ಕರೀನಾರನ್ನು ಟೀಕಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ: ನಟಿ ಬೆಂಬಲಕ್ಕೆ ನಿಂತ ಸುಧಾ ಮೂರ್ತಿ!

ಕರೀನಾರನ್ನು ಟೀಕಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ: ನಟಿ ಬೆಂಬಲಕ್ಕೆ ನಿಂತ ಸುಧಾ ಮೂರ್ತಿ!

Published : May 20, 2023, 11:01 AM IST

ಇನ್ಪೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಇತ್ತೀಚೆಗೆ ಬಾಲಿವುಡ್ ನಟಿ ಕರೀನಾ ಕಪೂರ್‌ರನ್ನು ಟೀಕಿಸಿದ್ದರು. ಆದ್ರೆ ನಟಿ ಬೆಂಬಲಕ್ಕೆ ಸುಧಾ ಮೂರ್ತಿ ಬಂದಿದ್ದರು.
 

ಕರೀನಾ ಬಗ್ಗೆಅಚ್ಚರಿಯ ಹೇಳಿಕೆಯನ್ನು ನೀಡಿ ಸುದ್ದಿಯಾಗಿದ್ದಾರೆ ಇನ್ಪೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ನಾರಾಯಾಣ ಮೂರ್ತಿ ಮತ್ತು ಪತಿ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಇತ್ತೀಚೆಗಷ್ಟೆ ಬಾಲಿವುಡ್ ನಟಿ ಕರೀನಾ ಕಪೂರ್ ಬಗ್ಗೆ ಹೇಳಿರುವ ಮಾತುಗಳು ವೈರಲ್ ಆಗಿವೆ.  ನಾರಾಯಣ ಮೂರ್ತಿ ಬಾಲಿವುಡ್ ಸ್ಟಾರ್ ಕರೀನಾ ಕಪೂರ್ ಅವರ ಒಂದು ಘಟನೆಯನ್ನು ಬಹಿರಂಗ ಪಡಿಸಿದರು. ಈ ವರ್ಷದ ಆರಂಭದಲ್ಲಿ ಐಐಟಿ ಕಾನ್ಪುರದಲ್ಲಿ ನಡೆದ ಸಂವಾದದ ಸಂದರ್ಭದಲ್ಲಿ, ಬಿಲಿಯನೇರ್ ದಂಪತಿ ಕರೀನಾ ಕಪೂರ್ ಬಗ್ಗೆ ಮಾತನಾಡಿದರು. ಕರೀನಾ ಯಾಕೆ ಈ ರೀತಿ ವರ್ತಿಸಿದರು ಎಂದು ಚರ್ಚಿಸಿದರು. ಕರೀನಾ ವರ್ತನೆ ಕ್ಷಮಿಸಲು ಸಾಧ್ಯವಿಲ್ಲ ಎಂದು ನಾರಾಯಣ ಮೂರ್ತಿ ಹೇಳಿದರೆ, ಕರೀನಾ ಸುಸ್ತಾಗಿರಬಹುದು ಎಂದು ಸುಧಾ ಮೂರ್ತಿ ಬೆಂಬಲಕ್ಕೆ ನಿಂತರು. ನಾರಾಯಾಣ ಮೂರ್ತಿ ಅವರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಕರೀನಾ ಕಪೂರ್ ಅವರ ಪಕ್ಕದಲ್ಲೇ ಕುಳಿತಿದ್ದರು ಆಗ ನಡೆದ ಒಂದು ಘಟನೆಯನ್ನು ಬಹಿರಂಗ ಪಡಿಸಿ ಕರೀನಾ ವರ್ತನೆ ಇಷ್ಟವಾಗಿಲ್ಲ ಎಂದು ಹೇಳಿದರು. ನಾರಾಯಣ ಮೂರ್ತಿ, 'ನಾನು ಲಂಡನ್ನಿಂದ ಬರುತ್ತಿದ್ದೆ ಆಗ ನನ್ನ ಪಕ್ಕದಲ್ಲಿ ಕರೀನಾ ಕಪೂರ್ ಕುಳಿತಿದ್ದರು. ತುಂಬಾ ಜನರು ಅವರ ಬಳಿ ಬಂದು ಹಲೋ ಹೇಳುತ್ತಿದ್ದರು. ಆದರೆ ಅವರು ಒಂದು ಪ್ರತಿಕ್ರಿಯೆ ಕೂಡ ನೀಡಿಲ್ಲ. ನನೆಗ ಅದು ಆಶ್ಚರ್ಯವಾಯಿತು. ಯಾರೇ ನನ್ನ ಬಳಿ ಬಂದರೂ ನಾನು ಎದ್ದು ನಿಂತು ನಾವು ಒಂದು ನಿಮಿಷ ಅಥವಾ ಅರ್ಧ ನಿಮಿಷ ಮಾತನಾಡಿದೆವು. ಅದನ್ನೇ ಅವರು ನಿರೀಕ್ಷಿಸುತ್ತಿದ್ದರು' ಎಂದು ಹೇಳಿದರು. ನಾರಾಯಣ ಮೂರ್ತಿ ಕರೀನಾ ಕಪೂರ್ ಅವರನ್ನು ಟೀಕಿಸುತ್ತಿದ್ದಂತೆ ಪತ್ನಿ ಸುಧಾ ಮೂರ್ತಿ ಮಧ್ಯ ಬಂದು ಕರೀನಾ ಬೆಂಬಲಕ್ಕೆ ನಿಂತರು. 'ಅವರಿಗೆ ಮಿಲಿಯನ್ ಗಟ್ಟಲೇ ಅಭಿಮಾನಿಗಳು ಇರುತ್ತಾರೆ.  ಅವರು ಸುಸ್ತಾಗಿರಬಹುದು' ಎಂದು ಹೇಳಿದರು. ಪ್ರೇಕ್ಷಕರು ಸುಧಾ ಮೂರ್ತಿ ಅವರನ್ನು ಶ್ಲಾಘಿಸಿದರು.

ಇದನ್ನೂ ವೀಕ್ಷಿಸಿ: ಆರ್‌ಸಿಬಿ ಗೆಲುವಿಗೆ ಸಂಭ್ರಮಿಸಿದ ರಿಷಬ್ ಶೆಟ್ಟಿ ಪುತ್ರಿ : ವಿಡಿಯೋ ವೈರಲ್‌

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more