Puneeth Rajkumar Fans: ಅಪ್ಪು ಕೋಟ್ಯಾಧಿಪತಿಯಿಂದ ಸ್ಫೂರ್ತಿ ಪಡೆದು ಅಣ್ಣ -ತಂಗಿ ಸಾಧನೆ!

Puneeth Rajkumar Fans: ಅಪ್ಪು ಕೋಟ್ಯಾಧಿಪತಿಯಿಂದ ಸ್ಫೂರ್ತಿ ಪಡೆದು ಅಣ್ಣ -ತಂಗಿ ಸಾಧನೆ!

Published : Jan 25, 2022, 01:28 PM IST

ಕನ್ನಡದ ಮನೆಯ ಮಗ ಪುನೀತ್ ರಾಜ್‌ಕುಮಾರ್ ಈಗ ನೆನಪು ಮಾತ್ರ. ಆದರೂ ಪುನೀತ್ ರಾಜ್‌ಕುಮಾರ್ ನಡೆಸಿಕೊಟ್ಟ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ನೋಡಿದ ಇಬ್ಬರು ಬಡ ಮಕ್ಕಳು ಅಪ್ಪುನ ಮಾತಿನಿಂದಾಗಿ ಸ್ಫೂರ್ತಿ ಪಡೆದು ಈಗ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ್ದಾರೆ. ಹೇಗೆ ? ಯಾರು ಆ ಮಕ್ಕಳು ಅಂತೀರಾ ಈ ವಿಡಿಯೋ ನೋಡಿ.

ಕೈಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನ  ದಾಖಲೆ ಪತ್ರ ಹಿಡಿದುಕೊಂಡು ನಿಂತಿರೋ ಈ ಇಬ್ಬರು ಮಕ್ಕಳು ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದವರು. ಅಣ್ಣ ಶಿವರಾಜ್ 4 ನೇ ಕ್ಲಾಸ್ ಓದುತ್ತಿದ್ದರೆ, ತಂಗಿ ಸಂಜನಾ 3ನೇ ಕ್ಲಾಸ್‌ನಲ್ಲಿ ಓದುತ್ತಿದ್ದಾಳೆ. ಈ ಪುಟಾಣಿಗಳು ಇಬ್ಬರು ತಮ್ಮ ವಯಸ್ಸಿಗೆ ಮೀರಿದ ಪ್ರತಿಭೆ ಪ್ರದರ್ಶನ ಮಾಡಿ 2022ರ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ್ದಾರೆ. ಅಪ್ಪು ಆರಾಧನೆ ಮಾಡೊ ಇವರಿಬ್ಬರಿಗೂ ಅಪ್ಪು ನಡೆಸಿಕೊಡುತ್ತಿದ್ದ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ಸ್ಪೂರ್ತಿಯಾಗಿತ್ತು. ಮಕ್ಕಳು ಸಾಮಾನ್ಯ ಜ್ಞಾನದ ಜೊತೆಗೆ ಈವರೆಗೆ ನಟ ಪುನೀತ್ ರಾಜ್ಕುಮಾರ್ ಅಭಿನಯದ ಎಲ್ಲಾ ಸಿನಿಮಾಗಳ ಹೆಸರುಗಳು ಸಹ ಪಟಪಟ ಅಂತ ಹೇಳಿಬಿಡುತ್ತಾರೆ. ಇಬ್ಬರು ಮಕ್ಕಳಿಗೆ ಯುವರತ್ನ ಅಪ್ಪುವಿನ ಕನ್ನಡದ ಕೋಟ್ಯಾಧಿಪತಿಯೇ ಸ್ಫೂರ್ತಿಯಾಗಿತ್ತು ಅಂತರೇ ಮಕ್ಕಳ ತಾಯಿ.

ಪವರ್ ಸ್ಟಾರ್ ಕೊನೇ ಚಿತ್ರ 'ಜೇಮ್ಸ್‌' ಶೂಟಿಂಗ್ ಕಂಪ್ಲೀಟ್‌

ಇನ್ನೂ ಶಿವರಾಜ್ ಹಾಗೂ ಸಂಜನಾ ತಲಾ 10 ಸಾವಿರಕ್ಕೂ ಹೆಚ್ಚು ಸಾಮಾನ್ಯ ಜ್ಞಾನ ಪ್ರಶ್ನೆಗಳಿಗೆ ಉತ್ತರ ನೀಡುವ ಮೂಲಕ ಇಂಥದ್ದೊಂದು ಅಪರೂಪದ ಸಾಧನೆ ಮಾಡಿದ್ದಾರೆ. ಕೊರೊನಾ ಹಿನ್ನೆಲೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಪತ್ರಗಳನ್ನು ಪೋಸ್ಟ್ ಮುಖಾಂತರ ಕಳುಹಿಸಲಾಗಿದೆ. ದುರದೃಷ್ಟವಶಾತ್ ಪುನೀತ್ ನಮ್ಮೊಂದಿಗಿಲ್ಲ..ಹೀಗಾಗಿ ನಟ ಶಿವಣ್ಣ ಅಥವಾ ರಾಘಣ್ಣ ಯಾರಾದ್ರೂ ಅಪ್ಪು ಅವರ ಸ್ಥಾನದಲ್ಲಿ ನಿಂತು ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಮಾಣ ಪತ್ರವನ್ನು ನಮಗೆ ಹಸ್ತಾಂತರಿಸಬೇಕು ಎನ್ನುವ ಬಯಕೆ ಮಕ್ಕಳದು.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more