ಜೈಲಿಂದ ದರ್ಶನ್ ರಿಲೀಸ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೌಡೇಪೀರ ಲಾಲಸಾಬ!

ಜೈಲಿಂದ ದರ್ಶನ್ ರಿಲೀಸ್ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೌಡೇಪೀರ ಲಾಲಸಾಬ!

Published : Jul 26, 2024, 12:42 PM ISTUpdated : Jul 26, 2024, 01:16 PM IST

ದರ್ಶನ್ ಯಾವಾಗ ಹೊರ ಬರುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಬಹುವಾಗಿ ಕಾಡಿತ್ತು. ಇದಕ್ಕೆ ಕೌಡೇಪಿರ ಲಾಲಸಾಬ ದೇವರು ಭವಿಷ್ಯ ನುಡಿದಿದ್ದು ಅಚ್ಚರಿಯ ಭವಿಷ್ಯ ನುಡಿದಿದ್ದು ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

ಒಂದು ಕಡೆ ದರ್ಶನ್‌ಗೆ ಬೇಲ್ ಸಿಗ್ತಿಲ್ಲ. ಇನ್ನೊಂದು ಕಡೆ ಪ್ರಾಥಮಿಕ ಚಾರ್ಜ್ ಶೀಟ್ ರೆಡಿಯಾಗುತ್ತಿದ್ದು ದರ್ಶನ್ ಇನ್ ಟ್ರಬಲ್ ಎನ್ನಲಾಗಿದೆ.  ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಜೈಲಿಗೆ ಹೋಗಿ ಒಂದು ತಿಂಗಳಿಗೂ ಹೆಚ್ಚು ಸಮಯವಾಯಿತು. ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಅವರನ್ನು ಇಡಲಾಗಿದೆ. ದರ್ಶನ್ ಅವರು ಎ2 ಆರೋಪಿ ಆದರೆ, ಪವಿತ್ರಾ ಗೌಡ ಅವರು ಎ1 ಆರೋಪಿ ಎನಿಸಿಕೊಂಡಿದ್ದಾರೆ. ದರ್ಶನ್ ಯಾವಾಗ ಹೊರ ಬರುತ್ತಾರೆ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಬಹುವಾಗಿ ಕಾಡಿತ್ತು. ಇದಕ್ಕೆ ಕೌಡೇಪಿರ ಲಾಲಸಾಬ ದೇವರು ಭವಿಷ್ಯ ನುಡಿದಿದ್ದು ಅಚ್ಚರಿಯ ಭವಿಷ್ಯ ನುಡಿದಿದ್ದು ಈಗ ಎಲ್ಲಡೆ ವೈರಲ್ ಆಗುತ್ತಿದೆ.

ದರ್ಶನ್ ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರೆ. ಜೈಲೂಟ ಹೊಂದುತ್ತಿಲ್ಲ. ಶತಾಯ ಗತಾಯ ಅವರು ಹೊರ ಬರಲು ಪ್ರಯತ್ನಿಸುತ್ತಿದ್ದಾರೆ. ಆದರೆ. ಅದು ಸಾಧ್ಯವಾಗುತ್ತಿಲ್ಲ. ಚಾರ್ಜ್ಶೀಟ್ ಸಲ್ಲಿಕೆ ಮಾಡದೆ ಜಾಮೀನಿಗೆ ಅರ್ಜಿ ಹಾಕೋಕೆ ಸಾಧ್ಯವಿಲ್ಲ. ಹೀಗಾಗಿ, ದರ್ಶನ್ ಅವರಿಗೆ ಯಾವಾಗ ಹೊರಗೆ ಬರುತ್ತೇನೆ ಎಂದು ಅತಿಯಾಗಿ ಅನಿಸುತ್ತಿದೆ. ಅಭಿಮಾನಿಗಳಿಗೂ ತಮ್ಮ ನೆಚ್ಚಿನ ನಟ ಯಾವಾಗ ಹೊರಕ್ಕೆ ಬರೋದು ಎನ್ನುವ ಪ್ರಶ್ನೆ ಕಾಡಿದೆ. ಇದಕ್ಕೆ ದೇವರಿಂದ ಉತ್ತರ ಸಿಕ್ಕಿದೆ.ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ 10ನೇ ವಾರ್ಡಿನಲ್ಲಿ ಇರಿಸಲಾಗಿದ್ದ ಕೌಡೇಪಿರ ಲಾಲಸಾಬ ಅವರು ಈ ಭವಿಷ್ಯ ನುಡಿದಿದ್ದಾರೆ. ದರ್ಶನ್ ಅಭಿಮಾನಿಗಳು ದೇವರ ಎದುರು ಪ್ರಶ್ನೆ ಇಟ್ಟಿದ್ದರು. ‘ದರ್ಶನ್ ಬಿಡುಗಡೆ ಯಾವಾಗ’ ಎನ್ನುವ ಪ್ರಶ್ನೆ ಕೇಳಿದ್ದರು. ಇದಕ್ಕೆ ಈ ದೇವರಿಂದ ಉತ್ತರ ಸಿಕ್ಕಿದೆ. 

‘ಮೂರೇ ತಿಂಗಳಲ್ಲಿ ದರ್ಶನ್ ಹೊರಕ್ಕೆ ಬರುತ್ತಾರೆ’ ಎಂದು ದೇವರು ಭವಿಷ್ಯ ನುಡಿದಿದ್ದಾರೆ. ಈ ಹಿಂದೆ  2019ರಲ್ಲಿ ಅಕ್ರಮ ಹಣವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಡಿಕೆ ಶಿವಕುಮಾರ್ ಅರೆಸ್ಟ್ ಆಗಿದ್ದರು. ಆ ಸಂದರ್ಭದಲ್ಲೂ ಕೌಡೇಪಿರ ಲಾಲಸಾಬ ದೇವರು ಭವಿಷ್ಯ ನುಡಿದಿತ್ತು.  ಅದು ನಿಜ ಆಗಿತ್ತು. ಹೀಗಾಗಿ, ದರ್ಶನ್ ಫ್ಯಾನ್ಸ್ ಈಗ ಖುಷಿಯಾಗಿದ್ದಾರೆ. ಮೊಹರಂ ಸಂದರ್ಭದಲ್ಲಿ ದೇವರನ್ನು ಕೂರಿಸೋ ಪದ್ಧತಿ ಮುಸ್ಲಿಂ ಧರ್ಮದಲ್ಲಿ ಇದೆ. ಅದೇ ರೀತಿ ಕೊಪ್ಪಳದಲ್ಲಿ ಕೌಡೇಪಿರ ಲಾಲಸಾಬ ದೇವರು ದರ್ಶನ್ ಬಗ್ಗೆ ಉತ್ತರಿಸಿದ್ದಾರೆ. ಸದ್ಯಕ್ಕಂತೂ ಈ ಸುದ್ದಿಯಿಂದ ದರ್ಶನ್ ಅಭಿಮಾನಿಗಳಿಗೆ ಖುಷಿಯಾಗಿದೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more