ಬೆಳ್ಳಿತೆರೆಗೆ ಎಂಟ್ರಿ ಕೊಡಲು ಸಜ್ಜಾದ ಜನಾರ್ದನ ರೆಡ್ಡಿ ಪುತ್ರ Kireeti

ಬೆಳ್ಳಿತೆರೆಗೆ ಎಂಟ್ರಿ ಕೊಡಲು ಸಜ್ಜಾದ ಜನಾರ್ದನ ರೆಡ್ಡಿ ಪುತ್ರ Kireeti

Suvarna News   | Asianet News
Published : Mar 03, 2022, 01:28 PM IST

ಮಾಜಿ ಸಚಿವ ಜನಾರ್ದನ ​ರೆಡ್ಡಿ ಮಗ ಕಿರೀಟಿ ರೆಡ್ಡಿ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದು, ಮಾರ್ಚ್ 4ರಂದು ಚಿತ್ರದ ಅದ್ದೂರಿ ಮುಹೂರ್ತ ನಡೆಯಲಿದೆ.  'ಬಾಹುಬಲಿ' ಖ್ಯಾತಿಯ ನಿರ್ದೇಶಕ ರಾಜಮೌಳಿ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಲಿದ್ದಾರೆ.

ಮಾಜಿ ಸಚಿವ ಜನಾರ್ದನ ​ರೆಡ್ಡಿ (Janardhan Reddy) ಮಗ ಕಿರೀಟಿ ರೆಡ್ಡಿ (Kireeti Reddy) ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದು, ಮಾರ್ಚ್ 4ರಂದು ಚಿತ್ರದ ಅದ್ದೂರಿ ಮುಹೂರ್ತ ನಡೆಯಲಿದೆ. 'ಬಾಹುಬಲಿ' ಖ್ಯಾತಿಯ ನಿರ್ದೇಶಕ ಎಸ್‌ ಎಸ್‌ ರಾಜಮೌಳಿ (SS Rajamouli) ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಲಿದ್ದು, ಆ ಮೂಲಕ ರಾಜಮೌಳಿ ಮೊದಲ ಬಾರಿಗೆ ಕನ್ನಡ ಚಿತ್ರಕ್ಕೆ ಕ್ಲಾಪ್‌ ಮಾಡಿದಂತೆ ಆಗಲಿದೆ. ವಾರಾಹಿ ಪ್ರೊಡಕ್ಷನ್‌ ಹೌಸ್‌ ಮೂಲಕ ಸಾಯಿ ಕೊರಪಾಠಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಮಾಯಾ ಬಜಾರ್‌ ಸಿನಿಮಾ ಖ್ಯಾತಿಯ ರಾಧಾಕೃಷ್ಣ (Radha Krishna) ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. 

Duniya Vijay: ಹೊಸ ಚಿತ್ರದ ಟೈಟಲ್ ರಿವೀಲ್ ಮಾಡಿದ ಸಲಗ!

ತೆಲುಗು ಹಾಗೂ ಕನ್ನಡದಲ್ಲಿ ಮೂಡಿ ಬರುತ್ತಿರುವ ಚಿತ್ರವಿದು. ಟಾಲಿವುಡ್‌ನ ದೇವಿಶ್ರೀ ಪ್ರಸಾದ್‌ (Devi Sri Prasad) ಸಂಗೀತ, ಬಾಹುಬಲಿ ಚಿತ್ರಕ್ಕೆ ಕ್ಯಾಮೆರಾ ಹಿಡಿದ್ದ ಕೆ ಸೆಂಥಿಲ್ ಕುಮಾರ್‌ ಛಾಯಾಗ್ರಹಣ ಇರಲಿದೆ. ರವೀಂದರ್‌ ಕಲಾ ನಿರ್ದೇಶನ, ಖ್ಯಾತ ಸ್ಟಂಟ್‌ ಮಾಸ್ಟರ್‌ ಪೀಟರ್‌ ಹೀನ್‌ (Peter Hein) ಸಾಹಸ ಸಂಯೋಜನೆ ಚಿತ್ರಕ್ಕಿದೆ. ಚಿಕ್ಕ ವಯಸ್ಸಿನಲ್ಲೇ ಕಿರೀಟಿ ರೆಡ್ಡಿಗೆ ಸಿನಿಮಾರಂಗದ ಮೇಲೆ ಆಸಕ್ತಿ ಬೆಳೆದಿತ್ತು. ‘ಜಾಕಿ’ ಚಿತ್ರ ತೆರೆಕಂಡಾಗ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರೊಟ್ಟಿಗೆ ಸಿನಿಮಾ ನೋಡುವ ಅವಕಾಶವೂ ಕಿರೀಟಿಗೆ ಲಭ್ಯವಾಗಿತ್ತು. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more