Dhool Yebsava Song: 'ಗೌರಿ' ಚಿತ್ರದ ಜವಾರಿ ಶೈಲಿಯ ಧೂಳ್ ಎಬ್ಬಿಸಾವ ಸಾಂಗ್ ರಿಲೀಸ್..!

Dhool Yebsava Song: 'ಗೌರಿ' ಚಿತ್ರದ ಜವಾರಿ ಶೈಲಿಯ ಧೂಳ್ ಎಬ್ಬಿಸಾವ ಸಾಂಗ್ ರಿಲೀಸ್..!

Published : Jun 16, 2024, 10:29 AM ISTUpdated : Jun 16, 2024, 10:30 AM IST

ನಟ ಸಮರ್ಜಿತ್ ಲಂಕೇಶ್ ಹಾಗೂ ಸಾನ್ಯ ಅಯ್ಯರ್ ನಟಿಸಿರುವ 'ಗೌರಿ' ಚಿತ್ರದ ಧೂಳ್ ಎಬ್ಬಿಸಾವ' ಹಾಡು ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಬಿಡುಗಡೆಗೊಂಡಿದೆ. 

ಇಂದ್ರಜಿತ್ ಲಂಕೇಶ್ ನಿರ್ದೇಶನದ, ನಾಯಕ ನಟ ಸಮರ್ಜಿತ್ ಲಂಕೇಶ್ ಹಾಗೂ ಸಾನ್ಯ ಅಯ್ಯರ್(Sanya Iyer) ನಟಿಸಿರುವ ಗೌರಿ' ಚಿತ್ರದ(Gauri movie) ಧೂಳ್ ಎಬ್ಬಿಸಾವ' ಹಾಡು(Dhool Yebsava Song) ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಬಿಡುಗಡೆಗೊಂಡಿದೆ. ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯ(Hubli) ಜವಾರಿ ಭಾಷಾ ಶೈಲಿಯ ಹಾಡಿಗೆ ನಾಯಕ ನಟ ಸಮರ್ಜಿತ್ ಲಂಕೇಶ್ (Samarjit Lankesh) ಹಾಗೂ ಖ್ಯಾತ ನಟಿ ಸಂಜನಾ ಆನಂದ್ ಜಬರ್ದಸ್ತ್ ಆಗಿ ನೃತ್ಯ ಮಾಡಿದ್ದಾರೆ. ಅನಿರುದ್ಧ್ ಶಾಸ್ತ್ರೀ, ಅನನ್ಯ ಭಟ್ ಹಾಡಿರುವ ಈ ಹಾಡಿಗೆ ಶಿವು ಬೆರ್ಗಿಯವರು ಸಾಹಿತ್ಯ ಬರೆದು, ಸಂಗೀತ ಸಂಯೋಜಿಸಿದ್ದಾರೆ. ಭಜರಂಗಿ ಮೋಹನ್ ಈ ಹಾಡಿಗೆ ನೃತ್ಯ ಸಂಯೋಜಿಸಿದ್ದಾರೆ. ಈಗಾಗಲೇ ಧೂಳ್ ಎಬ್ಬಿಸಾವ..' ಸಾಂಗ್ ಸಖತ್ ವೈರಲ್ ಆಗುವ ಮೂಲಕ ಜನಮನ ಸೂರೆಗೊಂಡಿದೆ. ನೈಜ ಘಟನೆ ಆಧರಿಸಿ ದೊಡ್ಡ ಬಜೆಟ್‌ನಲ್ಲಿ ಸಿನಿಮಾ ಮಾಡಿದ್ದು, ಬೆಂಗಳೂರು, ಚಿಕ್ಕಮಗಳೂರು ಸೇರಿ ರಾಜ್ಯದ ವಿವಿಧೆಡೆ ಚಿತ್ರೀಕರಣ ಮಾಡಲಾಗಿದೆ. ಅಕ್ಕ ಗೌರಿಯ ಅವರ ಮೇಲಿನ ಅಭಿಮಾನದಿಂದ ಇಂದ್ರಜಿತ್ ಲಂಕೇಶ್ ಅವರು ಈ ಚಿತ್ರಕ್ಕೆ ಅಕ್ಕನ ಹೆಸರಿಟ್ಟಿದ್ದಾರೆ. ಯುವ ನಟ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದಾರೆ. ಪ್ರಿಯಾಂಕ ಉಪೇಂದ್ರ, ವಸುಂಧರಾ ದಾಸ್, ಲೂಸ್ ಮಾದ ಯೋಗಿ, ಅಕುಲ್ ಬಾಲಾಜಿ, ಸಿಹಿ ಕಹಿ ಚಂದ್ರು, ಮುಖ್ಯಮಂತ್ರಿ ಚಂದ್ರು, ಕಾಂತಾರ ಖ್ಯಾತಿಯ ಮಾಲತಿ ಸುಧೀರ್, ಕೆಜಿಎಫ್ ಖ್ಯಾತಿಯ ಸಂಪತ್ ಮೈತ್ರೇಯ, ಚಂದುಗೌಡ ಸೇರಿದಂತೆ ಬಹುದೊಡ್ಡ ತಾರಾಗಣವೇ ಈ ಚಿತ್ರದಲ್ಲಿದೆ.

ಇದನ್ನೂ ವೀಕ್ಷಿಸಿ:  Kannappa Teaser: ‘ಬೇಡರ ಕಣ್ಣಪ್ಪ’ನ ಕತೆಯನ್ನೇ ತಿರುಚಿದ್ರಾ? ಸಿನಿಮಾ ಟೀಸರ್‌ ಬಿಡುಗಡೆ..ಸಿನಿಮಾಭಿಮಾನಿಗಳು ಹೇಳಿದ್ದೇನು?

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!