ಸ್ಯಾಂಡಲ್​ವುಡ್​​ಗೆ ಹೊಸ ಟೆನ್ಷನ್ ಕೊಟ್ಟ ಹೇಮಾ ವರದಿ: ಮಂಚಕ್ಕೆ ಕರೆದವರಿಗೆ ಶುರುವಾಗುತ್ತಿದೆ ಕೈ ಕಾಲು ನಡುಕ!

ಸ್ಯಾಂಡಲ್​ವುಡ್​​ಗೆ ಹೊಸ ಟೆನ್ಷನ್ ಕೊಟ್ಟ ಹೇಮಾ ವರದಿ: ಮಂಚಕ್ಕೆ ಕರೆದವರಿಗೆ ಶುರುವಾಗುತ್ತಿದೆ ಕೈ ಕಾಲು ನಡುಕ!

Published : Sep 07, 2024, 04:36 PM IST

ಹೇಮಾ ವರದಿ ಮಾಲಿವುಡ್ ನಲ್ಲಿ ಸುನಾಮಿ ಎಬ್ಬಿಸಿದೆ. ಕೇರಳದಲ್ಲಿ ಎದ್ದಿರೋ ಈ ಸುನಾಮಿ ಈಗ ಸ್ಯಾಂಡಲ್​ವುಡ್​​​ಗೂ ಬಂದಪ್ಪಳಿಸಿದೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ತಕ್ಷಣ ಸಭೆ ಮಾಡಲು ಕರ್ನಾಟಕ ಮಹಿಳಾ ಆಯೋಗ ಹೇಳಿದೆ. 

ಹೇಮಾ ವರದಿ ಮಾಲಿವುಡ್ ನಲ್ಲಿ ಸುನಾಮಿ ಎಬ್ಬಿಸಿದೆ. ಕೇರಳದಲ್ಲಿ ಎದ್ದಿರೋ ಈ ಸುನಾಮಿ ಈಗ ಸ್ಯಾಂಡಲ್​ವುಡ್​​​ಗೂ ಬಂದಪ್ಪಳಿಸಿದೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ತಕ್ಷಣ ಸಭೆ ಮಾಡಲು ಕರ್ನಾಟಕ ಮಹಿಳಾ ಆಯೋಗ ಹೇಳಿದೆ. ಹಾಗಾದ್ರೆ ಸ್ಯಾಂಡಲ್​ವುಡ್​​ನಲ್ಲಿ ಈ ಮೀಟು ಘಾಟು ಹೇಗೆ ಹಬ್ಬುತ್ತಿದೆ..? ಇಲ್ಲಿದೆ ನೋಡಿ ಫುಲ್ ಡಿಟೈಲ್ಸ್. ನಟ ಚೇತನ್, ಶೃತಿ ಹರಿಹರನ್, ನಟಿ ನೀತು ಸೇರಿದಂತೆ 153 ಜನ ಸಹಿ ಹಾಕಿ ಸ್ಯಾಂಡಲ್​ವುಡ್​​ನಲ್ಲಿ ಹೆಣ್ಣುಮಕ್ಕಳ ರಕ್ಷಣೆಗೆ ಸರ್ಕಾರ ಸಮೀತಿ ರಚಿಸುವಂತೆ ಫೈರ್​ ಸಂಸ್ಥೆ ಸರ್ಕಾರಕ್ಕೆ ಮನವಿ ಮಾಡಿದ್ದೇ ತಡ ಈಗ ಕನ್ನಡ ಚಿತ್ರರಂಗದಲ್ಲಿ ಮೀಟು ಘಾಟು ಧಗ ಧಗಿಸುತ್ತಿದೆ. ಕನ್ನಡದ ನಟ ನಟಿಯರೆಲ್ಲಾ ಈ ವರಧಿ ಜಾರಿ ಆಗ್ಲಿ ಪಲ್ಲಂಗಕ್ಕೆ ಕರೆದವರು. ಕರೆಯೋರಿಗೂ ಶಿಕ್ಷೆ ಆಗ್ಲಿ ಅಂತ ಹೇಳುತ್ತಿದ್ದಾರೆ. 

ಹೇಮಾ ವರಧಿ ಬಂದ ಮೇಲೆ ಮಲೆಯಾಳಂ ಸಿನಿಮಾ ಜಗತ್ತಿನ ಕಾಮುಖ ಕಣ್ಣುಗಳ ಕರಾಳ ಕತೆಗಳು ಬಯಲಾಗ್ತಿವೆ. ಹಾಗೆ ನಮ್ಮ ಸ್ಯಾಂಡಲ್​ವುಡ್​ಅನ್ನ ಕಾಮುಕ ಕಣ್ಣುಗಳನ್ನ ಕ್ಲೀನ್ ಮಾಡೋಕೆ ಸರ್ಕಾರ ಹೊಸ ಹೆಜ್ಜೆ ಇಟ್ರು ಆಶ್ಚರ್ಯವೇನಿಲ್ಲ. ಅಷ್ಟರೊಗಳಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಹಾಗು ಸರ್ಕಾರದ ಕಾರ್ಯದರ್ಶಿ ಶಾಲಿನಿ ರಜನೀಶ್​ಗೆ ಮಹಿಳಾ ಆಯೋಗ ಪತ್ರ ಬರೆದಿದೆ. ಚಿತ್ರರಂಗದ ನಟಿಯರನ್ನು ಕರೆದು ಅವರ ಸಮ್ಮುಖದಲ್ಲಿ ಸಭೆ ನಡೆಸಿ, ಸಮಿತಿ ರಚಿಸಲು ಒತ್ತಾಯಿಸಿ ತೀರ್ಮಾನ ತೆಗೆದುಕೊಳ್ಳಿ ಈ ಸಭೆ ಸೆಪ್ಟೆಂಬರ್ 13ರ ಒಳಗೆ ನಡೆಸುವಂತೆ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿಯಿಂದ ಪತ್ರ ಬರೆದಿದ್ದಾರೆ. 

ಬಣ್ಣದ ಜಗತ್ತು ನೋಡೋಕೆ ಕಲರ್​ ಫುಲ್. ಆದ್ರೆ ಅದರೊಳಗೆ ಇಳಿದವರಿಗೆ ಗೊತ್ತು ಅದು ಎಷ್ಟು ಕೊಳಕು ಅಂತ ಸಿನಿಮಾ ರಂಗದವರೇ ಹೇಳುತ್ತಾರೆ. ಯಾಕಂದ್ರೆ ಇಲ್ಲಿ ಕಾಂಪ್ರಮೈಸ್ ಅನ್ನೋದು ಕಾಮನ್. ಕಾಂಪ್ರಮೈಸ್ ಆದ್ರೇನೆ ನಟಿಯರಿಗೆ ಅಭಿನಯಿಸೋಕೆ ಚಾನ್ಸ್. ಇದರ ವಿರುದ್ಧ ಧ್ವನಿ ಎತ್ತಿದವರು ಎಷ್ಟೋ ಜನ. ಹಾಗೇ ಅಷ್ಟು ಬೇಗ ಅವರ ಧ್ವನಿ ಕೂಡ ಅಡಗಿದ್ದು ಅಷ್ಟೇ ಸತ್ಯ. ಆದ್ರೆ ಇನ್ಮುಂದೆ ಹಾಗಾಗಬಾರದು. ಪಾತ್ರಕ್ಕಾಗಿ ಪಲ್ಲಂಗಕ್ಕೆ ಕರೆದರಿಗೆ ಶಿಕ್ಷೆ ಆಗ್ಲೇ ಬೇಕು ಅಂತ ಕೂಗು ಜೋರಾಗಿದೆ. ಇದರಿಂದ ಸ್ಯಾಂಡಲ್​ವುಡ್​ನಲ್ಲಿರೋ ಕೆಲ ಕಾಮ ಕ್ರಿಮಿಗಳಿಗೆ ಚಳಿ ಜ್ವರ ಶುರುವಾಗಿರೋದಂತು ಸತ್ಯ.

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more