ಕರೀನಾರನ್ನು ಟೀಕಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ: ನಟಿ ಬೆಂಬಲಕ್ಕೆ ನಿಂತ ಸುಧಾ ಮೂರ್ತಿ!

ಕರೀನಾರನ್ನು ಟೀಕಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ: ನಟಿ ಬೆಂಬಲಕ್ಕೆ ನಿಂತ ಸುಧಾ ಮೂರ್ತಿ!

Published : May 20, 2023, 11:01 AM IST

ಇನ್ಪೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಇತ್ತೀಚೆಗೆ ಬಾಲಿವುಡ್ ನಟಿ ಕರೀನಾ ಕಪೂರ್‌ರನ್ನು ಟೀಕಿಸಿದ್ದರು. ಆದ್ರೆ ನಟಿ ಬೆಂಬಲಕ್ಕೆ ಸುಧಾ ಮೂರ್ತಿ ಬಂದಿದ್ದರು.
 

ಕರೀನಾ ಬಗ್ಗೆಅಚ್ಚರಿಯ ಹೇಳಿಕೆಯನ್ನು ನೀಡಿ ಸುದ್ದಿಯಾಗಿದ್ದಾರೆ ಇನ್ಪೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ನಾರಾಯಾಣ ಮೂರ್ತಿ ಮತ್ತು ಪತಿ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಇತ್ತೀಚೆಗಷ್ಟೆ ಬಾಲಿವುಡ್ ನಟಿ ಕರೀನಾ ಕಪೂರ್ ಬಗ್ಗೆ ಹೇಳಿರುವ ಮಾತುಗಳು ವೈರಲ್ ಆಗಿವೆ.  ನಾರಾಯಣ ಮೂರ್ತಿ ಬಾಲಿವುಡ್ ಸ್ಟಾರ್ ಕರೀನಾ ಕಪೂರ್ ಅವರ ಒಂದು ಘಟನೆಯನ್ನು ಬಹಿರಂಗ ಪಡಿಸಿದರು. ಈ ವರ್ಷದ ಆರಂಭದಲ್ಲಿ ಐಐಟಿ ಕಾನ್ಪುರದಲ್ಲಿ ನಡೆದ ಸಂವಾದದ ಸಂದರ್ಭದಲ್ಲಿ, ಬಿಲಿಯನೇರ್ ದಂಪತಿ ಕರೀನಾ ಕಪೂರ್ ಬಗ್ಗೆ ಮಾತನಾಡಿದರು. ಕರೀನಾ ಯಾಕೆ ಈ ರೀತಿ ವರ್ತಿಸಿದರು ಎಂದು ಚರ್ಚಿಸಿದರು. ಕರೀನಾ ವರ್ತನೆ ಕ್ಷಮಿಸಲು ಸಾಧ್ಯವಿಲ್ಲ ಎಂದು ನಾರಾಯಣ ಮೂರ್ತಿ ಹೇಳಿದರೆ, ಕರೀನಾ ಸುಸ್ತಾಗಿರಬಹುದು ಎಂದು ಸುಧಾ ಮೂರ್ತಿ ಬೆಂಬಲಕ್ಕೆ ನಿಂತರು. ನಾರಾಯಾಣ ಮೂರ್ತಿ ಅವರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಕರೀನಾ ಕಪೂರ್ ಅವರ ಪಕ್ಕದಲ್ಲೇ ಕುಳಿತಿದ್ದರು ಆಗ ನಡೆದ ಒಂದು ಘಟನೆಯನ್ನು ಬಹಿರಂಗ ಪಡಿಸಿ ಕರೀನಾ ವರ್ತನೆ ಇಷ್ಟವಾಗಿಲ್ಲ ಎಂದು ಹೇಳಿದರು. ನಾರಾಯಣ ಮೂರ್ತಿ, 'ನಾನು ಲಂಡನ್ನಿಂದ ಬರುತ್ತಿದ್ದೆ ಆಗ ನನ್ನ ಪಕ್ಕದಲ್ಲಿ ಕರೀನಾ ಕಪೂರ್ ಕುಳಿತಿದ್ದರು. ತುಂಬಾ ಜನರು ಅವರ ಬಳಿ ಬಂದು ಹಲೋ ಹೇಳುತ್ತಿದ್ದರು. ಆದರೆ ಅವರು ಒಂದು ಪ್ರತಿಕ್ರಿಯೆ ಕೂಡ ನೀಡಿಲ್ಲ. ನನೆಗ ಅದು ಆಶ್ಚರ್ಯವಾಯಿತು. ಯಾರೇ ನನ್ನ ಬಳಿ ಬಂದರೂ ನಾನು ಎದ್ದು ನಿಂತು ನಾವು ಒಂದು ನಿಮಿಷ ಅಥವಾ ಅರ್ಧ ನಿಮಿಷ ಮಾತನಾಡಿದೆವು. ಅದನ್ನೇ ಅವರು ನಿರೀಕ್ಷಿಸುತ್ತಿದ್ದರು' ಎಂದು ಹೇಳಿದರು. ನಾರಾಯಣ ಮೂರ್ತಿ ಕರೀನಾ ಕಪೂರ್ ಅವರನ್ನು ಟೀಕಿಸುತ್ತಿದ್ದಂತೆ ಪತ್ನಿ ಸುಧಾ ಮೂರ್ತಿ ಮಧ್ಯ ಬಂದು ಕರೀನಾ ಬೆಂಬಲಕ್ಕೆ ನಿಂತರು. 'ಅವರಿಗೆ ಮಿಲಿಯನ್ ಗಟ್ಟಲೇ ಅಭಿಮಾನಿಗಳು ಇರುತ್ತಾರೆ.  ಅವರು ಸುಸ್ತಾಗಿರಬಹುದು' ಎಂದು ಹೇಳಿದರು. ಪ್ರೇಕ್ಷಕರು ಸುಧಾ ಮೂರ್ತಿ ಅವರನ್ನು ಶ್ಲಾಘಿಸಿದರು.

ಇದನ್ನೂ ವೀಕ್ಷಿಸಿ: ಆರ್‌ಸಿಬಿ ಗೆಲುವಿಗೆ ಸಂಭ್ರಮಿಸಿದ ರಿಷಬ್ ಶೆಟ್ಟಿ ಪುತ್ರಿ : ವಿಡಿಯೋ ವೈರಲ್‌

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more