Kantara2: ಕಾಂತಾರ-2 ಚಿತ್ರಕ್ಕೆ ಅನುಮತಿ ಬೇಡಿದ ರಿಷಬ್ ಶೆಟ್ಟಿ: ಎಚ್ಚರಿಕೆ ಕೊಟ್ಟ ಪಂಜುರ್ಲಿ ದೈವ

Kantara2: ಕಾಂತಾರ-2 ಚಿತ್ರಕ್ಕೆ ಅನುಮತಿ ಬೇಡಿದ ರಿಷಬ್ ಶೆಟ್ಟಿ: ಎಚ್ಚರಿಕೆ ಕೊಟ್ಟ ಪಂಜುರ್ಲಿ ದೈವ

Published : Dec 11, 2022, 11:26 AM ISTUpdated : Dec 11, 2022, 02:09 PM IST

ರಿಷಬ್ ಶೆಟ್ಟಿ ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ದೈವದ ಬಳಿ ಕಾಂತಾರಾ ಭಾಗ ಎರಡು ನಿರ್ಮಾಣಕ್ಕೆ ಅಪ್ಪಣೆ ಕೇಳಿದ್ದು, ದೈವವು ಅನುಮತಿಯನ್ನು ನೀಡಿದೆ.

'ಕಾಂತಾರ' ಸೂಪರ್ ಡೂಪರ್ ಹಿಟ್ ಆಗಲು ರಿಷಬ್ ಶೆಟ್ಟಿ ತಂಡದ ಶ್ರಮದ ಜೊತೆ, ಪಂಜುರ್ಲಿ ಗುಳಿಗ ದೈವದ ಆಶೀರ್ವಾದವೂ ಕಾರಣ. ಕಾಂತಾರ ಸಿನಿಮಾ ಮಾಡುವಾಗ ರಿಷಬ್ ಶೆಟ್ಟಿ ದೈವಗಳ ಬಳಿ ಅನುಮತಿ ಬೇಡಿದ್ರು. ಈಗ ಕಾಂತಾರ-2 ಗೂ ಸಿದ್ಧವಾಗಿರೋ ರಿಷಬ್ ತಾವು ನಂಬುವ ದೈವಗಳ ಬಳಿ ಹೋಗಿ ಅನುಮತಿ ಬೇಡಿದ್ದಾರೆ. ಮಂಗಳೂರಿನ ಬಂದಲೆಯ ಮನೆಯಲ್ಲಿ ನಡೆದ ಪಂಜುರ್ಲಿ ಕೋಲಕ್ಕೆ ಕಾಂತಾರ ಚಿತ್ರತಂಡ ಹೋಗಿದ್ದು, ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ರಿಷಬ್ ಶೆಟ್ಟಿ ದೈವದ ಬಳಿ ಕಾಂತಾರಾ ಭಾಗ ಎರಡು ನಿರ್ಮಾಣಕ್ಕೆ ಅನುಮತಿ ಕೇಳಿದ್ದಾರೆ. ಕಾಂತಾರ' ಭಾಗ 2 ಸಿನಿಮಾ ಮಾಡಲು ದೈವವು ಅನುಮತಿಯನ್ನು ನೀಡಿದೆ. ಆದರೆ ಕೆಲವು ಷರತ್ತುಗಳನ್ನು, ಎಚ್ಚರಿಕೆಯನ್ನು ದೈವ ನೀಡಿದೆ.  ಇದೀಗ ಕಾಂತಾರ-2ಗೂ ಅಣ್ಣಪ್ಪ ಪಂಜುರ್ಲಿ ದೈವದ ಅಭಯ ಸಿಕ್ಕಿದೆ. ಕಾಂತಾರ ಮಾಡುವಾಗ ಮೊದಲು ಹತ್ತು ಬಾರಿ ಯೋಚನೆ ಮಾಡಿದ್ದೀರ, ಈ ಬಾರಿ ಮಾತ್ರ ನೂರು ಬಾರಿ ಯೋಚನೆ ಮಾಡಿ ಕಾಂತಾರ-2 ಮಾಡಿ ನಿಮ್ಮ ಪ್ರಯತ್ನಕ್ಕೆ ಜಯ ಸಿಗುವಂತೆ ಮಾಡುತ್ತೇನೆ ಅಂತ ರಿಷಬ್'ಗೆ ದೈವ ಮಾತು ಕೊಟ್ಟಿದೆಯಂತೆ. ಹೀಗಾಗಿ ಈ ಖುಷಿಯಲ್ಲಿ ರಿಷಬ್ ಈಗ ಕಾಂತಾರ-2 ಕಥೆ ಸಿದ್ಧಪಡಿಸಿ ಶೂಟಿಂಗ್ ಹೋಗೋ ತಯಾರಿಯಲ್ಲಿದ್ದಾರೆ. 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more