ಗಮನ ಸೆಳೆಯುತ್ತಿರುವ ಕಾಂತಾರದ ತದ್ರೂಪಿ ನಟ: ಭಾರೀ ಡಿಮ್ಯಾಂಡ್

ಗಮನ ಸೆಳೆಯುತ್ತಿರುವ ಕಾಂತಾರದ ತದ್ರೂಪಿ ನಟ: ಭಾರೀ ಡಿಮ್ಯಾಂಡ್

Published : Feb 19, 2023, 02:03 PM IST

ಕಾಂತಾರ ಸಿನಿಮಾ ಭರ್ಜರಿ ಯಶಸ್ವಿ ಪ್ರದರ್ಶನ ಕಂಡಿದ್ದು, ಇದೀಗ ಚಿತ್ರದ ಪಾತ್ರಧಾರಿಗಳನ್ನು ಹೊಲುವ ವ್ಯಕ್ತಿಗಳಿಗೂ ಸಖತ್ ಡಿಮ್ಯಾಂಡ್ ಶುರುವಾಗಿದೆ. 
 

ಕಾಂತಾರ ಚಿತ್ರದ ಯಶಸ್ಸು ಪ್ರತಿಯೊಬ್ಬ ಪಾತ್ರಧಾರಿಗೂ ಸ್ಟಾರ್ ವ್ಯಾಲ್ಯೂ ತಂದು ಕೊಟ್ಟಿದೆ.  ಚಿತ್ರದ ನಾಯಕ ಮತ್ತು ನಿರ್ದೇಶಕರಾಗಿರುವ ರಿಷಬ್ ಶೆಟ್ಟಿ ಅವರ ತದ್ರೂಪಿಯನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡಿಗರಿಗೆ ಪರಿಚಯಿಸಿತ್ತು. ಇದೀಗ ಚಿತ್ರದಲ್ಲಿ ಬರುವ ಅತ್ಯಂತ ಸಣ್ಣ ಪಾತ್ರಕ್ಕೂ ಡಿಮ್ಯಾಂಡ್ ಬಂದಿದ್ದು, ತದ್ರೂಪಿಯೊಬ್ಬರು ಗಮನ ಸೆಳೆಯುತ್ತಿದ್ದಾರೆ. ಕಾಂತಾರ ಯಶಸ್ವಿಯ ಹಿಂದೆಯೆ ತದ್ರೂಪಿ ಎನಿಸಿದ ದೈವ ನರ್ತಕ ಈಗ ಸಖತ್ ಸದ್ದು ಮಾಡುತ್ತಿದ್ದಾರೆ. ಪರ್ಕಳ, ಹೆರ್ಗಗ್ರಾಮದ ಶೆಟ್ಟಿ ಬೆಟ್ಟು ವಾರ್ಡಿನ ಐತು ಪಾನರ ಕಳೆದ 20 ವರ್ಷದ ದೈವಾರಾಧನೆಯ ಮೂಲಕ ದೈವ ನರ್ಥಕರಾಗಿ ತೊಡಗಿಸಿಕೊಂಡಿದ್ದಾರೆ. ಇವರ ಜೊತೆ ಸೆಲ್ಫಿ ತೆಗೆಯುವವರ ಸಂಖ್ಯೆ ಹೆಚ್ಚಾಗಿದೆಯಂತೆ. ಕಾಂತಾರ ಚಿತ್ರದಲ್ಲಿ ಪ್ರಾರಂಭದಲ್ಲಿ ಮೊದಲಿನ ರಾಜನೊಬ್ಬ ಕಾಡಿನ ಬಳಿ ಬಂದಾಗ ಅಲ್ಲಿ ಚಿತ್ರದ ಸನ್ನಿವೇಶದಲ್ಲಿ ದೈವ ನರ್ತಕ ರಾಜನ ಮುಂದೆ ದೈವನರ್ಥನದಾರಿ ಕೇಳುವ ದೃಶ್ಯ ಬರುತ್ತೆ. ಪುರಾತನ ಕಾಲವನ್ನು ನೆನಪಿಸುವಂತ, ಈ ನಟನೆಯನ್ನು  ಮಂಗಳೂರಿನ ಕಲಾವಿದ ಒಬ್ಬರು ನಟಿಸಿದ್ದರು. ಆದರೆ ಅವರಂತೆಯೇ ಕಾಣುವ ಉಡುಪಿ ಶೆಟ್ಟಿ ಬೆಟ್ಟುವಿನ ದೈವ ನರ್ತಕ ಐತ ಪಾನರನ್ನು ಈಗ ಎಲ್ಲರೂ ಗಮನಿಸಲು ಆರಂಭಿಸಿದ್ದಾರೆ. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!