ಎರಡನೇ ವಾರವೂ ಭರ್ಜರಿ ಪ್ರದರ್ಶನದಲ್ಲಿ ಕೆರೆಬೇಟೆ !ಸಿನಿಮಾ ನೋಡಿ ಖುಷಿ ಪಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ..!

ಎರಡನೇ ವಾರವೂ ಭರ್ಜರಿ ಪ್ರದರ್ಶನದಲ್ಲಿ ಕೆರೆಬೇಟೆ !ಸಿನಿಮಾ ನೋಡಿ ಖುಷಿ ಪಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ..!

Published : Mar 22, 2024, 12:19 PM IST

ಕೆರೆಬೇಟೆ ಸದ್ಯ ಸ್ಯಾಂಡಲ್‌ವುಡ್‌ ಬೆಳ್ಳಿತೆರೆ ಮೇಲೆ ಟ್ರೆಂಡಿಂಗ್‌ನಲ್ಲಿರೋ ಸಿನಿಮಾ. ಕಳೆದ ವಾರ ಬಿಡುಗಡೆ ಅಗಿದ್ದ ಅಪ್ಪಟ ಮಲೆನಾಡ ಕತೆಯ ಕೆರೆಬೇಟೆ ಸಿನಿಮಾ ನೋಡಿದ ಮಂದಿಯಿಂದ ಬೆಸ್ಟ್ ರಿವ್ಯೂ ಸಿಕ್ಕಿದೆ. ಇದೇ ಕಾರಣಕ್ಕೆ ಕೆರೆಬೇಟೆ ರಿಲೀಸ್ ಆದ ಚಿತ್ರಮಂದಿರಗಳ ಸಂಖ್ಯೆಯೂ ಹೆಚ್ಚಾಗಿದೆ.
 

ಈ ಕೆರೆಬೇಟೆ ಸಿನಿಮಾ ಎರಡನೇ ವಾರವೂ ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಕೆರೆಬೇಟೆ(Kerebete Movie) ಬಗ್ಗೆ ಜನ ಮಾತಾಡಿಕೊಂಡಿದ್ದನ್ನ ಕೇಳಿ ನಟ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ(Dhruva Sarja) ಕೂಡ ಥಿಯೇಟರ್ಗೆ ಬಂದು ಸಿನಿಮಾ ನೋಡಿದ್ದಾರೆ. 'ಮಾರ್ಟಿನ್' ಸಿನಿಮಾದ ನಿರ್ದೇಶಕ ಎ ಪಿ ಅರ್ಜುನ್ ಹಾಗೂ ಧ್ರುವ ಸರ್ಜಾ ಇಬ್ಬರೂ ಜೊತೆಯಾಗಿ ಸಿನಿಮಾವನ್ನು ನೋಡಿದ್ದಾರೆ. ಬಳಿಕ ಮಾಧ್ಯಮಗಳಿಗೆ 'ಕೆರೆಬೇಟೆ' ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಕೆರೆಬೇಟೆ ಅದ್ಭುತ ಕಂಟೆಂಟ್ ಸಿನಿಮಾ. ಸಿನಿಮಾದ ಕತೆ ಸ್ಕ್ರೀನ್ ಪ್ಲೇ ಹಾಡುಗಳು ನಟನೆ ಮಜವಾಗಿದೆ. ಈ ಸಿನಿಮಾವನ್ನ ಎಲ್ಲರೂ ಚಿತ್ರಮಂದಿರಲ್ಲೇ ನೋಡಿ ಎಂದಿದ್ದಾರೆ. ಕೆರೆಬೇಟೆ ಸಿನಿಮಾ ಧ್ರುವ ಮನಸ್ಸು ಮಾತ್ರ ಗೆದ್ದಿಲ್ಲ. ನಟ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ವಿಕ್ರಂ ರವಿಚಂದ್ರನ್, ನಿರ್ದೇಶಕ ಸಿಂಪಲ್ ಸುನಿ ಕೂಡ ಈ ಸಿನಿಮಾ ನೋಡಿ ಎಂಜಾಯ್ ಮಾಡಿದ್ದಾರೆ.  ಗೌರಿಶಂಕರ್ ನಾಯಕನಾಗಿ ನಟಿಸಿರೋ 'ಕೆರೆಬೇಟೆ' ಸಿನಿಮಾ ಅಪ್ಪಟ ದೇಸಿ ಸಿನಿಮಾ. ಮಲೆನಾಡಿನ ಭಾಗದ ಸುಂದರ ತಾಣಗಳ ಜೊತೆ ಮನಕಲುಕುವ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ರಾಜ್‌ಗುರು ನಿರ್ದೇಶನದ ಕೆರೆಬೇಟೆಯಲ್ಲಿ ಗೌರಿಶಂಕರ್ಗೆ ನಾಯಕಿಯಾಗಿ ಬಿಂದು ನಟಿಸಿದ್ದಾರೆ. ಸಧ್ಯ ಪ್ರೇಕ್ಷಕರಿಂದ ಒಳ್ಳೆ ಪ್ರಶಂಸೆ ಪಡೆಯುತ್ತಿರೋ ಕೆರೆಬೇಟೆ ಸಿನಿಮಾವನ್ನ ಈಗ ಕನ್ನಡ ಚಿತ್ರರಂಗದ ತಾರೆಯರೂ ನೋಡಿ ಖುಷಿ ಪಡುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ಮೂಲ ಬೇರು ಮರೆತಿಲ್ಲ ಅಣ್ಣಾವ್ರ ಮೊಮ್ಮಗ..!ಗಾಜನೂರಿನ ಅಣ್ಣಾವ್ರ ಮನೆಯಲ್ಲಿ ಯುವ ಸಂದರ್ಶನ..!

08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
Read more