ಕರೀನಾರನ್ನು ಟೀಕಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ: ನಟಿ ಬೆಂಬಲಕ್ಕೆ ನಿಂತ ಸುಧಾ ಮೂರ್ತಿ!

ಕರೀನಾರನ್ನು ಟೀಕಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ: ನಟಿ ಬೆಂಬಲಕ್ಕೆ ನಿಂತ ಸುಧಾ ಮೂರ್ತಿ!

Published : May 20, 2023, 11:01 AM IST

ಇನ್ಪೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಇತ್ತೀಚೆಗೆ ಬಾಲಿವುಡ್ ನಟಿ ಕರೀನಾ ಕಪೂರ್‌ರನ್ನು ಟೀಕಿಸಿದ್ದರು. ಆದ್ರೆ ನಟಿ ಬೆಂಬಲಕ್ಕೆ ಸುಧಾ ಮೂರ್ತಿ ಬಂದಿದ್ದರು.
 

ಕರೀನಾ ಬಗ್ಗೆಅಚ್ಚರಿಯ ಹೇಳಿಕೆಯನ್ನು ನೀಡಿ ಸುದ್ದಿಯಾಗಿದ್ದಾರೆ ಇನ್ಪೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ನಾರಾಯಾಣ ಮೂರ್ತಿ ಮತ್ತು ಪತಿ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಇತ್ತೀಚೆಗಷ್ಟೆ ಬಾಲಿವುಡ್ ನಟಿ ಕರೀನಾ ಕಪೂರ್ ಬಗ್ಗೆ ಹೇಳಿರುವ ಮಾತುಗಳು ವೈರಲ್ ಆಗಿವೆ.  ನಾರಾಯಣ ಮೂರ್ತಿ ಬಾಲಿವುಡ್ ಸ್ಟಾರ್ ಕರೀನಾ ಕಪೂರ್ ಅವರ ಒಂದು ಘಟನೆಯನ್ನು ಬಹಿರಂಗ ಪಡಿಸಿದರು. ಈ ವರ್ಷದ ಆರಂಭದಲ್ಲಿ ಐಐಟಿ ಕಾನ್ಪುರದಲ್ಲಿ ನಡೆದ ಸಂವಾದದ ಸಂದರ್ಭದಲ್ಲಿ, ಬಿಲಿಯನೇರ್ ದಂಪತಿ ಕರೀನಾ ಕಪೂರ್ ಬಗ್ಗೆ ಮಾತನಾಡಿದರು. ಕರೀನಾ ಯಾಕೆ ಈ ರೀತಿ ವರ್ತಿಸಿದರು ಎಂದು ಚರ್ಚಿಸಿದರು. ಕರೀನಾ ವರ್ತನೆ ಕ್ಷಮಿಸಲು ಸಾಧ್ಯವಿಲ್ಲ ಎಂದು ನಾರಾಯಣ ಮೂರ್ತಿ ಹೇಳಿದರೆ, ಕರೀನಾ ಸುಸ್ತಾಗಿರಬಹುದು ಎಂದು ಸುಧಾ ಮೂರ್ತಿ ಬೆಂಬಲಕ್ಕೆ ನಿಂತರು. ನಾರಾಯಾಣ ಮೂರ್ತಿ ಅವರು ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಕರೀನಾ ಕಪೂರ್ ಅವರ ಪಕ್ಕದಲ್ಲೇ ಕುಳಿತಿದ್ದರು ಆಗ ನಡೆದ ಒಂದು ಘಟನೆಯನ್ನು ಬಹಿರಂಗ ಪಡಿಸಿ ಕರೀನಾ ವರ್ತನೆ ಇಷ್ಟವಾಗಿಲ್ಲ ಎಂದು ಹೇಳಿದರು. ನಾರಾಯಣ ಮೂರ್ತಿ, 'ನಾನು ಲಂಡನ್ನಿಂದ ಬರುತ್ತಿದ್ದೆ ಆಗ ನನ್ನ ಪಕ್ಕದಲ್ಲಿ ಕರೀನಾ ಕಪೂರ್ ಕುಳಿತಿದ್ದರು. ತುಂಬಾ ಜನರು ಅವರ ಬಳಿ ಬಂದು ಹಲೋ ಹೇಳುತ್ತಿದ್ದರು. ಆದರೆ ಅವರು ಒಂದು ಪ್ರತಿಕ್ರಿಯೆ ಕೂಡ ನೀಡಿಲ್ಲ. ನನೆಗ ಅದು ಆಶ್ಚರ್ಯವಾಯಿತು. ಯಾರೇ ನನ್ನ ಬಳಿ ಬಂದರೂ ನಾನು ಎದ್ದು ನಿಂತು ನಾವು ಒಂದು ನಿಮಿಷ ಅಥವಾ ಅರ್ಧ ನಿಮಿಷ ಮಾತನಾಡಿದೆವು. ಅದನ್ನೇ ಅವರು ನಿರೀಕ್ಷಿಸುತ್ತಿದ್ದರು' ಎಂದು ಹೇಳಿದರು. ನಾರಾಯಣ ಮೂರ್ತಿ ಕರೀನಾ ಕಪೂರ್ ಅವರನ್ನು ಟೀಕಿಸುತ್ತಿದ್ದಂತೆ ಪತ್ನಿ ಸುಧಾ ಮೂರ್ತಿ ಮಧ್ಯ ಬಂದು ಕರೀನಾ ಬೆಂಬಲಕ್ಕೆ ನಿಂತರು. 'ಅವರಿಗೆ ಮಿಲಿಯನ್ ಗಟ್ಟಲೇ ಅಭಿಮಾನಿಗಳು ಇರುತ್ತಾರೆ.  ಅವರು ಸುಸ್ತಾಗಿರಬಹುದು' ಎಂದು ಹೇಳಿದರು. ಪ್ರೇಕ್ಷಕರು ಸುಧಾ ಮೂರ್ತಿ ಅವರನ್ನು ಶ್ಲಾಘಿಸಿದರು.

ಇದನ್ನೂ ವೀಕ್ಷಿಸಿ: ಆರ್‌ಸಿಬಿ ಗೆಲುವಿಗೆ ಸಂಭ್ರಮಿಸಿದ ರಿಷಬ್ ಶೆಟ್ಟಿ ಪುತ್ರಿ : ವಿಡಿಯೋ ವೈರಲ್‌

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more