Duniya Vijay: ಹೊಸ ಚಿತ್ರದ ಟೈಟಲ್ ರಿವೀಲ್ ಮಾಡಿದ ಸಲಗ!

Duniya Vijay: ಹೊಸ ಚಿತ್ರದ ಟೈಟಲ್ ರಿವೀಲ್ ಮಾಡಿದ ಸಲಗ!

Suvarna News   | Asianet News
Published : Mar 02, 2022, 02:44 PM IST

ದುನಿಯಾ ವಿಜಯ್‌ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ತಮ್ಮ ನಟನೆ, ನಿರ್ದೇಶನದ ಹೊಸ ಚಿತ್ರದ ಟೈಟಲ್‌ ಬಿಡುಗಡೆ ಮಾಡಿದ್ದಾರೆ. ಚಿತ್ರದ ಹೆಸರು 'ಭೀಮ'. 'ಕೆಣಕದೆ ಇದ್ದರೆ ಕ್ಷೇಮ' ಎಂಬುದು ಚಿತ್ರದ ಉಪ ಶೀರ್ಷಿಕೆ.

ದುನಿಯಾ ವಿಜಯ್ (Duniya Vijay) ತಮ್ಮ 28ನೇ ಸಿನಿಮಾ ಟೈಟಲ್ ರಿವೀಲ್ ಮಾಡಿದ್ದಾರೆ. 'ಸಲಗ' ಸಿನಿಮಾದ ಯಶಸ್ಸಿನಲ್ಲಿ ತೇಲಾಡುತ್ತಿರುವ ವಿಜಯ್ ಮತ್ತೊಂದು ಸಿನಿಮಾ ಘೋಷಣೆ ಮಾಡಿದ್ದಾರೆ. ದುನಿಯಾ ವಿಜಯ್ ನಿರ್ದೇಶಿಸಿದ್ದ ಮೊದಲ ಸಿನಿಮಾ 'ಸಲಗ'ಕ್ಕೆ ಸಿನಿಪ್ರೇಮಿಗಳಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ರೌಡಿಸಂ ಕಥೆಯನ್ನು ತೆರೆಮೇಲೆ ತಂದಿದ್ದ ವಿಜಯ್ ನಟನಷ್ಟೇ ಅಲ್ಲ. ಒಬ್ಬ ಉತ್ತಮ ನಿರ್ದೇಶಕ ಎನ್ನುವುದನ್ನೂ ಸಾಬೀತು ಮಾಡಿದ್ದರು. ಈಗ ಇದೇ ಖುಷಿಯಲ್ಲಿ ಎರಡನೇ ಸಿನಿಮಾಗೆ ಕೈ ಹಾಕಿದ್ದಾರೆ. ಮಹಾಶಿವರಾತ್ರಿ (Mahashivratri) ವಿಶೇಷ ದಿನದಂದು ವಿಜಯ್ ನಿರ್ದೇಶಿಸುತ್ತಿರುವ ಎರಡನೇ ಸಿನಿಮಾದ ಟೈಟಲ್ ರಿವೀಲ್ ಮಾಡಿದ್ದಾರೆ.

Duniya Vijay Telugu Film: ಟಾಲಿವುಡ್‌ನಲ್ಲಿ ವಿಲನ್ ಆಗಿ ದುನಿಯಾ ವಿಜಯ್ ಎಂಟ್ರಿ

ಹೌದು! ದುನಿಯಾ ವಿಜಯ್‌ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ತಮ್ಮ ನಟನೆ, ನಿರ್ದೇಶನದ ಹೊಸ ಚಿತ್ರದ ಟೈಟಲ್‌ ಬಿಡುಗಡೆ (Title Launch) ಮಾಡಿದ್ದಾರೆ. ಚಿತ್ರದ ಹೆಸರು 'ಭೀಮ' (Bheema). 'ಕೆಣಕದೆ ಇದ್ದರೆ ಕ್ಷೇಮ' ಎಂಬುದು ಚಿತ್ರದ ಉಪ ಶೀರ್ಷಿಕೆ. ಈ ಚಿತ್ರಕ್ಕೆ ನಿರ್ಮಾಪಕರಾಗಿ ಕೃಷ್ಣ ಸಾರ್ಥಕ್‌ (Krishna Sarthak) ಹಾಗೂ ಜಗದೀಶ್‌ ಗೌಡ (Jagadeesh Gowda) ಜತೆಯಾಗಿದ್ದಾರೆ. ಕತೆ, ಚಿತ್ರಕಥೆ ವಿಜಯ್‌ ಅವರೇ ಬರೆಯುತ್ತಿದ್ದಾರೆ. ಸಂಭಾಷಣೆಕಾರರಾಗಿ ಮಾಸ್ತಿ (Maasthi) ಇದ್ದಾರೆ. ಶಿವಸೇನಾ ಕ್ಯಾಮೆರಾ, ಚರಣ್‌ರಾಜ್‌ ಸಂಗೀತ ಸಂಯೋಜನೆ ಇದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more