'ಕರಿ ಹೈದ ಕೊರಗಜ್ಜ' ಚಿತ್ರೀಕರಣ ವೇಳೆ ನಡೆಯಿತು ಪವಾಡ: ಚಿತ್ರತಂಡದಿಂದ ಕೊರಗಜ್ಜ ದೇವಾಲಯ ನಿರ್ಮಾಣ !

'ಕರಿ ಹೈದ ಕೊರಗಜ್ಜ' ಚಿತ್ರೀಕರಣ ವೇಳೆ ನಡೆಯಿತು ಪವಾಡ: ಚಿತ್ರತಂಡದಿಂದ ಕೊರಗಜ್ಜ ದೇವಾಲಯ ನಿರ್ಮಾಣ !

Published : May 07, 2023, 04:09 PM IST

'ಕರಿ ಹೈದ ಕೊರಗಜ್ಜ' ಚಿತ್ರೀಕರಣದ ವೇಳೆ ನಡೆದ ಪವಾಡ
ಚಿತ್ರೀಕರಣಕ್ಕೆ ಉಂಟಾಯ್ತು ಸತತ ಅಡ್ಡಿ ಆತಂಕಗಳು
ಚಿತ್ರತಂಡದಿಂದ ಕೊರಗಜ್ಜ ದೇವಾಲಯ ನಿರ್ಮಾಣ

ಇತ್ತೀಚೆಗೆ 'ಕರಿ ಹೈದ ಕೊರಗಜ್ಜ' ಹೆಸರಿನ ಸಿನಿಮಾ ಸೆಟ್ಟೇರಿದೆ. ಆದರೆ ಈ ಸಿನಿಮಾದ ಚಿತ್ರೀಕರಣಕ್ಕೆ ಹಲವು ಬಗೆಯ ಅಡೆ-ತಡೆಗಳಾದ್ದರಿಂದ ಚಿತ್ರತಂಡವು ಗುಳಿಗನ ಮೊರೆ ಹೋಗಿದೆ. ಇನ್ನೂ ಚಿತ್ರೀಕರಣದ ವೇಳೆ ಅನೇಕ ಪವಾಡಗಳು ಗೋಚರಕ್ಕೆ ಬಂದ ವಿಷಯ ಕಲಾವಿದರಾದ ಕಬೀರ್ ಬೇಡಿ, ಶ್ರುತಿ, ಭವ್ಯ ಮೊದಲಾದವರನ್ನೊಳಗೊಂಡ ಚಿತ್ರ ತಂಡ ಈಗಾಗಲೇ ತಮ್ಮ ಅನುಭವವನ್ನು ಹಂಚಿಕೊಂಡಿತ್ತು. ಆದರೆ ಮತ್ತೊಂದು ಕುತೂಹಲ ದ ವಿಚಾರವು ಇದುವರೆಗೂ ನಿಗೂಢವಾಗಿತ್ತು. ಇದು ಘಟಿಸಿದ್ದು  ಚಿತ್ರೀಕರಣದ ಆರಂಭಕ್ಕೂ ಮೊದಲು ಪುತ್ತೂರಿನಲ್ಲಿ  ಸೆಟ್ ವಿರ್ಮಾಣದ ವೇಳೆ. ಕೆಲಸಗಾರರು ಸೆಟ್ ನಿರ್ಮಾಣದ ವೇಳೆ ಯಾವುದೋ ಆವೇಶ ಬಂದಂತವರಾಗಿ ಅಲ್ಲಲ್ಲೇ ಮೂರ್ಛೆ ಹೋಗತೊಡಗಿದರು. ಸ್ಥಳೀಯರು ಅರಶಿನ ನೀರನ್ನು ಪ್ರೋಕ್ಷಿಸಿ , ಕೆಲವರನ್ನು ಅಲ್ಲಿನ ಆಸ್ಪತ್ರೆಗೂ ಸೇರಿಸಲಾಯಿತು. ನಂತರ ಆ ಪ್ರದೇಶದಲ್ಲಿ ಯಾರೂ ಸೆಟ್ ಕೆಲಸ ಮಾಡಲು ಮುಂದೆ ಬರಲಿಲ್ಲ. ಸೆಟ್ ಹಾಕಲಿದ್ದ ಆ ಜಾಗವು ಕರಾವಳಿಯ ಉಗ್ರ ರೂಪದ ದೈವ "ಗುಳಿಗ"ನ ಸ್ಥಳ ವೆಂದು ಸ್ಥಳೀಯರು ತಿಳಿಸಿದರು. ಕೂಡಲೇ ನಿರ್ದೇಶಕರು ದೈವಕ್ಕೆ ಗುಡಿ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿ, ಚಿತ್ರದ ಎಡಿಟಿಂಗ್ ಕೆಲಸ ಮುಗಿದ ಕೂಡಲೇ, ದೈವಸ್ಥಾನದ ಪ್ರತಿಷ್ಟಾ ಕಾರ್ಯ ಮುಗಿಸಿದರು. ಅಲ್ಲದೇ ಗುಳಿಗ ಹಾಗೂ ಕಲ್ಲುರ್ಟಿ ದೈವಗಳಿಗೆ ಅದ್ದೂರಿಯ ಕೋಲ ಸೇವೆಯನ್ನು  ನಿರ್ದೇಶಕರು  ನಡೆಸಿದರು. 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?