Ravichandran: 'ಕನ್ನಡಿಗ' ಚಿತ್ರದ ಹಾಡಿಗೆ ದನಿಯಾದ ಶಿವರಾಜ್‌ಕುಮಾರ್

Ravichandran: 'ಕನ್ನಡಿಗ' ಚಿತ್ರದ ಹಾಡಿಗೆ ದನಿಯಾದ ಶಿವರಾಜ್‌ಕುಮಾರ್

Suvarna News   | Asianet News
Published : Nov 25, 2021, 02:11 PM ISTUpdated : Nov 25, 2021, 02:43 PM IST

ಸ್ಯಾಂಡಲ್‌ವುಡ್‌ನ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅಭಿನಯದ ಕನ್ನಡಿಗ ಸಿನಿಮಾದ ಸರಿಗನ್ನಡಂ ಏಳ್ಗೆ, ಕನ್ನಡಂ ಬಾಳ್ಗೆ, ಕನ್ನಡ ನಮ್ ಪಾಲ್ಗೆ ಟೈಟಲ್ ಹಾಡನ್ನು ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಹಾಡಿದ್ದಾರೆ. 

ಸ್ಯಾಂಡಲ್‌ವುಡ್‌ನ ಕ್ರೇಜಿಸ್ಟಾರ್ ವಿ.ರವಿಚಂದ್ರನ್ (V.Ravichandran)​ ಅಭಿನಯದ 'ಕನ್ನಡಿಗ' (Kannadiga) ಸಿನಿಮಾದ ಟೈಟಲ್ ಹಾಡನ್ನು ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ (Shiva Rajkumar) ಹಾಡಿದ್ದಾರೆ. ಹೌದು! ಶಿವಣ್ಣ ಚಿತ್ರದಲ್ಲಿ ಅಭಿನಯಿಸುವ ಜೊತೆಗೆ ಸಾಕಷ್ಟು ಹಾಡುಗಳನ್ನು ಸಹ ಹಾಡಿದ್ದಾರೆ. ಇದೀಗ 'ಕನ್ನಡಿಗ' ಚಿತ್ರದ 'ಸರಿಗನ್ನಡಂ ಏಳ್ಗೆ, ಕನ್ನಡಂ ಬಾಳ್ಗೆ, ಕನ್ನಡ ನಮ್ ಪಾಲ್ಗೆ' ಎಂಬ ಹಾಡನ್ನು ಶಿವಣ್ಣ ಹಾಡಿದ್ದು, ಸಿನಿಪ್ರಿಯರಿಗೆ ಇಷ್ಟವಾಗಿದೆ. ಈ ಹಾಡಿಗೆ ಖ್ಯಾತ ನಿರ್ದೇಶಕ ಸಂತೋಷ್​ ಆನಂದ್​ರಾಮ್​ (Santhosh Ananddram) ಅವರು ಸಾಹಿತ್ಯ ಬರೆದಿದ್ದು, 'ಕೆಜಿಎಫ್' ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ ರವಿ ಬಸ್ರೂರ್ (Ravi Basrur)​ ಅವರು ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ.

'ಹಿರೋನೂ ಇವನೇ ವಿಲನ್ನು ಇವನೇ' ರವಿ ಬೋಪಣ್ಣ ಬಂದರೆ ಪೀಸ್ ಪೀಸ್

'ಕನ್ನಡಿಗ' ಚಿತ್ರ ಹೆಸರೇ ಹೇಳುವಂತೆ ಇದೊಂದು ಕನ್ನಡಿಗನ ಕಥೆ ಹೇಳುತ್ತದೆ ಎಂಬುದು ಗೊತ್ತಾಗುತ್ತದೆ. ಓಂಕಾರ್​ ಮೂವೀಸ್​ ಬ್ಯಾನರ್​ ಅಡಿಯಲ್ಲಿಈ ಚಿತ್ರ ತಯಾರಾಗಿದ್ದು, ಎನ್​.ಎಸ್​.ರಾಜ್​ಕುಮಾರ್​ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಬಿ.ಎಂ. ಗಿರಿರಾಜ್​ ಅವರು ಈ ಸಿನಿಮಾದ ಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಪಾವನಾ, ಜೀವಿಕಾ, ಜಗದೀಶ್​ ಮೈತ್ರಿ, ಬಾಲಾಜಿ ಮನೋಹರ್​, ಅಚ್ಯುತ್​ ಕುಮಾರ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಇನ್ನು ಶಿವಣ್ಣ ಈ ಹಾಡನ್ನು ಪುನೀತ್ ರಾಜ್‌ಕುಮಾರ್ (Puneeth Rajkumar)​ ನಿಧನ ಹೊಂದುವುದಕ್ಕೂ ಮೊದಲೇ ಹಾಡಿದ್ದರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more