'ಖಡಕ್ ಹಳ್ಳಿ ಹುಡುಗರು' ಚಿತ್ರಕ್ಕೆ ಮೂಹೂರ್ತ: ಪ್ರಮುಖ ಪಾತ್ರದಲ್ಲಿ Raghavendra Rajkumar

'ಖಡಕ್ ಹಳ್ಳಿ ಹುಡುಗರು' ಚಿತ್ರಕ್ಕೆ ಮೂಹೂರ್ತ: ಪ್ರಮುಖ ಪಾತ್ರದಲ್ಲಿ Raghavendra Rajkumar

Suvarna News   | Asianet News
Published : Mar 10, 2022, 01:47 PM ISTUpdated : Mar 10, 2022, 01:48 PM IST

ವರನಟ ಡಾ. ರಾಜ್​ಕುಮಾರ್ ಅವರು ಜನಿಸಿದ್ದು, ಚಾಮರಾಜನಗರದ ಗಾಜನೂರಿನಲ್ಲಿ. ವಿಶೇಷ ಎಂದರೆ ರಾಘವೇಂದ್ರ ರಾಜ್​ಕುಮಾರ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ 'ಖಡಕ್​ ಹಳ್ಳಿ ಹುಡುಗರು' ಎಂಬ ಹೊಸ ಸಿನಿಮಾದ ಮುಹೂರ್ತ ಗಾಜನೂರಿನಲ್ಲೇ ನಡೆಯಲಿದೆ.

ಚಾಮರಾಜನಗರ (ಮಾ.10): ವರನಟ ಡಾ. ರಾಜ್​ಕುಮಾರ್ ಅವರು (Dr Rajkumar) ಜನಿಸಿದ್ದು, ಚಾಮರಾಜನಗರದ ಗಾಜನೂರಿನಲ್ಲಿ. ವಿಶೇಷ ಎಂದರೆ ರಾಘವೇಂದ್ರ ರಾಜ್​ಕುಮಾರ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ 'ಖಡಕ್​ ಹಳ್ಳಿ ಹುಡುಗರು' ಎಂಬ ಹೊಸ ಸಿನಿಮಾದ ಮುಹೂರ್ತ ಗಾಜನೂರಿನಲ್ಲೇ ನಡೆಯಲಿದೆ. ಈ ಸಲುವಾಗಿ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಗಾಜನೂರಿಗೆ ಭೇಟಿ ನೀಡಿದ್ದು, ಚಿತ್ರದ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಗಾಜನೂರಿನಲ್ಲಿ (Gajanur) ಸಂಪತ್ತಿಗೆ ಸವಾಲ್, ಶ್ರೀನಿವಾಸ ಕಲ್ಯಾಣ ಚಿತ್ರಗಳ ಚಿತ್ರೀಕರಣ​ ಆಗಿದೆ. ಆದರೆ, ಯಾವುದೇ ಚಿತ್ರದ ಮುಹೂರ್ತ ನಡೆದಿಲ್ಲ. 

James Trailer Released: ತಮ್ಮನನ್ನು ನೋಡಿ ರಾಘವೇಂದ್ರ ರಾಜ್‌ಕುಮಾರ್ ಕಣ್ಣೀರು

ಹೀಗಾಗಿ ಗಾಜನೂರಿನಲ್ಲೇ ಈ ಸಿನಿಮಾ ಮುಹೂರ್ತ ಮಾಡಿ, ನಮ್ಮ ಸೋದರತ್ತೆ ನಾಗಮ್ಮನ ಕೈಲಿ ಪೂಜೆ ಮಾಡಿಸುತ್ತೇವೆ. ನಾನು ಈ ಚಿತ್ರದ ಹೀರೋ ಅಲ್ಲ. ಆದರೆ, ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದೇನೆ. ಅಪ್ಪಾಜಿ ಹುಟ್ಟಿದ ಮನೆ, ಓದಿದ ಶಾಲೆ, ಮಂಟೇಸ್ವಾಮಿ ದೇವಾಲಯದಲ್ಲಿ ಚಿತ್ರೀಕರಣ ನಡೆಯುತ್ತದೆ. 'ಕನ್ನಡಕ್ಕೆ ಮೊದಲ ಗೌರವ..' ಎಂಬ ಹಾಡಿನ ಚಿತ್ರೀಕರಣ ಇಲ್ಲೇ ನಡೆಯಲಿದೆ' ಹಾಗೂ ಅಪ್ಪಾಜಿ ಹುಟ್ಟಿದ ಗಾಜನೂರಿಗೆ ಒಂದು ಮಹತ್ವ ಇದೆ. ಇಲ್ಲಿ ಚಿತ್ರದ ಮೂಹೂರ್ತ ನಡೆಸಿದ್ರೆ ನಮ್ಮ ಪೂರ್ವಿಕರೆಲ್ಲಾ ಬಂದು ಆಶಿರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ರಾಘವೇಂದ್ರ ರಾಜ್​ಕುಮಾರ್ ತಿಳಿಸಿದರು.

ನಾಗತ್ತೆ ನಮಗೆ ಹಾಲು ಕುಡಿಸಿ ಬೆಳೆಸಿದ್ದಾರೆ: 'ಖಡಕ್​ ಹಳ್ಳಿ ಹುಡುಗರು' ಚಿತ್ರದ ಮುಹೂರ್ತದ ಪೂಜೆಯನ್ನು ನಮ್ಮ ಸೋದರತ್ತೆ ನಾಗಮ್ಮನ ಕೈಲಿ ಪೂಜೆ ಮಾಡಿಸುತ್ತೇವೆ. ಅವರು ನಮಗೆ ಹಾಲು ಕುಡಿಸಿ ಬೆಳೆಸಿದ್ದಾರೆ, ಅವರಿಗೆ ಹುಷಾರಿಲ್ಲ. ಆರೋಗ್ಯ ವಿಚಾರಿಸಲು ಹಾಗೂ ಚಿತ್ರೀಕರಣಕ್ಕೆ ಪೂಜೆ ಮಾಡಿಸಲು ನಾವೇ ಇಲ್ಲಿಗೆ ಬಂದಿದ್ದೇವೆ. ತಂದೆ ಚಿತ್ರೀಕರಣಕ್ಕೆ ಹೋದಾಗ ತಾಯಿಯೂ ಹೋಗುತ್ತಿದ್ರು. ಆಗ ನಾಗತ್ತೆ ನಮ್ಮನ್ನು ಸಾಕಿ ಸಲುಹಿದರು ಎಂದು ರಾಘವೇಂದ್ರ ರಾಜ್​ಕುಮಾರ್ ಹೇಳಿದರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!