ಕರೀನಾರನ್ನು ಟೀಕಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ: ನಟಿ ಬೆಂಬಲಕ್ಕೆ ನಿಂತ ಸುಧಾ ಮೂರ್ತಿ!

ಕರೀನಾರನ್ನು ಟೀಕಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ: ನಟಿ ಬೆಂಬಲಕ್ಕೆ ನಿಂತ ಸುಧಾ ಮೂರ್ತಿ!

Published : May 20, 2023, 11:01 AM IST

ಇನ್ಪೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಇತ್ತೀಚೆಗೆ ಬಾಲಿವುಡ್ ನಟಿ ಕರೀನಾ ಕಪೂರ್‌ರನ್ನು ಟೀಕಿಸಿದ್ದರು. ಆದ್ರೆ ನಟಿ ಬೆಂಬಲಕ್ಕೆ ಸುಧಾ ಮೂರ್ತಿ ಬಂದಿದ್ದರು.
 

ಕರೀನಾ ಬಗ್ಗೆಅಚ್ಚರಿಯ ಹೇಳಿಕೆಯನ್ನು ನೀಡಿ ಸುದ್ದಿಯಾಗಿದ್ದಾರೆ ಇನ್ಪೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ನಾರಾಯಾಣ ಮೂರ್ತಿ ಮತ್ತು ಪತಿ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಇತ್ತೀಚೆಗಷ್ಟೆ ಬಾಲಿವುಡ್ ನಟಿ ಕರೀನಾ ಕಪೂರ್ ಬಗ್ಗೆ ಹೇಳಿರುವ ಮಾತುಗಳು ವೈರಲ್ ಆಗಿವೆ.  ನಾರಾಯಣ ಮೂರ್ತಿ ಬಾಲಿವುಡ್ ಸ್ಟಾರ್ ಕರೀನಾ ಕಪೂರ್ ಅವರ ಒಂದು ಘಟನೆಯನ್ನು ಬಹಿರಂಗ ಪಡಿಸಿದರು. ಈ ವರ್ಷದ ಆರಂಭದಲ್ಲಿ ಐಐಟಿ ಕಾನ್ಪುರದಲ್ಲಿ ನಡೆದ ಸಂವಾದದ ಸಂದರ್ಭದಲ್ಲಿ, ಬಿಲಿಯನೇರ್ ದಂಪತಿ ಕರೀನಾ ಕಪೂರ್ ಬಗ್ಗೆ ಮಾತನಾಡಿದರು. ಕರೀನಾ ಯಾಕೆ ಈ ರೀತಿ ವರ್ತಿಸಿದರು ಎಂದು ಚರ್ಚಿಸಿದರು. ಕರೀನಾ ವರ್ತನೆ ಕ್ಷಮಿಸಲು ಸಾಧ್ಯವಿಲ್ಲ ಎಂದು ನಾರಾಯಣ ಮೂರ್ತಿ ಹೇಳಿದರೆ, ಕರೀನಾ ಸುಸ್ತಾಗಿರಬಹುದು ಎಂದು ಸುಧಾ ಮೂರ್ತಿ ಬೆಂಬಲಕ್ಕೆ ನಿಂತರು. ನಾರಾಯಾಣ ಮೂರ್ತಿ ಅವರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಕರೀನಾ ಕಪೂರ್ ಅವರ ಪಕ್ಕದಲ್ಲೇ ಕುಳಿತಿದ್ದರು ಆಗ ನಡೆದ ಒಂದು ಘಟನೆಯನ್ನು ಬಹಿರಂಗ ಪಡಿಸಿ ಕರೀನಾ ವರ್ತನೆ ಇಷ್ಟವಾಗಿಲ್ಲ ಎಂದು ಹೇಳಿದರು. ನಾರಾಯಣ ಮೂರ್ತಿ, 'ನಾನು ಲಂಡನ್ನಿಂದ ಬರುತ್ತಿದ್ದೆ ಆಗ ನನ್ನ ಪಕ್ಕದಲ್ಲಿ ಕರೀನಾ ಕಪೂರ್ ಕುಳಿತಿದ್ದರು. ತುಂಬಾ ಜನರು ಅವರ ಬಳಿ ಬಂದು ಹಲೋ ಹೇಳುತ್ತಿದ್ದರು. ಆದರೆ ಅವರು ಒಂದು ಪ್ರತಿಕ್ರಿಯೆ ಕೂಡ ನೀಡಿಲ್ಲ. ನನೆಗ ಅದು ಆಶ್ಚರ್ಯವಾಯಿತು. ಯಾರೇ ನನ್ನ ಬಳಿ ಬಂದರೂ ನಾನು ಎದ್ದು ನಿಂತು ನಾವು ಒಂದು ನಿಮಿಷ ಅಥವಾ ಅರ್ಧ ನಿಮಿಷ ಮಾತನಾಡಿದೆವು. ಅದನ್ನೇ ಅವರು ನಿರೀಕ್ಷಿಸುತ್ತಿದ್ದರು' ಎಂದು ಹೇಳಿದರು. ನಾರಾಯಣ ಮೂರ್ತಿ ಕರೀನಾ ಕಪೂರ್ ಅವರನ್ನು ಟೀಕಿಸುತ್ತಿದ್ದಂತೆ ಪತ್ನಿ ಸುಧಾ ಮೂರ್ತಿ ಮಧ್ಯ ಬಂದು ಕರೀನಾ ಬೆಂಬಲಕ್ಕೆ ನಿಂತರು. 'ಅವರಿಗೆ ಮಿಲಿಯನ್ ಗಟ್ಟಲೇ ಅಭಿಮಾನಿಗಳು ಇರುತ್ತಾರೆ.  ಅವರು ಸುಸ್ತಾಗಿರಬಹುದು' ಎಂದು ಹೇಳಿದರು. ಪ್ರೇಕ್ಷಕರು ಸುಧಾ ಮೂರ್ತಿ ಅವರನ್ನು ಶ್ಲಾಘಿಸಿದರು.

ಇದನ್ನೂ ವೀಕ್ಷಿಸಿ: ಆರ್‌ಸಿಬಿ ಗೆಲುವಿಗೆ ಸಂಭ್ರಮಿಸಿದ ರಿಷಬ್ ಶೆಟ್ಟಿ ಪುತ್ರಿ : ವಿಡಿಯೋ ವೈರಲ್‌

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more