'ಕರಿ ಹೈದ ಕೊರಗಜ್ಜ' ಚಿತ್ರೀಕರಣ ವೇಳೆ ನಡೆಯಿತು ಪವಾಡ: ಚಿತ್ರತಂಡದಿಂದ ಕೊರಗಜ್ಜ ದೇವಾಲಯ ನಿರ್ಮಾಣ !

'ಕರಿ ಹೈದ ಕೊರಗಜ್ಜ' ಚಿತ್ರೀಕರಣ ವೇಳೆ ನಡೆಯಿತು ಪವಾಡ: ಚಿತ್ರತಂಡದಿಂದ ಕೊರಗಜ್ಜ ದೇವಾಲಯ ನಿರ್ಮಾಣ !

Published : May 07, 2023, 04:09 PM IST

'ಕರಿ ಹೈದ ಕೊರಗಜ್ಜ' ಚಿತ್ರೀಕರಣದ ವೇಳೆ ನಡೆದ ಪವಾಡ
ಚಿತ್ರೀಕರಣಕ್ಕೆ ಉಂಟಾಯ್ತು ಸತತ ಅಡ್ಡಿ ಆತಂಕಗಳು
ಚಿತ್ರತಂಡದಿಂದ ಕೊರಗಜ್ಜ ದೇವಾಲಯ ನಿರ್ಮಾಣ

ಇತ್ತೀಚೆಗೆ 'ಕರಿ ಹೈದ ಕೊರಗಜ್ಜ' ಹೆಸರಿನ ಸಿನಿಮಾ ಸೆಟ್ಟೇರಿದೆ. ಆದರೆ ಈ ಸಿನಿಮಾದ ಚಿತ್ರೀಕರಣಕ್ಕೆ ಹಲವು ಬಗೆಯ ಅಡೆ-ತಡೆಗಳಾದ್ದರಿಂದ ಚಿತ್ರತಂಡವು ಗುಳಿಗನ ಮೊರೆ ಹೋಗಿದೆ. ಇನ್ನೂ ಚಿತ್ರೀಕರಣದ ವೇಳೆ ಅನೇಕ ಪವಾಡಗಳು ಗೋಚರಕ್ಕೆ ಬಂದ ವಿಷಯ ಕಲಾವಿದರಾದ ಕಬೀರ್ ಬೇಡಿ, ಶ್ರುತಿ, ಭವ್ಯ ಮೊದಲಾದವರನ್ನೊಳಗೊಂಡ ಚಿತ್ರ ತಂಡ ಈಗಾಗಲೇ ತಮ್ಮ ಅನುಭವವನ್ನು ಹಂಚಿಕೊಂಡಿತ್ತು. ಆದರೆ ಮತ್ತೊಂದು ಕುತೂಹಲ ದ ವಿಚಾರವು ಇದುವರೆಗೂ ನಿಗೂಢವಾಗಿತ್ತು. ಇದು ಘಟಿಸಿದ್ದು  ಚಿತ್ರೀಕರಣದ ಆರಂಭಕ್ಕೂ ಮೊದಲು ಪುತ್ತೂರಿನಲ್ಲಿ  ಸೆಟ್ ವಿರ್ಮಾಣದ ವೇಳೆ. ಕೆಲಸಗಾರರು ಸೆಟ್ ನಿರ್ಮಾಣದ ವೇಳೆ ಯಾವುದೋ ಆವೇಶ ಬಂದಂತವರಾಗಿ ಅಲ್ಲಲ್ಲೇ ಮೂರ್ಛೆ ಹೋಗತೊಡಗಿದರು. ಸ್ಥಳೀಯರು ಅರಶಿನ ನೀರನ್ನು ಪ್ರೋಕ್ಷಿಸಿ , ಕೆಲವರನ್ನು ಅಲ್ಲಿನ ಆಸ್ಪತ್ರೆಗೂ ಸೇರಿಸಲಾಯಿತು. ನಂತರ ಆ ಪ್ರದೇಶದಲ್ಲಿ ಯಾರೂ ಸೆಟ್ ಕೆಲಸ ಮಾಡಲು ಮುಂದೆ ಬರಲಿಲ್ಲ. ಸೆಟ್ ಹಾಕಲಿದ್ದ ಆ ಜಾಗವು ಕರಾವಳಿಯ ಉಗ್ರ ರೂಪದ ದೈವ "ಗುಳಿಗ"ನ ಸ್ಥಳ ವೆಂದು ಸ್ಥಳೀಯರು ತಿಳಿಸಿದರು. ಕೂಡಲೇ ನಿರ್ದೇಶಕರು ದೈವಕ್ಕೆ ಗುಡಿ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿ, ಚಿತ್ರದ ಎಡಿಟಿಂಗ್ ಕೆಲಸ ಮುಗಿದ ಕೂಡಲೇ, ದೈವಸ್ಥಾನದ ಪ್ರತಿಷ್ಟಾ ಕಾರ್ಯ ಮುಗಿಸಿದರು. ಅಲ್ಲದೇ ಗುಳಿಗ ಹಾಗೂ ಕಲ್ಲುರ್ಟಿ ದೈವಗಳಿಗೆ ಅದ್ದೂರಿಯ ಕೋಲ ಸೇವೆಯನ್ನು  ನಿರ್ದೇಶಕರು  ನಡೆಸಿದರು. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!