Arjun Gowda: ವರ್ಷಾಂತ್ಯಕ್ಕೆ ತೆರೆಮೇಲೆ ಬರಲಿದ್ದಾನೆ ಡೈನಾಮಿಕ್ ಪ್ರಿನ್ಸ್

Arjun Gowda: ವರ್ಷಾಂತ್ಯಕ್ಕೆ ತೆರೆಮೇಲೆ ಬರಲಿದ್ದಾನೆ ಡೈನಾಮಿಕ್ ಪ್ರಿನ್ಸ್

Suvarna News   | Asianet News
Published : Dec 21, 2021, 04:38 PM IST

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹಾಗೂ ಪ್ರಿಯಾಂಕಾ ತಿಮ್ಮೇಶ್ ಜೊತೆಯಾಗಿ ನಟಿಸಿರುವ 'ಅರ್ಜುನ್ ಗೌಡ' ಚಿತ್ರ ತೆರೆಗೆ ಬರಲು ಸಜ್ಜಾಗಿದ್ದು, ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಹೀಗಾಗಿ ಇಡೀ ಚಿತ್ರತಂಡ ಇತ್ತೀಚೆಗೆ ಸುದ್ದಿಗೋಷ್ಟಿಯನ್ನು ನಡೆಸಿ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. 

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಹಾಗೂ ಪ್ರಿಯಾಂಕಾ ತಿಮ್ಮೇಶ್ (Priyanka Thimmesh) ಜೊತೆಯಾಗಿ ನಟಿಸಿರುವ 'ಅರ್ಜುನ್ ಗೌಡ' ಚಿತ್ರ ತೆರೆಗೆ ಬರಲು ಸಜ್ಜಾಗಿದ್ದು, ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಹೀಗಾಗಿ ಇಡೀ ಚಿತ್ರತಂಡ ಇತ್ತೀಚೆಗೆ ಸುದ್ದಿಗೋಷ್ಟಿಯನ್ನು ನಡೆಸಿ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಫಸ್ಟ್‌ಲುಕ್, ಟೀಸರ್, ಹಾಗೂ ಟ್ರೇಲರ್ ಬಿಡುಗಡೆಯಾಗಿ ಸಾಕಷ್ಟು ಗಮನ ಸೆಳೆದಿದೆ. ಆ್ಯಕ್ಷನ್ ಕಥಾಹಂದರವನ್ನು ಹೊಂದಿರುವ ಈ ಚಿತ್ರಕ್ಕೆ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಅದ್ಧೂರಿ ಚಿತ್ರಗಳನ್ನು ನಿರ್ಮಿಸಿ ಹೆಸರಾದ ರಾಮು ಫಿಲಂಸ್ ಸಂಸ್ಥೆಯ ಕೋಟಿ ನಿರ್ಮಾಪಕ ಎಂದೇ ಹೆಸರುವಾಸಿಯಾದ ರಾಮು (Ramu) ಅವರು ಬಂಡವಾಳ ಹೂಡಿದ್ದಾರೆ.

Udho Udho Huligemma: ರಾಣಾ ಚಿತ್ರದ ಹಾಡನ್ನು ರಿಲೀಸ್ ಮಾಡಿದ ಧ್ರುವ ಸರ್ಜಾ

ನಿರ್ದೇಶಕ ಶಂಕರ್ (Shankar) ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಲಾಕ್​ಡೌನ್​ ಆಗದೆ ಹೋಗಿದ್ದರೆ ಈ ಚಿತ್ರ ಏಪ್ರಿಲ್​​ನಲ್ಲಿ ಬಿಡುಗಡೆಯಾಗಬೇಕಿತ್ತು. ಅಲ್ಲದೇ ಚಿತ್ರದ ನಿರ್ಮಾಪಕರಾದ ರಾಮು ಅವರು ಕೊರೊನಾಗೆ ಬಲಿಯಾಗಿದ್ದರಿಂದ ಸಿನಿಮಾದ ಬಿಡುಗಡೆಗೆ ತಡವಾಯಿತು. ಹಾಗಾಗಿ ರಾಮು ಪತ್ನಿ ಮಾಲಾಶ್ರೀ (Malashree) ಇದೀಗ ಪತಿಯ ಕನಸನ್ನು ನನಸು ಮಾಡುತ್ತಿದ್ದಾರೆ. ರಾಮು ನಿರ್ಮಾಣ ಮಾಡಿದ ಕೊನೇ ಸಿನಿಮಾ ತೆರೆ ಕಾಣಿಸಲು ಮಾಲಾಶ್ರೀ ನಿರ್ಧರಿಸಿದ್ದು, ವರ್ಷಾಂತ್ಯಕ್ಕೆ 'ಅರ್ಜುನ್​ ಗೌಡ' ಚಿತ್ರ ಬಿಡುಗಡೆಯಾಗಲಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more