ಎರಡನೇ ವಾರವೂ ಭರ್ಜರಿ ಪ್ರದರ್ಶನದಲ್ಲಿ ಕೆರೆಬೇಟೆ !ಸಿನಿಮಾ ನೋಡಿ ಖುಷಿ ಪಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ..!

ಎರಡನೇ ವಾರವೂ ಭರ್ಜರಿ ಪ್ರದರ್ಶನದಲ್ಲಿ ಕೆರೆಬೇಟೆ !ಸಿನಿಮಾ ನೋಡಿ ಖುಷಿ ಪಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ..!

Published : Mar 22, 2024, 12:19 PM IST

ಕೆರೆಬೇಟೆ ಸದ್ಯ ಸ್ಯಾಂಡಲ್‌ವುಡ್‌ ಬೆಳ್ಳಿತೆರೆ ಮೇಲೆ ಟ್ರೆಂಡಿಂಗ್‌ನಲ್ಲಿರೋ ಸಿನಿಮಾ. ಕಳೆದ ವಾರ ಬಿಡುಗಡೆ ಅಗಿದ್ದ ಅಪ್ಪಟ ಮಲೆನಾಡ ಕತೆಯ ಕೆರೆಬೇಟೆ ಸಿನಿಮಾ ನೋಡಿದ ಮಂದಿಯಿಂದ ಬೆಸ್ಟ್ ರಿವ್ಯೂ ಸಿಕ್ಕಿದೆ. ಇದೇ ಕಾರಣಕ್ಕೆ ಕೆರೆಬೇಟೆ ರಿಲೀಸ್ ಆದ ಚಿತ್ರಮಂದಿರಗಳ ಸಂಖ್ಯೆಯೂ ಹೆಚ್ಚಾಗಿದೆ.
 

ಈ ಕೆರೆಬೇಟೆ ಸಿನಿಮಾ ಎರಡನೇ ವಾರವೂ ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಕೆರೆಬೇಟೆ(Kerebete Movie) ಬಗ್ಗೆ ಜನ ಮಾತಾಡಿಕೊಂಡಿದ್ದನ್ನ ಕೇಳಿ ನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ(Dhruva Sarja) ಕೂಡ ಥಿಯೇಟರ್ಗೆ ಬಂದು ಸಿನಿಮಾ ನೋಡಿದ್ದಾರೆ. 'ಮಾರ್ಟಿನ್' ಸಿನಿಮಾದ ನಿರ್ದೇಶಕ ಎ ಪಿ ಅರ್ಜುನ್ ಹಾಗೂ ಧ್ರುವ ಸರ್ಜಾ ಇಬ್ಬರೂ ಜೊತೆಯಾಗಿ ಸಿನಿಮಾವನ್ನು ನೋಡಿದ್ದಾರೆ. ಬಳಿಕ ಮಾಧ್ಯಮಗಳಿಗೆ 'ಕೆರೆಬೇಟೆ' ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಕೆರೆಬೇಟೆ ಅದ್ಭುತ ಕಂಟೆಂಟ್ ಸಿನಿಮಾ. ಸಿನಿಮಾದ ಕತೆ ಸ್ಕ್ರೀನ್ ಪ್ಲೇ ಹಾಡುಗಳು ನಟನೆ ಮಜವಾಗಿದೆ. ಈ ಸಿನಿಮಾವನ್ನ ಎಲ್ಲರೂ ಚಿತ್ರಮಂದಿರಲ್ಲೇ ನೋಡಿ ಎಂದಿದ್ದಾರೆ. ಕೆರೆಬೇಟೆ ಸಿನಿಮಾ ಧ್ರುವ ಮನಸ್ಸು ಮಾತ್ರ ಗೆದ್ದಿಲ್ಲ. ನಟ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ವಿಕ್ರಂ ರವಿಚಂದ್ರನ್, ನಿರ್ದೇಶಕ ಸಿಂಪಲ್ ಸುನಿ ಕೂಡ ಈ ಸಿನಿಮಾ ನೋಡಿ ಎಂಜಾಯ್ ಮಾಡಿದ್ದಾರೆ.  ಗೌರಿಶಂಕರ್ ನಾಯಕನಾಗಿ ನಟಿಸಿರೋ 'ಕೆರೆಬೇಟೆ' ಸಿನಿಮಾ ಅಪ್ಪಟ ದೇಸಿ ಸಿನಿಮಾ. ಮಲೆನಾಡಿನ ಭಾಗದ ಸುಂದರ ತಾಣಗಳ ಜೊತೆ ಮನಕಲುಕುವ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ರಾಜ್‌ಗುರು ನಿರ್ದೇಶನದ ಕೆರೆಬೇಟೆಯಲ್ಲಿ ಗೌರಿಶಂಕರ್ಗೆ ನಾಯಕಿಯಾಗಿ ಬಿಂದು ನಟಿಸಿದ್ದಾರೆ. ಸಧ್ಯ ಪ್ರೇಕ್ಷಕರಿಂದ ಒಳ್ಳೆ ಪ್ರಶಂಸೆ ಪಡೆಯುತ್ತಿರೋ ಕೆರೆಬೇಟೆ ಸಿನಿಮಾವನ್ನ ಈಗ ಕನ್ನಡ ಚಿತ್ರರಂಗದ ತಾರೆಯರೂ ನೋಡಿ ಖುಷಿ ಪಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಮೂಲ ಬೇರು ಮರೆತಿಲ್ಲ ಅಣ್ಣಾವ್ರ ಮೊಮ್ಮಗ..!ಗಾಜನೂರಿನ ಅಣ್ಣಾವ್ರ ಮನೆಯಲ್ಲಿ ಯುವ ಸಂದರ್ಶನ..!

05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
Read more