ರವಿಚಂದ್ರನ್ ಪ್ರಕಟಿಸುವ ನಿರ್ಧಾರಕ್ಕೆ ಬದ್ಧರಾಗ್ತಾರಾ ಸುದೀಪ್-ಕುಮಾರ್ ?

ರವಿಚಂದ್ರನ್ ಪ್ರಕಟಿಸುವ ನಿರ್ಧಾರಕ್ಕೆ ಬದ್ಧರಾಗ್ತಾರಾ ಸುದೀಪ್-ಕುಮಾರ್ ?

Published : Jul 23, 2023, 02:44 PM IST

ಚಿತ್ರರಂಗದ ಸಮಸ್ಯೆ ಬಗೆಹರಿಸ್ತಾರಾ ಕ್ರೇಜಿಸ್ಟಾರ್..?
ಸುದೀಪ್-ಕುಮಾರ್ ವಿವಾದಕ್ಕೆ ಸಿಗಲಿದೆಯಾ ಉತ್ತರ
ಕ್ರೇಜಿಸ್ಟಾರ್ ನಿರ್ಧಾರಕ್ಕೆ ಓಕೆ ಅಂತಾರಾ ಇಬ್ಬರು ?

ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ  ಅಲ್ಲೋ ಕಲ್ಲೋಲ ಸೃಷ್ಟಿಸಿದ ಕಿಚ್ಚ ಸುದೀಪ್(Actor Sudeep) ಮತ್ತು ಎನ್‌. ಕುಮಾರ್(N Kumar) ವಿವಾದ. ನಟ ನಿರ್ಮಾಪಕರ ನಡುವಿನ ಜಟಾಪಟಿ ಕೋರ್ಟ್ ಮೆಟ್ಟಿಲೇರಿದೆ. ಮತ್ತೊಂದು ಕಡೆ ಎನ್ ಕುಮಾರ್ ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲೇರಿ, ನ್ಯಾಯ ಕೊಡಿಸುವಂತೆ  ಪ್ರತಿಭಟನೆ ಮಾಡುತ್ತಿದ್ದರು. ಇದೀಗ ಕ್ರೇಜಿ ಸ್ಟಾರ್ ರವಿಚಂದ್ರನ್(Crazy star Ravichandran) ಬಳಿ ನಿರ್ಮಾಪಕ ಕುಮಾರ್ ಮನವಿ ಮಾಡಿರುವುದರಿಂದ ಇಬ್ಬರಿಗೂ ಸರಿಯಾದ ನ್ಯಾಯಕೊಡಿಸಲು ಮುಂದಾಗಿದ್ದಾರೆ. ಈಗಾಗಲೇ ಕಿಚ್ಚ ನಿರ್ಮಾಪಕ ಎನ್ ಕುಮಾರ್ ದಾಖಲೆಗಳಿಲ್ಲದೆ ವಿನಾಕಾರಣ ನನ್ನ ಹೆಸರಿಗೆ ಮಸಿ ಬಳಿಯುತ್ತಿದ್ದಾರೆಂದು ಕೋರ್ಟ್ನಲ್ಲಿ ಮಾನನಸ್ಟ ಮೊಕದ್ದಮೆ ಹೂಡಿದ್ದಾರೆ. ಈ ನಡುವೆ ಕುಮಾರ್ ಮತ್ತು ಕಿಚ್ಚನನ್ನು ಒಟ್ಟಿಗೆ ಕರೆದು ರವಿಂಚಂದ್ರನ್ ಸಭೆ ನಡೆಸಿದ್ದಾರೆ. ಈ ವೇಳೆ ಪ್ರತಿಯೊಂದು ವಿಚಾರವನ್ನೂ ಬರೆದುಕೊಂಡುವಂತೆ ಕುಮಾರ್ಗೆ ಕೇಳಿದ್ದಾರೆ. ದಾಖಲೆಗಳಿದ್ದರೆ ಮಾತ್ರ ನಾನು ಪರಿಹರಿಸೋಕೆ ಮುಂದಾಗುತ್ತೇನೆ ಎಂದಿದ್ದ ರವಿಚಂದ್ರನ್ ಅದರಂತೆ ದಾಖಲೆ ಕೇಳಿದ್ದಾರೆ. ಅದರಂತೆ ಕುಮಾರ್ ಶುಕ್ರವಾರ ಕೆಲ ದಾಖಲೆ ನೀಡಿದ್ದಾರೆನ್ನಲಾಗಿದೆ. ಏನೇ ಆದರೂ ಇದಿ ಭಾನುವಾರ ಈ ವಿವಾದಕ್ಕೆ ಅಂತ್ಯ ಹಾಡುತ್ತಾರೆನ್ನಲಾಗಿದೆ. ಸೋಮುವಾರ ಅಧಿಕೃತವಾಗಿ ಹೇಳಿಕೆ ನೀಡುತ್ತಾರೆನ್ನಲಾಗಿದೆ. ನಟರಾಗಿ ನಿರ್ಮಾಪಕರಾಗಿಯೂ ಗುರ್ತಿಸಿಕೊಂಡಿರುವ ರವಿಚಂದ್ರನ್ ಇದೇ ಮೊದಲ ಬಾರಿಗೆ ಚಿತ್ರರಂಗದ ಸಮಸ್ಯೆಯನ್ನು ಮುಂದೆ ನಿಂತು ಬಗೆ ಹರಿಸುತ್ತಿದ್ದು. ಇದು ರವಿಚಂದ್ರನ್ ಮೊದಲ ವಿಕ್ಟರಿ ಎನ್ನಲಾಗಿದೆ.

ಇದನ್ನೂ ವೀಕ್ಷಿಸಿ: ಇಲ್ಲಿತನಕ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಟಾಪ್ 10 ಕನ್ನಡ ಚಿತ್ರಗಳು ಯಾವುವು ಗೊತ್ತಾ?

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್