ರೂಪಾಂತರ ಚಿತ್ರದ ಮೂಲಕ ಬೆಂಗಳೂರು ರೌಡಿಸಂಗೆ Raj B Shetty ಎಂಟ್ರಿ!

ರೂಪಾಂತರ ಚಿತ್ರದ ಮೂಲಕ ಬೆಂಗಳೂರು ರೌಡಿಸಂಗೆ Raj B Shetty ಎಂಟ್ರಿ!

Suvarna News   | Asianet News
Published : Jan 26, 2022, 01:43 PM ISTUpdated : Jan 26, 2022, 01:47 PM IST

'ಗರುಡ ಗಮನ ವೃಷಭ ವಾಹನ' ಸಿನಿಮಾದ ಯಶಸ್ಸಿನಲ್ಲಿರುವ ನಟ, ನಿರ್ದೇಶಕ ರಾಜ್‌ ಬಿ. ಶೆಟ್ಟಿ ವಿಭಿನ್ನ ಶೈಲಿಯ ಕಥೆಯಿರುವ ಮತ್ತೊಂದು ಸಿನಿಮಾದಲ್ಲಿ ನಟಿಸಿದ್ದಾರೆ. ಅದೂ ಬೆಂಗಳೂರಿಗನ ಡಾನ್ ಪಾತ್ರ ಇದಾಗಿರುವುದು ವಿಶೇಷ.

'ಒಂದು ಮೊಟ್ಟೆಯ ಕಥೆ' (Ondu Mottea kathe) ಚಿತ್ರದ ಮೂಲಕ ಜನಾರ್ದನ್ ಆಗಿ ಪರಿಚಯವಾದ ನಟ ರಾಜ್‌ ಬಿ ಶೆಟ್ಟಿ (Raj B Shetty) ಅತಿ ಹೆಚ್ಚು ಬೇಡಿಕೆಯ ನಟನಾಗಿ ಗುರುತಿಸಿಕೊಂಡಿದ್ದಾರೆ. ಇತ್ತೀಚಿನ ಸಿನಿಮಾ 'ಗರುಡಗಮನ ವೃಷಭವಾಹನ' ಗ್ಯಾಂಗ್‌ಸ್ಟರ್‌ ಚಿತ್ರದಲ್ಲಿಯೂ ರಾಜ್ ಸಖತ್ ಆಗಿ ಮಿಂಚಿದ್ದಾರೆ. ಇದೀಗ ವಿಭಿನ್ನ ಶೈಲಿಯ ನಿರೂಪಣೆಯ ಸಿನಿಮಾದಲ್ಲಿ ಅವರು ನಟಿಸಿದ್ದು, ಅದರ ಹೆಸರು 'ರೂಪಾಂತರ' (Roopantara). ಈ ಚಿತ್ರದಲ್ಲಿ ರಾಜ್ ಬಿ ಶೆಟ್ಟಿ ರೌಡಿಯ ಪಾತ್ರ ನಿರ್ವಹಿಸಿದ್ದಾರೆ. ಅದೂ ಬೆಂಗಳೂರಿಗನ ಡಾನ್ ಪಾತ್ರ ಇದಾಗಿರುವುದು ವಿಶೇಷ.

ಮುದ್ದು ಮಗಳಿಗೆ ವೀಕೆಂಡ್‌ನಲ್ಲಿ ಕನ್ನಡದ ಪಾಠ ಮಾಡಿದ Yash!

ಈಗಾಗಲೇ 'ರೂಪಾಂತರ' ಚಿತ್ರದ ಚಿತ್ರೀಕರಣವೂ ಮುಗಿದಿದೆ. ಮಿಥಿಲೇಶ್‌ ಎಡವಲದ್‌ ಎಂಬುವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.  'ಒಂದು ಮೊಟ್ಟೆಯ ಕಥೆ' ಸಿನಿಮಾವನ್ನು ನಿರ್ಮಾಣ ಮಾಡಿದ್ದ ಸುಹಾಸ್‌ 'ರೂಪಾಂತರ'ಕ್ಕೂ ಹಣ ಹೂಡಿದ್ದಾರೆ. 'ಗರುಡ ಗಮನ ವೃಷಭ ವಾಹನ' ರೀತಿ ನನಗೆ ಖುಷಿ ಕೊಟ್ಟ ಪ್ರಾಜೆಕ್ಟ್ ಇದು. ಇಂಟ್ರೆಸ್ಟಿಂಗ್‌ ಕಥೆಯನ್ನು ಈ ಸಿನಿಮಾ ಹೊಂದಿದೆ. ಮನುಷ್ಯ ಬೇರೆ ಬೇರೆ ಸಂದರ್ಭಗಳಲ್ಲಿ ಬದಲಾಗುತ್ತಾನೆ. ಅಂತಹ ಒಂದು ಬದಲಾವಣೆಯ ಕಥೆ ಈ ಚಿತ್ರದಲ್ಲಿದೆ. ನಾನು ಇದರಲ್ಲಿ ಬೆಂಗಳೂರು ಮೂಲದ ರೌಡಿಯಾಗಿರುತ್ತೇನೆ ಎಂದು ರಾಜ್ ಬಿ ಶೆಟ್ಟಿ ತಿಳಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more