Sakath: ಬೆಳ್ಳಿ ಪರದೆ ಮೇಲೆ ನಕ್ಕು ನಗಿಸಲಿದ್ದಾನೆ ಗೋಲ್ಡನ್​ ಸ್ಟಾರ್​ ಗಣೇಶ್

Sakath: ಬೆಳ್ಳಿ ಪರದೆ ಮೇಲೆ ನಕ್ಕು ನಗಿಸಲಿದ್ದಾನೆ ಗೋಲ್ಡನ್​ ಸ್ಟಾರ್​ ಗಣೇಶ್

Suvarna News   | Asianet News
Published : Nov 24, 2021, 01:57 PM IST

200 ರೂಪಾಯಿ ಹಿಡಿದುಕೊಂಡು ಬೆಂಗಳೂರಿಗೆ ಬಂದವನು ನಾನು. ದೇವರು ತುಂಬಾ ಕೊಟ್ಟುಬಿಟ್ಟಿದ್ದಾನೆ. ಪ್ರತೀಕ್ಷಣ ಖುಷಿಯಾಗಿರಬೇಕು ಅಂತ ಬಯಸುತ್ತೇನೆ. ಯಾರಿಗೆ ಸಿಕ್ಕರೂ ಅವರಿಂದ ಕಲಿಯಬೇಕು ಅಥವಾ ಕಲಿಸುತ್ತಿರಬೇಕು ಎಂದು ನಂಬಿಕೊಂಡಿದ್ದೇನೆ. ಈ ಸಿನಿಮಾ ನಿಮಗೆ ಖುಷಿ ಕೊಡಲಿದೆ ಎಂದರು ಗಣೇಶ್. 
 

ನಿರ್ದೇಶಕ ಸಿಂಪಲ್​ ಸುನಿ (Simple Suni) ಮತ್ತು  ಗೋಲ್ಡನ್​ ಸ್ಟಾರ್​ ಗಣೇಶ್ (Golden Star Ganesh)​ ಅಭಿನಯದ 'ಸಖತ್' (Sakath) ಸಿನಿಮಾ ಇದೇ ತಿಂಗಳ ನವೆಂಬರ್ 26ಕ್ಕೆ ಬಿಡುಗಡೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಚಿತ್ರದ ಪ್ರೀ ರಿಲೀಸ್‌ ಈವೆಂಟ್‌ ಅದ್ದೂರಿಯಾಗಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ನಿರ್ದೇಶಕ ಸಿಂಪಲ್‌ ಸುನಿ, 'ಇದು ಎರಡೂವರೆ ಗಂಟೆ ನಗಿಸುವ ಸಿನಿಮಾ. ಪುಟಾಣಿ ಮಗುವಿನಿಂದ ಹಿಡಿದು ಅಜ್ಜ, ಅಜ್ಜಿಯವರೆಗೆ ಎಲ್ಲರೂ ನೋಡಬಹುದಾದ ಸಿನಿಮಾ' ಎಂದರು. ನಿರ್ಮಾಪಕರಾದ ನಿಶಾ ವೆಂಕಟ್‌ ಕೋಣಂಕಿ ಮತ್ತು ವೆಂಕಟ್‌ ನಾರಾಯಣ್‌ ದಂಪತಿ ತಮ್ಮ ಸಂಸ್ಥೆ ನಿರ್ಮಿಸುತ್ತಿರುವ ಮೊದಲ ಸಿನಿಮಾ ಬಿಡುಗಡೆ ಖುಷಿಯನ್ನು ಹಂಚಿಕೊಂಡರು.

Sakath: ಗಣೇಶ್-ಸುರಭಿ ಕಾಂಬಿನೇಷನ್​ನ 'ಶುರುವಾಗಿದೆ' ಸಾಂಗ್ ರಿಲೀಸ್

ಗಣೇಶ್‌, '200 ರೂಪಾಯಿ ಹಿಡಿದುಕೊಂಡು ಬೆಂಗಳೂರಿಗೆ ಬಂದವನು ನಾನು. ದೇವರು ತುಂಬಾ ಕೊಟ್ಟುಬಿಟ್ಟಿದ್ದಾನೆ. ಪ್ರತೀಕ್ಷಣ ಖುಷಿಯಾಗಿರಬೇಕು ಅಂತ ಬಯಸುತ್ತೇನೆ. ಯಾರಿಗೆ ಸಿಕ್ಕರೂ ಅವರಿಂದ ಕಲಿಯಬೇಕು ಅಥವಾ ಕಲಿಸುತ್ತಿರಬೇಕು ಎಂದು ನಂಬಿಕೊಂಡಿದ್ದೇನೆ. ಈ ಸಿನಿಮಾ ನಿಮಗೆ ಖುಷಿ ಕೊಡಲಿದೆ' ಎಂದರು. ನಿರ್ಮಾಪಕ ಸುಪ್ರೀತ್‌, ನಾಯಕ ನಟಿಯರಾದ ನಿಶ್ವಿಕಾ ನಾಯ್ಡು, ಸುರಭಿ ಪುರಾಣಿಕ್‌ ಸಂತೋಷವಾಗಿದ್ದರು. ರಂಗಾಯಣ ರಘು, ಸಾಧು ಕೋಕಿಲ, ಗಿರಿ, ಧರ್ಮಣ್ಣ ಮುಂತಾದ ಕಲಾವಿದರ ತಾರಾಬಳಗ ಚಿತ್ರಕ್ಕಿದ್ದು, ವಿಶೇಷವಾಗಿ ಗಣೇಶ್ ಪುತ್ರ ವಿಹಾನ್ (Vihan) ಗಣೇಶ್ ಅವರ ಬಾಲ್ಯದ ದಿನಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾನೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more