Ravichandran: 'ಕನ್ನಡಿಗ' ಚಿತ್ರದ ಹಾಡಿಗೆ ದನಿಯಾದ ಶಿವರಾಜ್‌ಕುಮಾರ್

Ravichandran: 'ಕನ್ನಡಿಗ' ಚಿತ್ರದ ಹಾಡಿಗೆ ದನಿಯಾದ ಶಿವರಾಜ್‌ಕುಮಾರ್

Suvarna News   | Asianet News
Published : Nov 25, 2021, 02:11 PM ISTUpdated : Nov 25, 2021, 02:43 PM IST

ಸ್ಯಾಂಡಲ್‌ವುಡ್‌ನ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅಭಿನಯದ ಕನ್ನಡಿಗ ಸಿನಿಮಾದ ಸರಿಗನ್ನಡಂ ಏಳ್ಗೆ, ಕನ್ನಡಂ ಬಾಳ್ಗೆ, ಕನ್ನಡ ನಮ್ ಪಾಲ್ಗೆ ಟೈಟಲ್ ಹಾಡನ್ನು ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಹಾಡಿದ್ದಾರೆ. 

ಸ್ಯಾಂಡಲ್‌ವುಡ್‌ನ ಕ್ರೇಜಿಸ್ಟಾರ್ ವಿ.ರವಿಚಂದ್ರನ್ (V.Ravichandran)​ ಅಭಿನಯದ 'ಕನ್ನಡಿಗ' (Kannadiga) ಸಿನಿಮಾದ ಟೈಟಲ್ ಹಾಡನ್ನು ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ (Shiva Rajkumar) ಹಾಡಿದ್ದಾರೆ. ಹೌದು! ಶಿವಣ್ಣ ಚಿತ್ರದಲ್ಲಿ ಅಭಿನಯಿಸುವ ಜೊತೆಗೆ ಸಾಕಷ್ಟು ಹಾಡುಗಳನ್ನು ಸಹ ಹಾಡಿದ್ದಾರೆ. ಇದೀಗ 'ಕನ್ನಡಿಗ' ಚಿತ್ರದ 'ಸರಿಗನ್ನಡಂ ಏಳ್ಗೆ, ಕನ್ನಡಂ ಬಾಳ್ಗೆ, ಕನ್ನಡ ನಮ್ ಪಾಲ್ಗೆ' ಎಂಬ ಹಾಡನ್ನು ಶಿವಣ್ಣ ಹಾಡಿದ್ದು, ಸಿನಿಪ್ರಿಯರಿಗೆ ಇಷ್ಟವಾಗಿದೆ. ಈ ಹಾಡಿಗೆ ಖ್ಯಾತ ನಿರ್ದೇಶಕ ಸಂತೋಷ್​ ಆನಂದ್​ರಾಮ್​ (Santhosh Ananddram) ಅವರು ಸಾಹಿತ್ಯ ಬರೆದಿದ್ದು, 'ಕೆಜಿಎಫ್' ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ ರವಿ ಬಸ್ರೂರ್ (Ravi Basrur)​ ಅವರು ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ.

'ಹಿರೋನೂ ಇವನೇ ವಿಲನ್ನು ಇವನೇ' ರವಿ ಬೋಪಣ್ಣ ಬಂದರೆ ಪೀಸ್ ಪೀಸ್

'ಕನ್ನಡಿಗ' ಚಿತ್ರ ಹೆಸರೇ ಹೇಳುವಂತೆ ಇದೊಂದು ಕನ್ನಡಿಗನ ಕಥೆ ಹೇಳುತ್ತದೆ ಎಂಬುದು ಗೊತ್ತಾಗುತ್ತದೆ. ಓಂಕಾರ್​ ಮೂವೀಸ್​ ಬ್ಯಾನರ್​ ಅಡಿಯಲ್ಲಿಈ ಚಿತ್ರ ತಯಾರಾಗಿದ್ದು, ಎನ್​.ಎಸ್​.ರಾಜ್​ಕುಮಾರ್​ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಬಿ.ಎಂ. ಗಿರಿರಾಜ್​ ಅವರು ಈ ಸಿನಿಮಾದ ಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಪಾವನಾ, ಜೀವಿಕಾ, ಜಗದೀಶ್​ ಮೈತ್ರಿ, ಬಾಲಾಜಿ ಮನೋಹರ್​, ಅಚ್ಯುತ್​ ಕುಮಾರ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಇನ್ನು ಶಿವಣ್ಣ ಈ ಹಾಡನ್ನು ಪುನೀತ್ ರಾಜ್‌ಕುಮಾರ್ (Puneeth Rajkumar)​ ನಿಧನ ಹೊಂದುವುದಕ್ಕೂ ಮೊದಲೇ ಹಾಡಿದ್ದರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more