ನವೆಂಬರ್‌ 19ಕ್ಕೆ ಬೆಳ್ಳಿ ಪರದೆ ಮೇಲೆ 'ಗರುಡಗಮನ ವೃಷಭವಾಹನ'

Nov 18, 2021, 12:57 PM IST

ರಿಷಬ್‌ ಶೆಟ್ಟಿ (Rishab Shetty) ಹಾಗೂ ರಾಜ್‌ ಬಿ. ಶೆಟ್ಟಿ (Raj B Shetty) ಕಾಂಬಿನೇಷನ್‌ನ 'ಗರುಡಗಮನ ವೃಷಭವಾಹನ' (Garuda Gamana Vrishabha Vahana)ಚಿತ್ರದ ಟ್ರೇಲರ್‌ ಈಗಾಗಲೇ ಬಿಡುಗಡೆಯಾಗಿದ್ದು, ಶಿವ ಮತ್ತು ಹರಿಯಾಗಿ ರಾಜ್‌ ಶೆಟ್ಟಿ ಮತ್ತು ರಿಷಬ್‌ ಅವರ ಪರ್ಫಾರ್ಮೆನ್ಸ್‌ಗೆ ಸಿನಿರಸಿಕರು ಭಲೇ ಅಂದಿದ್ದಾರೆ. ಚಿತ್ರದಲ್ಲಿ ಪಕ್ಕಾ ದಕ್ಷಿಣ ಕನ್ನಡ ಸೊಗಡಿನ ಡೈಲಾಗ್‌, ಆ ಪರಿಸರದ ಕತೆ ಇರುವುದು ಇತ್ತೀಚೆಗಷ್ಟೇ ಬಿಡುಗಡೆಯಾದ ಟ್ರೇಲರ್‌ನಿಂದ ರಿವೀಲ್‌ ಆಗಿದೆ. ಚಿತ್ರವು ನವೆಂಬರ್‌ 19ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. ಪರಂವಃ ಸ್ಟುಡಿಯೋ ಮೂಲಕ ಚಿತ್ರವನ್ನು ಬಿಡುಗಡೆ ಮಾಡುತ್ತಿರುವುದಾಗಿ ರಕ್ಷಿತ್‌ ಶೆಟ್ಟಿ (Rakshit Shetty) ಹೇಳಿಕೊಂಡಿದ್ದಾರೆ.

ಗರುಡ ಗಮನ ವೃಷಭ ವಾಹನ ಚಿತ್ರದ 'ಎಂದೋ ಬರೆದ ಕವಿತೆ' ಹಾಡು ರಿಲೀಸ್

ಚಿತ್ರಕ್ಕೆ ರಾಜ್‌ ಬಿ ಶೆಟ್ಟಿ ಆಕ್ಷನ್ ಕಟ್ ಹೇಳಿದ್ದು, ಮಂಗಳೂರಿನ ಭೂಗತ ಜಗತ್ತಿನ ಸುತ್ತ ಕಥಾಹಂದರವಿದೆ. ಇದರಲ್ಲಿ ಗರುಡಗಮನ ಅಂದರೆ ವಿಷ್ಣು. ಪ್ರಧಾನ ಪಾತ್ರಗಳಲ್ಲಿ ಒಬ್ಬನಿಗೆ ವಿಷ್ಣುವಿನ ಸಂಯಮ ಸ್ವಭಾವ, ಇನ್ನೊಬ್ಬ ವೃಷಭವಾಹನ ಅಂದರೆ ಶಿವ, ಆತನದು ನಿಯಂತ್ರಣವೇ ಇಲ್ಲದ ವಿಪರೀತ ಸ್ವಭಾವ. ಇಂಥ ಸ್ವಭಾವದ ಇಬ್ಬರು ರೌಡಿಸಂನಲ್ಲಿ ಹೇಗೆ ಸೌಂಡ್‌ ಮಾಡ್ತಾರೆ ಅನ್ನುವ ಕಥೆ. ಲೈಟರ್‌ ಬುದ್ಧ ಫಿಲಂನಡಿ ರವಿ ರೈ ಹಾಗೂ ವಚನ್‌ ಶೆಟ್ಟಿ ಚಿತ್ರ ನಿರ್ಮಿಸಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ 'ಎಂದೋ ಬರೆದ ಕವಿತೆ ಸಾಲು' ಹಾಡು ಬಿಡುಗಡೆಯಾಗಿತ್ತು. ಮಿದುನ್ ಮುಕುಂದನ್ (Midhun Mukundan) ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment