್ಯಕ್ಕೆ ಬರುತ್ತಾರಾ ಜೋಡೆತ್ತು..?

Published : Feb 27, 2024, 10:10 AM ISTUpdated : Feb 27, 2024, 10:11 AM IST

ಕಳೆದ ಲೋಕಸಭೆ ಚುನಾವಣೆ ವೇಳೆ ಇಡೀ ದೇಶದ್ದು ಒಂದು ಚರ್ಚೆ ಆದ್ರೆ, ಮಂಡ್ಯ ಕ್ಷೇತ್ರದ್ದು ಮಾತ್ರ ಬೇರೆ ಲೆವೆಲ್ನಲ್ಲಿತ್ತು. ಯಾಕಂದ್ರೆ ಅಂದು ನಟಿ ಸುಮಲತಾ ಸ್ವಾಭಿಮಾನದ ಸೆರಗೊಡ್ಡಿ ಮತ ಭಿಕ್ಷೆ ಕೇಳಿದ್ರು. ಇವರ ಜೊತೆ ನಟ ದರ್ಶನ್, ಯಶ್ ಕೂಡ ಸುಮಕ್ಕನನ್ನ ಗೆಲ್ಲಿಸಿ ಅಂತ ಮತದಾರರಲ್ಲಿ ಬೇಡಿದ್ರು.

ಮಂಡ್ಯ ಲೋಕಸಭೆ ಬಿಸಿ ನಿಧಾನಕ್ಕೆ ಹೆಚ್ಚಾಗ್ತಿದೆ. ಮಂಡ್ಯ ಸಂಸದೆ ಸುಮಲತಾಗೆ(Sumalatha) ಬಿಜೆಪಿ ಪಕ್ಷದಿಂದ ಮಂಡ್ಯದಲ್ಲೇ ಸ್ಪರ್ಧೆ ಮಾಡಿ ಅಂತ ಬೆಂಬಲಿಗರು ಬೆನ್ನಿಗೆ ಬಿದ್ದಿದ್ದಾರೆ. ಸುಮಲತಾ ಕೂಡ ನಾನು ಮಂಡ್ಯ(Mandya) ಬಿಟ್ಟು ಹೋಗಲ್ಲ. ಈ ಭಾರಿ ಬಿಜೆಪಿ(BJP) ಪಕ್ಷದಿಂದ ಮಂಡ್ಯ ಕ್ರೇತ್ರ ಪ್ರತಿನಿಧಿಸೋ ಆಸೆ ಇದೆ. ಹೀಗಾಗಿ ಟಿಕೆಟ್(Ticket) ಕೇಳುತ್ತಿದ್ದೇನೆ ಎಂದಿದ್ದಾರೆ. ಸುಮಕ್ಕ ಮಂಡ್ಯದಲ್ಲಿ ಗೆಲುವಿನ ಸಕ್ಕೆರೆ ಸವಿಯೋಕೆ ಪ್ಲ್ಯಾನ್ ಮಾಡಿಕೊಳ್ಳುತ್ತಿದ್ದಂತೆ ಆ ಕಡೆ ಮತ್ತೆ ಜೋಡೆತ್ತುಗಳ ಗುಟುರು ಕೇಳಿಸುತ್ತಿದೆ. ಈ ಭಾರಿ ಮತ್ತೆ ಮಂಡ್ಯಕ್ಕೆ ಬರುತ್ತಾರಾ ಜೋಡೆತ್ತುಗಳು ಅನ್ನೋ ಟಾಕ್ ಶುರುವಾಗಿದೆ. ಕರ್ನಾಟಕದಲ್ಲಿ ರಾಜ್ಯದ ಜನರ ಚಿತ್ತ ಮತ್ತೊಮ್ಮೆ ಮಂಡ್ಯದತ್ತ ಹರಿದಿದೆ. ಕಳೆದ ಬಾರಿ ನಿಖಿಲ್ ಕುಮಾರಸ್ವಾಮಿ ಹಾಗೂ ಸುಮಲತಾ ನಡುವೆ ಭರ್ಜರಿ ಪೈಪೋಟಿ ನಡೆದು ಸ್ವತಂತ್ರ್ಯ ಅಭ್ಯರ್ಥಿಯಾಗಿದ್ದ ಸುಮಲತಾ ಜಯಭೇರಿ ಭಾರಿಸಿದ್ರು. ಇದಕ್ಕೆ ಕಾರಣ ಆಗಿದ್ದು ಜೋಡೆತ್ತುಗಳಾದ ಯಶ್ ಮತ್ತು ದರ್ಶನ್. ಸುಮಲತಾ ಪರ ಅಬ್ಬರದ ಪ್ರಚಾರ ಮಾಡಿದ್ದ ದರ್ಶನ್(Darshan) ಯಶ್(Yash) ಮಂಡ್ಯ ಜನರ ಮುಂದೆ ಸುಮಕ್ಕನ ಪರ ಭರ್ಜರಿ ಡೈಲಾಗ್ ಹೊಡೆದಿದ್ರು. ಈ ಭಾರಿಯೂ ನಟ ದರ್ಶನ್ ಸುಮಲತಾ ಪರ ನಿಂತಿದ್ದಾರೆ. ಹೀಗಾಗೆ ನಟ ದರ್ಶನ್ ಜೆಪಿ ನಗರದಲ್ಲಿರೋ ಸುಮಲತಾ ಮನೆಗೆ ಭೇಟಿ ನೀಡಿ ಎಲೆಕ್ಷನ್ ಬಗ್ಗೆ ಚರ್ಚೆ ಮಾಡಿದ್ದಾರೆ. ಈ ಭಾರಿಯೂ ನಟ ದರ್ಶನ್ ನನ್ನ ಜತೆ ಪ್ರಚಾರಕ್ಕೆ ಬರುತ್ತಾರೆ ಅಂತ ಸುಮಲತಾ ಓಪನ್ ಸ್ಟೇಟ್ಮೆಂಟ್ ಕೊಟ್ಟಿದ್ದಾರೆ. ಆದ್ರೆ ಯಶ್ ಜತೆ ಇನ್ನೂ ಚರ್ಚಿಸಿಲ್ಲ. ಅವರನ್ನೂ ಕರೆದುಕೊಂಡು ಬರೋ ಪ್ಲಾನ್ ಮಾಡುತ್ತೇನೆ ಎಂದಿದ್ದಾರೆ. 

ಇದನ್ನೂ ವೀಕ್ಷಿಸಿ:  Umapati VS Darshan: ದರ್ಶನ್, ಉಮಾಪತಿ ಮಧ್ಯೆ ನಿಲ್ಲದ ವಾರ್! ಉಮಾಪತಿ ಕ್ಷೇತ್ರದಲ್ಲೇ ರ‍್ಯಾಲಿಗೆ ಸಿದ್ಧರಾಗಿದ್ದ ಫ್ಯಾನ್ಸ್!

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
Read more