ಕಾಂತರ ಪ್ರೀಕ್ವೆಲ್‌ಗೆ ಭಾರಿ ಡಿಮ್ಯಾಂಡ್..! ರಿಷಬ್ ಜೊತೆ ನಟಿಸೋಕೆ ನುಗ್ಗಿ ಬಂದ 25000 ಜನ..!

ಕಾಂತರ ಪ್ರೀಕ್ವೆಲ್‌ಗೆ ಭಾರಿ ಡಿಮ್ಯಾಂಡ್..! ರಿಷಬ್ ಜೊತೆ ನಟಿಸೋಕೆ ನುಗ್ಗಿ ಬಂದ 25000 ಜನ..!

Published : Dec 22, 2023, 09:14 AM IST

ಕಾಂತಾರ ಸಿನಿಮಾ ಈಗಾಗಲೇ ಇತಿಹಾಸ ಪುಟಗಳನ್ನ ಸೇರಿದೆ. ರಿಷಬ್ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನಕ್ಕೆ ಫಿದಾ ಆದವರೇ ಇಲ್ಲ. ಜತೆಗೆ ಹೊಂಬಾಳೆ ಫಿಲ್ಮಂ ದೃಶ್ಯ ವೈಭವಕ್ಕೆ ಮನಸೋತವರೇ ಇಲ್ಲ. ಮ್ಯೂಸಿಕಂತೂ ಒಂದು ಕ್ಷಣ ಕಳೆದೋಗುವ ಹಾಗಿದೆ.ಆದ್ರೆ ಈಗ ಕಾಂತಾರ 2 ಸಿನಿಮಾ ಸೆಟ್ಟೇರಲು ಸಿದ್ಧವಾಗಿದ್ದು. ಈಗಾಗಲೇ ಶೆಟ್ಟರ ಚಿತ್ರ ತಂಡ ಫಸ್ಟ್ ಲೂಕ್ ಬಿಡುಗಡೆ ಮಾಡಲಾಗಿದೆ. 

ಕಾಂತಾರ- 2 (Kantara-2 )ಸಿನಿಮಾದ ಫಸ್ಟ್ ಲುಕ್ ನೋಡಿ ಅಭಿಮಾನಿಗಳು, ಸಿನಿಮಾ ರಿಲೀಸ್‌ಗಾಗಿ ಕಾಯ್ತಿದ್ದಾರೆ. ಅದ್ರಲ್ಲೂ ಈ ಸಿನಿಮಾದಲ್ಲಿ ಯಾರೆಲ್ಲಾ ನಟಿಸುತ್ತಾರೆ ಅನ್ನೋ ಕುತೂಹಲವೂ ಇದೆ. ಹಲವಾರು ಪಾತ್ರಗಳು ಇರುವುದರಿಂದ ಕಲಾವಿದರ ವಯಸ್ಸನ್ನೂ ನಿಗದಿ ಪಡಿಸಿ, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅದಕ್ಕೆ ಸಾಕಷ್ಟು ರೆಸ್ಪಾನ್ಸ್ ಬಂದಿದೆ. ಚಿತ್ರತಂಡವೇ ಹೇಳಿಕೊಂಡಂತೆ 25 ಸಾವಿರಕ್ಕೂ ಹೆಚ್ಚು ಜನರು ಅರ್ಜಿ ಸಲ್ಲಿಸಿದ್ದಾರೆ. ಇನ್ನು ಕಿರಿಕ್ ಪಾರ್ಟಿ ಮಾಡಿದಾಗಲೂ ಆಡಿಷನ್‌ಗೆ ಚಿತ್ರತಂಡ ಕಾಲ್ ಮಾಡಿತ್ತು. ಆಗ ಎರಡು ಸಾವಿರಕ್ಕೂ ಹೆಚ್ಚು ಕಲಾವಿದರು ಶೆಟ್ಟರ ಸಿನಿಮಾದಲ್ಲಿ ಪಾತ್ರ ಮಾಡೋಕೆ ಅರ್ಜಿ ಹಾಕಿದ್ರು. ಆದ್ರೀಗ ಕಾಂತಾರ 1 ಚಿತ್ರಕ್ಕೆ ನಿರೀಕ್ಷೆಗೂ ಮೀರಿ ಜನರು ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಚಿತ್ರತಂಡ ಆ ಎಲ್ಲಾ 25 ಸಾವಿರ ಅರ್ಜಿ ಪರಿಶೀಲಿಸುವ ಕೆಲಸದಲ್ಲಿ ಬ್ಯುಸಿಯಾಗಿದೆ. ಸಾಮಾನ್ಯ ಕಲಾವಿದರು ಮಾತ್ರವಲ್ಲ, ಈಗಾಗಲೇ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ನಾಯಕಿಯರು ಅರ್ಜಿ ಹಾಕಿ ಶೆಟ್ಟರಿಗೆ ಅವಕಾಶ ಕೇಳಿದ್ದಾರಂತೆ. ಈ ಮಧ್ಯೆ, ಚಿತ್ರದ ಫಸ್ಟ್ ಲುಕ್(Frist Look) ಮೂಲಕ ಗಮನ ಸೆಳೆದಿರುವ ರಿಷಬ್ ಶೆಟ್ಟಿ, ಸಾಮಾಜಿಕ ಮಾಧ್ಯಮದಲ್ಲಿ ಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ. 30 ರಿಂದ 60 ವರ್ಷ ವಯಸ್ಸಿನ ನಟರು ಮತ್ತು 18 ರಿಂದ 60 ವರ್ಷದೊಳಗಿನ ನಟಿಯರ ಅಗತ್ಯವಿರುವುದಾಗಿ ಕೇಳಿದ್ದರು. ಇದಕ್ಕೆ ವ್ಯಾಪಕ ಪ್ರತಿಕ್ರಿಯೆ ಲಭ್ಯವಾಗಿದ್ದು, ಬರೋಬ್ಬರಿ 25,000 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಚಿತ್ರತಂಡ ಇನ್ನೂ ನಾಯಕಿ ಯಾರೆಂಬುದನ್ನು ಅಂತಿಮಗೊಳಿಸಿಲ್ಲ. ತಮ್ಮ ಪಾತ್ರಕ್ಕೆ ಸೂಕ್ತವಾಗುವ ಈಗಾಗಲೇ ಗುರುತಿಸಿಕೊಂಡ ಮುಖ ಅಥವಾ ಹೊಸಬರ ಹುಡುಕಾಟದಲ್ಲಿ ತಂಡ ತೊಡಗಿಕೊಂಡಿದೆ. ಚಿತ್ರದಲ್ಲಿನ ವಿವಿಧ ಪಾತ್ರಗಳಿಗೆ ಎಚ್ಚರಿಕೆಯಿಂದ ಆಯ್ಕೆ ಮಾಡಲಾಗುತ್ತದೆ ಮತ್ತು ಆಯ್ಕೆಯು ಅರ್ಜಿದಾರರ ಕೌಶಲ್ಯಗಳ ಮೇಲೆ ಅವಲಂಬಿತವಾಗಿರುತ್ತದೆ. ಅಂತಿಮ ಆಡಿಷನ್ ಸುತ್ತುಗಳಲ್ಲಿ ನಿರ್ದಿಷ್ಟವಾಗಿ ಯಾರು ಸೂಕ್ತ ಎಂಬುದು ಸ್ಪಷ್ಟವಾಗಿರುತ್ತದೆ. ಕಾಂತಾರ 1ಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಮತ್ತು ಅರವಿಂದ್ ಕಶ್ಯಪ್ ಅವರ ಡಿಒಪಿ ಅಂತಿಮವಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಗೀತಾ ಜಯಂತಿ ಇದ್ದು, ನಮ್ಮ ದುಃಖ-ಸಂಕಟ ಪರಿಹಾರಕ್ಕೆ ಕೃಷ್ಣನ ಸಲಹೆ ಏನು..?

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more