ಕಿಚ್ಚ ಸುದೀಪ್ ಅಭಿಮಾನಿಗಳಿಗೆ BIG News! ಯುಗಾದಿ ಹಬ್ಬಕ್ಕೆ ನಿಜವಾದ ಹೋಳಿಗೆ ಎಂದ ಫ್ಯಾನ್ಸ್!

ಕಿಚ್ಚ ಸುದೀಪ್ ಅಭಿಮಾನಿಗಳಿಗೆ BIG News! ಯುಗಾದಿ ಹಬ್ಬಕ್ಕೆ ನಿಜವಾದ ಹೋಳಿಗೆ ಎಂದ ಫ್ಯಾನ್ಸ್!

Published : Mar 30, 2022, 02:38 PM ISTUpdated : Mar 30, 2022, 04:20 PM IST

ಕಿಚ್ಚ ಸುದೀಪ್ (Kiccha Sudeep) ಅಭಿನಯದ 'ವಿಕ್ರಾಂತ್ ರೋಣ’(Vikranth Rona)ಈಗಾಗಲೇ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟುಹಾಕಿದೆ.  ಅಭಿಮಾನಿಗಳು ಚಿತ್ರತಂಡದಿಂದ ಅಪ್‌ಡೇಟ್‌ಗಾಗಿ ಕಾದಿದ್ದರು. ಇದೀಗ ಚಿತ್ರತಂಡ ಹೊಸ ಸುದ್ದಿ ನೀಡಿದೆ.

ಕಿಚ್ಚ ಸುದೀಪ್ (Kiccha Sudeep) ಅಭಿನಯದ 'ವಿಕ್ರಾಂತ್ ರೋಣ’(Vikranth Rona)ಈಗಾಗಲೇ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಹುಟ್ಟುಹಾಕಿದೆ.  ಅಭಿಮಾನಿಗಳು ಚಿತ್ರತಂಡದಿಂದ ಅಪ್‌ಡೇಟ್‌ಗಾಗಿ ಕಾದಿದ್ದರು. ಇದೀಗ ಚಿತ್ರತಂಡ ಹೊಸ ಸುದ್ದಿ ನೀಡಿದೆ. 

ನಿರ್ದೇಶಕ ಅನೂಪ್ ಭಂಡಾರಿ (Anoop Bhandari) ಟ್ವೀಟ್ ಮಾಡಿ, ಯುಗಾದಿಗೆ ಸಂಭ್ರಮಿಸಲು ಅಭಿಮಾನಿಗಳಿಗೆ ಮತ್ತೊಂದು ಕಾರಣ ನೀಡಿದ್ದಾರೆ. ‘ಏಪ್ರಿಲ್ 2ರಂದು ಬೆಳಗ್ಗೆ 9.55ಕ್ಕೆ ವಿಕ್ರಾಂತ್ ರೋಣದ ರಿಲೀಸ್ ಟೀಸರ್ ಬಿಡುಗಡೆ ಮಾಡುತ್ತೇವೆ’ ಎಂದು ಅನೂಪ್ ಟ್ವೀಟ್ ಮೂಲಕ ಘೋಷಿಸಿದ್ದಾರೆ.

ವಿಕ್ರಾಂತ್ ರೋಣ (Vikranth Rona)ಇಂಗ್ಲೀಷ್‌ನಲ್ಲೂ ತೆರೆಗೆ ಬರುತ್ತಿದೆ. ವಿಶೇಷವೆಂದರೆ ಇಂಗ್ಲೀಷ್‌ನಲ್ಲಿ ತಮ್ಮ ಪಾತ್ರಕ್ಕೆ ಸುದೀಪ್ (Sudeep)ಅವರೇ ಧ್ವನಿ ನೀಡಿದ್ದಾರೆ. ‘ಕನ್ನಡದ ಸೂಪರ್ ಸ್ಟಾರ್ ಒಬ್ಬರು ತಮ್ಮ ಇಂಗ್ಲೀಷ್ ಚಿತ್ರಕ್ಕೆ ತಮ್ಮದೇ ಧ್ವನಿ ನೀಡುತ್ತಿರೋದು ಇದೇ ಮೊದಲ ಬಾರಿ. ಅಷ್ಟೇ ಅಲ್ಲ, ಭಾರತ ಮಟ್ಟದಲ್ಲೂ ಇಂತಹ ನಾಯಕರ ಸಂಖ್ಯೆ ಬೆರಳೆಣಿಕೆಯಷ್ಟು ಮಾತ್ರ’ ಎಂದು ಈ ಹಿಂದೆ ಟ್ವೀಟ್ ಮಾಡಿ ಸಂಭ್ರಮ ಹಂಚಿಕೊಂಡಿದ್ದರು ಅನೂಪ್ ಭಂಡಾರಿ. ಮಲಯಾಳಂ ಬಿಟ್ಟು ಉಳಿದ ಎಲ್ಲಾ ಭಾಷೆಗಳಲ್ಲೂ ಸ್ವತಃ ಸುದೀಪ್ ಧ್ವನಿ ನೀಡಿದ್ದಾರೆ ಎಂದು ಹೇಳಲಾಗಿದೆ.

ವಿಕ್ರಾಂತ್ ರೋಣ’ (Vikrant Rona) ಸ್ಯಾಂಡಲ್‌ವುಡ್‌ನಲ್ಲಿ ಸಂಚಲನ ಮೂಡಿಸುತ್ತಿರುವ ಚಿತ್ರ. ಕಿಚ್ಚ ಸುದೀಪ್ ಅಭಿನಯದ ಈ ಚಿತ್ರದ ಟೀಸರ್ ಹಾಗೂ ಪೋಸ್ಟರ್‌ಗಳು ನಿರೀಕ್ಷೆಯನ್ನು ಹೆಚ್ಚಿಸಿದ್ದವು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಫೆಬ್ರವರಿಯಲ್ಲಿ ಚಿತ್ರ ತೆರೆಕಾಣಬೇಕಿತ್ತು. ಆದರೆ ಹಲವು ಅನಿವಾರ್ಯ ಕಾರಣದಿಂದ ರಿಲೀಸ್ ಮುಂದೂಡಲಾಗಿದೆ. ಏಪ್ರಿಲ್ ಕೊನೆಯ ವಾರ ತೆರೆಕಾಣುವ ನಿರೀಕ್ಷೆ ಇದೆ..

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!