ಕಾಂತರ ಪ್ರೀಕ್ವೆಲ್‌ಗೆ ಭಾರಿ ಡಿಮ್ಯಾಂಡ್..! ರಿಷಬ್ ಜೊತೆ ನಟಿಸೋಕೆ ನುಗ್ಗಿ ಬಂದ 25000 ಜನ..!

ಕಾಂತರ ಪ್ರೀಕ್ವೆಲ್‌ಗೆ ಭಾರಿ ಡಿಮ್ಯಾಂಡ್..! ರಿಷಬ್ ಜೊತೆ ನಟಿಸೋಕೆ ನುಗ್ಗಿ ಬಂದ 25000 ಜನ..!

Published : Dec 22, 2023, 09:14 AM IST

ಕಾಂತಾರ ಸಿನಿಮಾ ಈಗಾಗಲೇ ಇತಿಹಾಸ ಪುಟಗಳನ್ನ ಸೇರಿದೆ. ರಿಷಬ್ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶನಕ್ಕೆ ಫಿದಾ ಆದವರೇ ಇಲ್ಲ. ಜತೆಗೆ ಹೊಂಬಾಳೆ ಫಿಲ್ಮಂ ದೃಶ್ಯ ವೈಭವಕ್ಕೆ ಮನಸೋತವರೇ ಇಲ್ಲ. ಮ್ಯೂಸಿಕಂತೂ ಒಂದು ಕ್ಷಣ ಕಳೆದೋಗುವ ಹಾಗಿದೆ.ಆದ್ರೆ ಈಗ ಕಾಂತಾರ 2 ಸಿನಿಮಾ ಸೆಟ್ಟೇರಲು ಸಿದ್ಧವಾಗಿದ್ದು. ಈಗಾಗಲೇ ಶೆಟ್ಟರ ಚಿತ್ರ ತಂಡ ಫಸ್ಟ್ ಲೂಕ್ ಬಿಡುಗಡೆ ಮಾಡಲಾಗಿದೆ. 

ಕಾಂತಾರ- 2 (Kantara-2 )ಸಿನಿಮಾದ ಫಸ್ಟ್ ಲುಕ್ ನೋಡಿ ಅಭಿಮಾನಿಗಳು, ಸಿನಿಮಾ ರಿಲೀಸ್‌ಗಾಗಿ ಕಾಯ್ತಿದ್ದಾರೆ. ಅದ್ರಲ್ಲೂ ಈ ಸಿನಿಮಾದಲ್ಲಿ ಯಾರೆಲ್ಲಾ ನಟಿಸುತ್ತಾರೆ ಅನ್ನೋ ಕುತೂಹಲವೂ ಇದೆ. ಹಲವಾರು ಪಾತ್ರಗಳು ಇರುವುದರಿಂದ ಕಲಾವಿದರ ವಯಸ್ಸನ್ನೂ ನಿಗದಿ ಪಡಿಸಿ, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅದಕ್ಕೆ ಸಾಕಷ್ಟು ರೆಸ್ಪಾನ್ಸ್ ಬಂದಿದೆ. ಚಿತ್ರತಂಡವೇ ಹೇಳಿಕೊಂಡಂತೆ 25 ಸಾವಿರಕ್ಕೂ ಹೆಚ್ಚು ಜನರು ಅರ್ಜಿ ಸಲ್ಲಿಸಿದ್ದಾರೆ. ಇನ್ನು ಕಿರಿಕ್ ಪಾರ್ಟಿ ಮಾಡಿದಾಗಲೂ ಆಡಿಷನ್‌ಗೆ ಚಿತ್ರತಂಡ ಕಾಲ್ ಮಾಡಿತ್ತು. ಆಗ ಎರಡು ಸಾವಿರಕ್ಕೂ ಹೆಚ್ಚು ಕಲಾವಿದರು ಶೆಟ್ಟರ ಸಿನಿಮಾದಲ್ಲಿ ಪಾತ್ರ ಮಾಡೋಕೆ ಅರ್ಜಿ ಹಾಕಿದ್ರು. ಆದ್ರೀಗ ಕಾಂತಾರ 1 ಚಿತ್ರಕ್ಕೆ ನಿರೀಕ್ಷೆಗೂ ಮೀರಿ ಜನರು ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಚಿತ್ರತಂಡ ಆ ಎಲ್ಲಾ 25 ಸಾವಿರ ಅರ್ಜಿ ಪರಿಶೀಲಿಸುವ ಕೆಲಸದಲ್ಲಿ ಬ್ಯುಸಿಯಾಗಿದೆ. ಸಾಮಾನ್ಯ ಕಲಾವಿದರು ಮಾತ್ರವಲ್ಲ, ಈಗಾಗಲೇ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ನಾಯಕಿಯರು ಅರ್ಜಿ ಹಾಕಿ ಶೆಟ್ಟರಿಗೆ ಅವಕಾಶ ಕೇಳಿದ್ದಾರಂತೆ. ಈ ಮಧ್ಯೆ, ಚಿತ್ರದ ಫಸ್ಟ್ ಲುಕ್(Frist Look) ಮೂಲಕ ಗಮನ ಸೆಳೆದಿರುವ ರಿಷಬ್ ಶೆಟ್ಟಿ, ಸಾಮಾಜಿಕ ಮಾಧ್ಯಮದಲ್ಲಿ ಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ. 30 ರಿಂದ 60 ವರ್ಷ ವಯಸ್ಸಿನ ನಟರು ಮತ್ತು 18 ರಿಂದ 60 ವರ್ಷದೊಳಗಿನ ನಟಿಯರ ಅಗತ್ಯವಿರುವುದಾಗಿ ಕೇಳಿದ್ದರು. ಇದಕ್ಕೆ ವ್ಯಾಪಕ ಪ್ರತಿಕ್ರಿಯೆ ಲಭ್ಯವಾಗಿದ್ದು, ಬರೋಬ್ಬರಿ 25,000 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಚಿತ್ರತಂಡ ಇನ್ನೂ ನಾಯಕಿ ಯಾರೆಂಬುದನ್ನು ಅಂತಿಮಗೊಳಿಸಿಲ್ಲ. ತಮ್ಮ ಪಾತ್ರಕ್ಕೆ ಸೂಕ್ತವಾಗುವ ಈಗಾಗಲೇ ಗುರುತಿಸಿಕೊಂಡ ಮುಖ ಅಥವಾ ಹೊಸಬರ ಹುಡುಕಾಟದಲ್ಲಿ ತಂಡ ತೊಡಗಿಕೊಂಡಿದೆ. ಚಿತ್ರದಲ್ಲಿನ ವಿವಿಧ ಪಾತ್ರಗಳಿಗೆ ಎಚ್ಚರಿಕೆಯಿಂದ ಆಯ್ಕೆ ಮಾಡಲಾಗುತ್ತದೆ ಮತ್ತು ಆಯ್ಕೆಯು ಅರ್ಜಿದಾರರ ಕೌಶಲ್ಯಗಳ ಮೇಲೆ ಅವಲಂಬಿತವಾಗಿರುತ್ತದೆ. ಅಂತಿಮ ಆಡಿಷನ್ ಸುತ್ತುಗಳಲ್ಲಿ ನಿರ್ದಿಷ್ಟವಾಗಿ ಯಾರು ಸೂಕ್ತ ಎಂಬುದು ಸ್ಪಷ್ಟವಾಗಿರುತ್ತದೆ. ಕಾಂತಾರ 1ಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಮತ್ತು ಅರವಿಂದ್ ಕಶ್ಯಪ್ ಅವರ ಡಿಒಪಿ ಅಂತಿಮವಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಗೀತಾ ಜಯಂತಿ ಇದ್ದು, ನಮ್ಮ ದುಃಖ-ಸಂಕಟ ಪರಿಹಾರಕ್ಕೆ ಕೃಷ್ಣನ ಸಲಹೆ ಏನು..?

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more