ಮುತ್ತುರಾಜನ ಹಾದಿಯಲ್ಲಿಯೇ ನಡೆದ ಅಪ್ಪು: ಪುನೀತ್ ರಾಜ್‌ಕುಮಾರ್ ಇನ್ನು ಕರ್ನಾಟಕ ರತ್ನ

ಮುತ್ತುರಾಜನ ಹಾದಿಯಲ್ಲಿಯೇ ನಡೆದ ಅಪ್ಪು: ಪುನೀತ್ ರಾಜ್‌ಕುಮಾರ್ ಇನ್ನು ಕರ್ನಾಟಕ ರತ್ನ

Suvarna News   | Asianet News
Published : Nov 17, 2021, 01:19 PM IST

ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಇಡೀ ಜಗತ್ತು ನಮನ ಸಲ್ಲಿಸಿದ್ದು, ಮರಣೋತ್ತರ ಕರ್ನಾಟಕ ರತ್ನ ಪುರಸ್ಕಾರವನ್ನು ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದೆ.

ಬೆಂಗಳೂರು (ನ.17):  ಸ್ಯಾಂಡಲ್‌ವುಡ್‌ನ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್  (Puneeth Rajkumar) ಅವರಿಗೆ ಇಡೀ ಜಗತ್ತು ನಮನ ಸಲ್ಲಿಸಿದ್ದು, ಮರಣೋತ್ತರ ಕರ್ನಾಟಕ ರತ್ನ (Karnataka Ratna) ಪುರಸ್ಕಾರವನ್ನು ಕರ್ನಾಟಕ ರಾಜ್ಯ (Karnataka Govt) ಸರ್ಕಾರ ಘೋಷಿಸಿದೆ. ಈ ಅತ್ಯುನ್ನತ ನಾಗರಿಕ ಪುರಸ್ಕಾರ ಕರ್ನಾಟಕ ರತ್ನಕ್ಕೆ ಭಾಜನರಾದ 10ನೇ ವ್ಯಕ್ತಿ ಹಾಗೂ ಮರಣೋತ್ತರವಾಗಿ ಪ್ರಶಸ್ತಿಗೆ ಪಾತ್ರರಾಗುತ್ತಿರುವ ಮೊದಲ ವ್ಯಕ್ತಿ ಕೂಡಾ ಹೌದು. ಈ ಪ್ರಶಸ್ತಿಯನ್ನು ಈವರೆಗೆ ಒಂಬತ್ತು ಗಣ್ಯರಿಗೆ ನೀಡಲಾಗಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಕಡೆಯದಾಗಿ ನೀಡಲಾಗಿತ್ತು.

Puneeth Rajkumar ಪ್ರೇರಣೆ: ನೇತ್ರದಾನದಲ್ಲಿ ದಾಖಲೆಯ ಏರಿಕೆ

ಯಾವುದೇ ಕ್ಷೇತ್ರದಲ್ಲಿ ಅತ್ಯಂತ ವಿಶಿಷ್ಟ ಸೇವೆ ಸಲ್ಲಿಸಿರುವ ಗಣ್ಯರಿಗೆ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ 1992ರಿಂದ 'ಕರ್ನಾಟಕ ರತ್ನ' ಪ್ರಶಸ್ತಿ ಸ್ಥಾಪಿಸಿತು. ಮೊದಲ ಪ್ರಶಸ್ತಿಯನ್ನು ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿರುವ ಕೊಡುಗೆಗಾಗಿ ರಾಷ್ಟ್ರಕವಿ ಕುವೆಂಪು ಹಾಗೂ ಸಿನಿಮಾ ಮತ್ತು ಸಂಗೀತ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆ ಪರಿಗಣಿಸಿ 'ನಟಸಾರ್ವಭೌಮ' ಡಾ. ರಾಜಕುಮಾರ್‌ ಅವರಿಗೆ 1992ರಲ್ಲಿ ಪ್ರದಾನ ಮಾಡಲಾಯಿತು. ಇದೀಗ ಮರಣೋತ್ತರವಾಗಿ ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಸಿಕ್ಕಿದ್ದು, ಅಪ್ಪನ ಹಾದಿಯಲ್ಲಿಯೇ ನಡೆದಿದ್ದಾರೆ. ಇನ್ನು ಅಪ್ಪು ಕರ್ನಾಟಕ ರತ್ನ ಪಡೆದ ಸಿನಿಮಾ ರಂಗದ ಎರಡನೇ ವ್ಯಕ್ತಿ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
Read more