Ravichandran: 'ಕನ್ನಡಿಗ' ಚಿತ್ರದ ಹಾಡಿಗೆ ದನಿಯಾದ ಶಿವರಾಜ್‌ಕುಮಾರ್

Ravichandran: 'ಕನ್ನಡಿಗ' ಚಿತ್ರದ ಹಾಡಿಗೆ ದನಿಯಾದ ಶಿವರಾಜ್‌ಕುಮಾರ್

Suvarna News   | Asianet News
Published : Nov 25, 2021, 02:11 PM ISTUpdated : Nov 25, 2021, 02:43 PM IST

ಸ್ಯಾಂಡಲ್‌ವುಡ್‌ನ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅಭಿನಯದ ಕನ್ನಡಿಗ ಸಿನಿಮಾದ ಸರಿಗನ್ನಡಂ ಏಳ್ಗೆ, ಕನ್ನಡಂ ಬಾಳ್ಗೆ, ಕನ್ನಡ ನಮ್ ಪಾಲ್ಗೆ ಟೈಟಲ್ ಹಾಡನ್ನು ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ಹಾಡಿದ್ದಾರೆ. 

ಸ್ಯಾಂಡಲ್‌ವುಡ್‌ನ ಕ್ರೇಜಿಸ್ಟಾರ್ ವಿ.ರವಿಚಂದ್ರನ್ (V.Ravichandran)​ ಅಭಿನಯದ 'ಕನ್ನಡಿಗ' (Kannadiga) ಸಿನಿಮಾದ ಟೈಟಲ್ ಹಾಡನ್ನು ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ (Shiva Rajkumar) ಹಾಡಿದ್ದಾರೆ. ಹೌದು! ಶಿವಣ್ಣ ಚಿತ್ರದಲ್ಲಿ ಅಭಿನಯಿಸುವ ಜೊತೆಗೆ ಸಾಕಷ್ಟು ಹಾಡುಗಳನ್ನು ಸಹ ಹಾಡಿದ್ದಾರೆ. ಇದೀಗ 'ಕನ್ನಡಿಗ' ಚಿತ್ರದ 'ಸರಿಗನ್ನಡಂ ಏಳ್ಗೆ, ಕನ್ನಡಂ ಬಾಳ್ಗೆ, ಕನ್ನಡ ನಮ್ ಪಾಲ್ಗೆ' ಎಂಬ ಹಾಡನ್ನು ಶಿವಣ್ಣ ಹಾಡಿದ್ದು, ಸಿನಿಪ್ರಿಯರಿಗೆ ಇಷ್ಟವಾಗಿದೆ. ಈ ಹಾಡಿಗೆ ಖ್ಯಾತ ನಿರ್ದೇಶಕ ಸಂತೋಷ್​ ಆನಂದ್​ರಾಮ್​ (Santhosh Ananddram) ಅವರು ಸಾಹಿತ್ಯ ಬರೆದಿದ್ದು, 'ಕೆಜಿಎಫ್' ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ ರವಿ ಬಸ್ರೂರ್ (Ravi Basrur)​ ಅವರು ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ.

'ಹಿರೋನೂ ಇವನೇ ವಿಲನ್ನು ಇವನೇ' ರವಿ ಬೋಪಣ್ಣ ಬಂದರೆ ಪೀಸ್ ಪೀಸ್

'ಕನ್ನಡಿಗ' ಚಿತ್ರ ಹೆಸರೇ ಹೇಳುವಂತೆ ಇದೊಂದು ಕನ್ನಡಿಗನ ಕಥೆ ಹೇಳುತ್ತದೆ ಎಂಬುದು ಗೊತ್ತಾಗುತ್ತದೆ. ಓಂಕಾರ್​ ಮೂವೀಸ್​ ಬ್ಯಾನರ್​ ಅಡಿಯಲ್ಲಿಈ ಚಿತ್ರ ತಯಾರಾಗಿದ್ದು, ಎನ್​.ಎಸ್​.ರಾಜ್​ಕುಮಾರ್​ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಬಿ.ಎಂ. ಗಿರಿರಾಜ್​ ಅವರು ಈ ಸಿನಿಮಾದ ಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಪಾವನಾ, ಜೀವಿಕಾ, ಜಗದೀಶ್​ ಮೈತ್ರಿ, ಬಾಲಾಜಿ ಮನೋಹರ್​, ಅಚ್ಯುತ್​ ಕುಮಾರ್​ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಇನ್ನು ಶಿವಣ್ಣ ಈ ಹಾಡನ್ನು ಪುನೀತ್ ರಾಜ್‌ಕುಮಾರ್ (Puneeth Rajkumar)​ ನಿಧನ ಹೊಂದುವುದಕ್ಕೂ ಮೊದಲೇ ಹಾಡಿದ್ದರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more