'ಕರಿ ಹೈದ ಕೊರಗಜ್ಜ' ಚಿತ್ರೀಕರಣ ವೇಳೆ ನಡೆಯಿತು ಪವಾಡ: ಚಿತ್ರತಂಡದಿಂದ ಕೊರಗಜ್ಜ ದೇವಾಲಯ ನಿರ್ಮಾಣ !

'ಕರಿ ಹೈದ ಕೊರಗಜ್ಜ' ಚಿತ್ರೀಕರಣ ವೇಳೆ ನಡೆಯಿತು ಪವಾಡ: ಚಿತ್ರತಂಡದಿಂದ ಕೊರಗಜ್ಜ ದೇವಾಲಯ ನಿರ್ಮಾಣ !

Published : May 07, 2023, 04:09 PM IST

'ಕರಿ ಹೈದ ಕೊರಗಜ್ಜ' ಚಿತ್ರೀಕರಣದ ವೇಳೆ ನಡೆದ ಪವಾಡ
ಚಿತ್ರೀಕರಣಕ್ಕೆ ಉಂಟಾಯ್ತು ಸತತ ಅಡ್ಡಿ ಆತಂಕಗಳು
ಚಿತ್ರತಂಡದಿಂದ ಕೊರಗಜ್ಜ ದೇವಾಲಯ ನಿರ್ಮಾಣ

ಇತ್ತೀಚೆಗೆ 'ಕರಿ ಹೈದ ಕೊರಗಜ್ಜ' ಹೆಸರಿನ ಸಿನಿಮಾ ಸೆಟ್ಟೇರಿದೆ. ಆದರೆ ಈ ಸಿನಿಮಾದ ಚಿತ್ರೀಕರಣಕ್ಕೆ ಹಲವು ಬಗೆಯ ಅಡೆ-ತಡೆಗಳಾದ್ದರಿಂದ ಚಿತ್ರತಂಡವು ಗುಳಿಗನ ಮೊರೆ ಹೋಗಿದೆ. ಇನ್ನೂ ಚಿತ್ರೀಕರಣದ ವೇಳೆ ಅನೇಕ ಪವಾಡಗಳು ಗೋಚರಕ್ಕೆ ಬಂದ ವಿಷಯ ಕಲಾವಿದರಾದ ಕಬೀರ್ ಬೇಡಿ, ಶ್ರುತಿ, ಭವ್ಯ ಮೊದಲಾದವರನ್ನೊಳಗೊಂಡ ಚಿತ್ರ ತಂಡ ಈಗಾಗಲೇ ತಮ್ಮ ಅನುಭವವನ್ನು ಹಂಚಿಕೊಂಡಿತ್ತು. ಆದರೆ ಮತ್ತೊಂದು ಕುತೂಹಲ ದ ವಿಚಾರವು ಇದುವರೆಗೂ ನಿಗೂಢವಾಗಿತ್ತು. ಇದು ಘಟಿಸಿದ್ದು  ಚಿತ್ರೀಕರಣದ ಆರಂಭಕ್ಕೂ ಮೊದಲು ಪುತ್ತೂರಿನಲ್ಲಿ  ಸೆಟ್ ವಿರ್ಮಾಣದ ವೇಳೆ. ಕೆಲಸಗಾರರು ಸೆಟ್ ನಿರ್ಮಾಣದ ವೇಳೆ ಯಾವುದೋ ಆವೇಶ ಬಂದಂತವರಾಗಿ ಅಲ್ಲಲ್ಲೇ ಮೂರ್ಛೆ ಹೋಗತೊಡಗಿದರು. ಸ್ಥಳೀಯರು ಅರಶಿನ ನೀರನ್ನು ಪ್ರೋಕ್ಷಿಸಿ , ಕೆಲವರನ್ನು ಅಲ್ಲಿನ ಆಸ್ಪತ್ರೆಗೂ ಸೇರಿಸಲಾಯಿತು. ನಂತರ ಆ ಪ್ರದೇಶದಲ್ಲಿ ಯಾರೂ ಸೆಟ್ ಕೆಲಸ ಮಾಡಲು ಮುಂದೆ ಬರಲಿಲ್ಲ. ಸೆಟ್ ಹಾಕಲಿದ್ದ ಆ ಜಾಗವು ಕರಾವಳಿಯ ಉಗ್ರ ರೂಪದ ದೈವ "ಗುಳಿಗ"ನ ಸ್ಥಳ ವೆಂದು ಸ್ಥಳೀಯರು ತಿಳಿಸಿದರು. ಕೂಡಲೇ ನಿರ್ದೇಶಕರು ದೈವಕ್ಕೆ ಗುಡಿ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿ, ಚಿತ್ರದ ಎಡಿಟಿಂಗ್ ಕೆಲಸ ಮುಗಿದ ಕೂಡಲೇ, ದೈವಸ್ಥಾನದ ಪ್ರತಿಷ್ಟಾ ಕಾರ್ಯ ಮುಗಿಸಿದರು. ಅಲ್ಲದೇ ಗುಳಿಗ ಹಾಗೂ ಕಲ್ಲುರ್ಟಿ ದೈವಗಳಿಗೆ ಅದ್ದೂರಿಯ ಕೋಲ ಸೇವೆಯನ್ನು  ನಿರ್ದೇಶಕರು  ನಡೆಸಿದರು. 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!