ಸಿನಿ ಪ್ರೇಕ್ಷಕರನ್ನ ಚಿತ್ರಮಂದಿರಕ್ಕೆ ಸೆಳೆಯಲು ಹೊಸ ಪ್ಲ್ಯಾನ್‌:  ಇಷ್ಟ ಆದ್ರೆ ಮಾತ್ರ ಇಂಟರ್‌ವಲ್‌ನಲ್ಲಿ ಟಿಕೆಟ್‌ ಖರೀದಿಸಿ!

ಸಿನಿ ಪ್ರೇಕ್ಷಕರನ್ನ ಚಿತ್ರಮಂದಿರಕ್ಕೆ ಸೆಳೆಯಲು ಹೊಸ ಪ್ಲ್ಯಾನ್‌: ಇಷ್ಟ ಆದ್ರೆ ಮಾತ್ರ ಇಂಟರ್‌ವಲ್‌ನಲ್ಲಿ ಟಿಕೆಟ್‌ ಖರೀದಿಸಿ!

Published : Jul 09, 2024, 10:06 AM IST

ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರದೇ ಬಣಗುಡುತ್ತಿರೋ ಥಿಯೇಟರ್ಸ್. ಇದಕ್ಕೆ ಇಲ್ಲೊಬ್ಬ ನಿರ್ದೇಶಕ, ನಿರ್ಮಾಪಕ ಹೊಸ ಪ್ಲ್ಯಾನ್‌ವೊಂದನ್ನು ಮಾಡಿದ್ದಾರೆ. ಅರ್ಧ ಸಿನಿಮಾವನ್ನ ಉಚಿತವಾಗಿ ತೋರಿಸಲು ನಾಕ್ ಔಟ್ ಚಿತ್ರತಂಡ ಪ್ಲ್ಯಾನ್‌ ಮಾಡಿದೆ. ಮೊದಲಾರ್ಧ ಇಷ್ಟವಾದ್ರೆ ಇಂಟರ್‌ವಲ್‌ನಲ್ಲಿ ಟಿಕೆಟ್ ತೆಗೆದುಕೊಂಡು ಇನ್ನರ್ಧ ಸಿನಿಮಾ ನೋಡಿ ಎನ್ನುತ್ತಿದ್ದಾರೆ.

ಚಿತ್ರರಂಗದ ಇತಿಹಾಸದಲ್ಲೆ ಇದೇ ಮೊದಲು ಹೊಸ ಪ್ರಯೋಗ ಮಾಡಲು ನಾಕ್ ಔಟ್( Knock Out movie) ಚಿತ್ರತಂಡ ಮುಂದಾಗಿದೆ. ಜುಲೈ 19ರಂದು ನಾಕ್‌ಔಟ್‌ ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾ ತಂಡ ಹೊಸ ಪ್ಲ್ಯಾನ್ ಮಾಡಿದೆ. ಅದುವೇ ಅರ್ಥ ಸಿನಿಮಾ ಉಚಿತವಾಗಿ ನೋಡಿ, ಇನ್ನರ್ಧ ಬೇಕಿದ್ರೆ ಟಿಕೆಟ್‌ (Ticket) ಖರೀದಿಸಿ ಎಂದು. ಇದರ ಅರ್ಥ ಏನೆಂದರೆ ಟಿಕೆಟ್ ಖರೀದಿಸಿ ಸಿನಿಮಾ ಚೆನ್ನಾಗಿಲ್ಲ ಅಂತ ಹೊರ ಬಂದು ಬೇಸರ ಮಾಡಿಕೊಳ್ಳುವ ಬದಲು. ಫಸ್ಟ್‌ ಹಾಫ್‌ ಸಿನಿಮಾ ನೋಡಿದ ಮೇಲೆ ಏನೋ ಇಂಟ್ರೆಸ್ಟಿಂಗ್ ಆಗಿದೆ ಅಂತ ಎರಡನೇ ಭಾಗ ನೋಡಲು ಮುಂದಾಗುವವರು ಟಿಕೆಟ್‌ ಖರೀದಿಸಬೇಕಾಗುತ್ತದೆ.'ಚಿತ್ರ ಗುಣಮಟ್ಟವನ್ನು ಮೊದಲರ್ಧ ಸಿನಿಮಾದಲ್ಲಿ ನಿರ್ಧರಿಸುವ ಪ್ರೇಕ್ಷಕರು ಉಚಿತವಾಗಿ ಸಿನಿಮಾ ನೋಡಬಹುದು. ನಂತರ ಸೆಕೆಂಡ್ ಹಾಫ್‌ ಸಿನಿಮಾ ನೋಡಬೇಕು ಅನಿಸಿದರೆ ಮಾತ್ರ ಟಿಕೆಟ್ ಕೊಂಡು ನೋಡಬಹುದು. ಪ್ರಮುಖ ಚಿತ್ರಮಂದಿರಗಳಲ್ಲಿ ಮಾತ್ರ ಈ ವ್ಯವಸ್ಥೆ ಸೀಮಿತ' ಎಂದು ನಿರ್ದೇಶಕ ಅಂಬರೀಶ್(Director Ambarish) ಹೇಳಿದ್ದಾರೆ. ಈ ಚಿತ್ರದಲ್ಲಿ ಪೃಥ್ವಿ ಹಾಗೂ ರಚನಾ ಇಂದರ್‌ ನಟಿಸಿದ್ದಾರೆ. ಈ ಚಿತ್ರಕ್ಕೆ ವಿ.ರವಿಕುಮಾರ್ ಹಾಗೂ ಶಂಶುದ್ದೀನ್‌ ಎ ಬಂಡವಾಳ ಹಾಕಿದ್ದಾರೆ. ಇದೊಂದು ಹ್ಯೂಮರ್ ಡಾರ್ಕ್‌ ಕಾಮಿಡಿ ಜಾನರ್‌ನ ಚಿತ್ರವಾಗಿದ್ದು ನಾಯಕ ಆಂಬ್ಯುಲೆನ್ಸ್‌ ಚಾಲಕನಾಗಿ ನಟಿಸಿದ್ದಾರೆ. ಈ ಚಿತ್ರವನ್ನು ಪ್ರತಿಯೊಬ್ಬ ಆಂಬ್ಯುಲೆನ್ಸ್‌ ಚಾಲಕರಿಗೆ ಅರ್ಪಿಸುತ್ತಿದ್ದಾರೆ. ಚಿತ್ರತಂಡದ ಈ ಪ್ಲ್ಯಾನ್ ನಿಜ್ಕಕೂ ವರ್ಕ್ ಆಗು್ತತಾ ಕಾದು ನೋಡಬೇಕು.

ಇದನ್ನೂ ವೀಕ್ಷಿಸಿ:  ಟ್ರೆಂಡಿಂಗ್‌ನಲ್ಲಿ 'ಕೃಷ್ಣಂ ಪ್ರಣಯ ಸಖಿ' ಸಿನಿಮಾ..! ನಟ ಗಣೇಶ್ ಸಿನಿ ಖರಿಯರ್‌ನ ಬಿಗ್ ಬಜೆಟ್ ಚಿತ್ರ..!

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more