ಕಾಂತಾರ 2 ಮುಹೂರ್ತಕ್ಕೆ ಅಸ್ತು ಎಂದ ಪಂಜುರ್ಲಿ, ಗುಳಿಗ: 14ನೇ ಸೆಂಚುರಿಯಿಂದ ಶುರುವಾಗುತ್ತೆ ಸ್ಟೋರಿ..!

ಕಾಂತಾರ 2 ಮುಹೂರ್ತಕ್ಕೆ ಅಸ್ತು ಎಂದ ಪಂಜುರ್ಲಿ, ಗುಳಿಗ: 14ನೇ ಸೆಂಚುರಿಯಿಂದ ಶುರುವಾಗುತ್ತೆ ಸ್ಟೋರಿ..!

Published : Nov 20, 2023, 09:00 AM IST

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಬಿಗ್ ನ್ಯೂಸ್ ಒಂದನ್ನ ಕೊಟ್ಟಿದ್ದಾರೆ. ಅದೇ ರಿಷಬ್ ಕಲ್ಪನೆಯ ಕಾಂತಾರ ಪ್ರೀಕ್ವೆಲ್ ಕಥೆಗೆ ಮುಹೂರ್ತ ಮಾಡಲು ಡೇಟ್ ಫಿಕ್ಸ್ ಆಗಿದೆಯಂತೆ.
 

ಕಾಂತಾರ ಪ್ರೀಕ್ವೆಲ್ ಚಿತ್ರೀಕರಣಕ್ಕೆ ಆಲ್ ಸೆಟ್ ಆಗಿದೆ. ರಿಷಬ್ ಶೆಟ್ಟಿ(Rishab Shetty) ಎನ್ನೇನಿದ್ರು ಕ್ಯಾಮೆರಾ ಹಿಡಿದು ಕೆರಾಡಿ ಊರಿಗೆ ಹೋಗ್ಬೇಕಷ್ಟೆ. ಆದ್ರೆ ಈ ಸಿನಿಮಾ ಮುಹೂರ್ತಕ್ಕೆ(Muhurta) ಇಷ್ಟು ದಿನ ಪಂಜುರ್ಲಿ, ಗುಳಿಗ ದೈವಗಳ ಅಪ್ಪಣೆ ಸಿಕ್ಕಿರಲಿಲ್ಲ. ಈಗ ಪಂಜುರ್ಲಿ, ಗುಳಿಗ ದೈವಗಳು ಕಾಂತಾರ 2( Kantara 2) ಮುಹೂರ್ತಕ್ಕೆ ಅಸ್ತು ಎಂದಿವೆ. ಹೀಗಾಗಿ ಶೆಟ್ರು ಕಾಂತಾರ ಚಾಪ್ಟರ್2 ಮುಹೂರ್ತಕ್ಕೆ ಸ್ಥಳ ದಿನಾಂಕ ಫಿಕ್ಸ್ ಮಾಡಿದ್ದಾರೆ. ಕುಂದಾಪುರ ಆನೆಗುಡ್ಡೆಯ ವಿಘ್ನೇಶ್ವರನ(Vigneshwar of Anegudde) ಸನ್ನಿಧಿಯಲ್ಲಿ ಕಾಂತಾರ 2 ಮುಹೂರ್ತ ನಡೆಯಲಿದೆ. ರಿಷಬ್ ಶೆಟ್ಟಿ ಟೀಂ ಸಕಲ ರೀತಿಯಲ್ಲೂ ಸಜ್ಜಾಗಿದೆ. ಹೊಸ ವರ್ಷದಿಂದ ಹೊಸ ಹುರುಪಿನೊಂದಿಗೆ ಕಾಂತಾರ ಪ್ರೀಕ್ವೆಲ್ ಶೂಟಿಂಗ್ ಹೋಗೋಕೆ ಶೆಟ್ರು ತಂಡ ರೆಡಿ ಇದೆ. ಆದ್ರೆ ಅದಕ್ಕೂ ಮೊದಲು ನವೆಂಬರ್ 27ರಂದು ಕಾಂತಾರ ಪ್ರೀಕ್ವೆಲ್ ಕಥೆಗೆ ಮುಹೂರ್ತ ನಡೆಯಲಿದೆ. ಕಾಂತಾರ ಚಾಪ್ಟರ್ 1 ಸಿನಿಮಾಗೂ ಆನೆ ಗುಡ್ಡೆಯಲ್ಲಿ ಗಣಪತಿ ಸನ್ನಿಧಿಯಲ್ಲೇ ಮುಹೂರ್ತ ನಡೆದಿತ್ತು. ಈಗ ಅದೇ ದೇವರ ಮುಂದೆ ಕಾಂತಾರ2 ಗೂ ಸ್ಕ್ರೀಪ್ಟ್ ಪೂಜೆ ಹಾಗೂ ಮುಹೂರ್ತ ಆಗಲಿದೆ. ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡಿರೋ ಕಾಂತಾರದ ಪ್ರೀಕ್ವೆಲ್ ಸ್ಟೋರಿ ಕಾಂತಾರ ಪಾರ್ಟ್ 2 ಅನ್ನೋದು ನಿಮ್ಗೆಲ್ಲಾ ಗೊತ್ತು. ಈ ಸಿನಿಮಾದಲ್ಲಿ ಕಾಡುಬೆಟ್ಟ ಶಿವನ ಅಪ್ಪನ ಪಾತ್ರ ಮಾಡ್ತಿದ್ದಾರೆ ಶೆಟ್ರು. ಹೀಗಾಗಿ ಕಾಂತಾರ2 ಕಥೆ ಶುರುವಾಗೋದು 14ನೆ ಸೆಂಚುರಿಯಿಂದ. ದೈವಾರಾಧನೆ ಹೇಗೆ ಶುರುವಾಯ್ತು.? ಕರಾವಳಿಯಲ್ಲಿ ದೈವಾರದನೆ ಬೆಳೆದಿದ್ದು ಹೇಗೆ..? ಧೈವಾರಾಧನೆ ಎಷ್ಟು ಮುಖ್ಯ..? ಮತ್ತು ಅದರ ಫಲ ಏನು..? ದೈವಾರಧನೆಯಲ್ಲಿ ಆದ ಘಟನೆಯಗಳನ್ನ ಸಿನಿಮಾದಲ್ಲಿ ಹೇಳಲಾಗುತ್ತೆ. ಹೀಗಾಗಿ ಈ ಕಥೆಯನ್ನ ಹುಡುಕಲು 20 ಜನರ ತಂಡ ಮಾಡಿ ಬಿಟ್ಟಿದ್ರು ರಿಷಬ್. ಈಗ ಆ 20 ಜನರ ತಂಡ ಕಲೆ ಹಾಕಿರೋ ಎಲ್ಲಾ ಮಾಹಿತಿಯನ್ನಿಟ್ಟುಕೊಂಡು ಕಾಂತಾರ2 ಪ್ರೀಕ್ವೆಲ್‌ಗೆ ಕಥೆ ರೆಡಿಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  ರಿಷಬ್ ಶೆಟ್ಟಿ ಈ ವರ್ಷ ಕಾಂತಾರ 2 ಶೂಟಿಂಗ್ ಹೋಗಲ್ಲ: ಹೊಸ ವರ್ಷಕ್ಕೆ ಹೊಸ ಯೋಜನೆ ಜತೆ ಬರ್ತಾರೆ ಶಿವ..!

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more