Kantara2: ಕಾಂತಾರ-2 ಚಿತ್ರಕ್ಕೆ ಅನುಮತಿ ಬೇಡಿದ ರಿಷಬ್ ಶೆಟ್ಟಿ: ಎಚ್ಚರಿಕೆ ಕೊಟ್ಟ ಪಂಜುರ್ಲಿ ದೈವ

Kantara2: ಕಾಂತಾರ-2 ಚಿತ್ರಕ್ಕೆ ಅನುಮತಿ ಬೇಡಿದ ರಿಷಬ್ ಶೆಟ್ಟಿ: ಎಚ್ಚರಿಕೆ ಕೊಟ್ಟ ಪಂಜುರ್ಲಿ ದೈವ

Published : Dec 11, 2022, 11:26 AM ISTUpdated : Dec 11, 2022, 02:09 PM IST

ರಿಷಬ್ ಶೆಟ್ಟಿ ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ದೈವದ ಬಳಿ ಕಾಂತಾರಾ ಭಾಗ ಎರಡು ನಿರ್ಮಾಣಕ್ಕೆ ಅಪ್ಪಣೆ ಕೇಳಿದ್ದು, ದೈವವು ಅನುಮತಿಯನ್ನು ನೀಡಿದೆ.

'ಕಾಂತಾರ' ಸೂಪರ್ ಡೂಪರ್ ಹಿಟ್ ಆಗಲು ರಿಷಬ್ ಶೆಟ್ಟಿ ತಂಡದ ಶ್ರಮದ ಜೊತೆ, ಪಂಜುರ್ಲಿ ಗುಳಿಗ ದೈವದ ಆಶೀರ್ವಾದವೂ ಕಾರಣ. ಕಾಂತಾರ ಸಿನಿಮಾ ಮಾಡುವಾಗ ರಿಷಬ್ ಶೆಟ್ಟಿ ದೈವಗಳ ಬಳಿ ಅನುಮತಿ ಬೇಡಿದ್ರು. ಈಗ ಕಾಂತಾರ-2 ಗೂ ಸಿದ್ಧವಾಗಿರೋ ರಿಷಬ್ ತಾವು ನಂಬುವ ದೈವಗಳ ಬಳಿ ಹೋಗಿ ಅನುಮತಿ ಬೇಡಿದ್ದಾರೆ. ಮಂಗಳೂರಿನ ಬಂದಲೆಯ ಮನೆಯಲ್ಲಿ ನಡೆದ ಪಂಜುರ್ಲಿ ಕೋಲಕ್ಕೆ ಕಾಂತಾರ ಚಿತ್ರತಂಡ ಹೋಗಿದ್ದು, ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ರಿಷಬ್ ಶೆಟ್ಟಿ ದೈವದ ಬಳಿ ಕಾಂತಾರಾ ಭಾಗ ಎರಡು ನಿರ್ಮಾಣಕ್ಕೆ ಅನುಮತಿ ಕೇಳಿದ್ದಾರೆ. ಕಾಂತಾರ' ಭಾಗ 2 ಸಿನಿಮಾ ಮಾಡಲು ದೈವವು ಅನುಮತಿಯನ್ನು ನೀಡಿದೆ. ಆದರೆ ಕೆಲವು ಷರತ್ತುಗಳನ್ನು, ಎಚ್ಚರಿಕೆಯನ್ನು ದೈವ ನೀಡಿದೆ.  ಇದೀಗ ಕಾಂತಾರ-2ಗೂ ಅಣ್ಣಪ್ಪ ಪಂಜುರ್ಲಿ ದೈವದ ಅಭಯ ಸಿಕ್ಕಿದೆ. ಕಾಂತಾರ ಮಾಡುವಾಗ ಮೊದಲು ಹತ್ತು ಬಾರಿ ಯೋಚನೆ ಮಾಡಿದ್ದೀರ, ಈ ಬಾರಿ ಮಾತ್ರ ನೂರು ಬಾರಿ ಯೋಚನೆ ಮಾಡಿ ಕಾಂತಾರ-2 ಮಾಡಿ ನಿಮ್ಮ ಪ್ರಯತ್ನಕ್ಕೆ ಜಯ ಸಿಗುವಂತೆ ಮಾಡುತ್ತೇನೆ ಅಂತ ರಿಷಬ್'ಗೆ ದೈವ ಮಾತು ಕೊಟ್ಟಿದೆಯಂತೆ. ಹೀಗಾಗಿ ಈ ಖುಷಿಯಲ್ಲಿ ರಿಷಬ್ ಈಗ ಕಾಂತಾರ-2 ಕಥೆ ಸಿದ್ಧಪಡಿಸಿ ಶೂಟಿಂಗ್ ಹೋಗೋ ತಯಾರಿಯಲ್ಲಿದ್ದಾರೆ. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more