ಸ್ಯಾಂಡಲ್‌ವುಡ್ ತೆರೆ ಮೇಲೆ 'ಕ್ಷೇತ್ರಪತಿ' ದರ್ಬಾರ್‌: ಇನ್ಮುಂದೆ ಕನ್ನಡದ ಬಾಕ್ಸಾಫೀಸ್‌ಗೆ ಇವನೇ ಅಧಿಪತಿ..!

ಸ್ಯಾಂಡಲ್‌ವುಡ್ ತೆರೆ ಮೇಲೆ 'ಕ್ಷೇತ್ರಪತಿ' ದರ್ಬಾರ್‌: ಇನ್ಮುಂದೆ ಕನ್ನಡದ ಬಾಕ್ಸಾಫೀಸ್‌ಗೆ ಇವನೇ ಅಧಿಪತಿ..!

Published : Aug 19, 2023, 09:19 AM IST

ಪ್ರೇಕ್ಷಕರ ಮನ ಗೆದ್ದ ಜವಾರಿ ಶೈಲಿಯ 'ಕ್ಷೇತ್ರಪತಿ' 
ರಾಜ್ಯಾದ್ಯಂತ 'ಕ್ಷೇತ್ರಪತಿ' ದರ್ಬಾರ್ ಆರಂಭ..!
ರೈತ ಹೋರಾಟದ ಕತೆಗೆ ಜೀವ ತುಂಬಿದ ನವೀನ್!

ನಮ್ಮ ಎಫರ್ಟ್ ಸರಿಯಾಗಿದ್ರೆ ಸಕ್ಸಸ್ ಕಂಡಿತಾ ನಮ್ಮದೇ. ಈಗ ಅಂತಹ ಸಕ್ಸಸ್ ಹಾದಿ ಹಿಡಿದು ಹೊರಟಿದ್ದಾನೆ ಈ ಕ್ರೇತ್ರಪತಿ(Kshetrapati). ಸ್ಯಾಂಡಲ್‌ವುಡ್‌ನಲ್ಲಿ(sandalwood) ಗುಲ್ಟು ನವೀನ್ ಅಂತಲೇ ಖ್ಯಾತಿಗಳಿಸಿದ್ದ ನವೀನ್ ಶಂಕರ್(Naveen shankar) ನಟನೆಯ ಕ್ಷೇತ್ರಪತಿ ಸಿನಿಮಾ ರಾಜ್ಯಾದ್ಯಂತ ರಿಲೀಸ್ ಆಗಿದೆ. ಈ ಕ್ರೇತ್ರಪತಿಗೆ ಪ್ರೇಕ್ಷಕ ಪ್ರಭುಗಳು ಮಾರು ಹೋಗಿದ್ದಾರೆ. ಕ್ರೇತ್ರಪತಿ ಪ್ರತಿಭಾನ್ವಿತ ನಟ ನವೀನ್ ಶಂಕರ್ ನಾಯಕನಾಗಿ ನಟಿಸಿರೋ ಸಿನಿಮಾ. ನವೀನ್ ಶಂಕರ್‌ಗೆ ಗುಲ್ಟು ಸಿನಿಮಾದ ಕ್ಯಾರೆಕ್ಟರ್ ದೊಡ್ಡ ಹೆಸರು ತಂದುಕೊಡ್ತು. ಗುರುದೇವ ಹೊಯ್ಸಳ ಸಿನಿಮಾದಲ್ಲಿ ಡಾಲಿ ಎದುರು ಬಲಿ ಅನ್ನೋ ರೋಲ್ ಮಾಡಿ ಮತ್ತೆ ವಿಜೃಂಬಿಸಿದ್ರು. ಆದ್ರೆ ಈಗ ಕ್ರೇತ್ರಪತಿ ಸಿನಿಮಾದಲ್ಲಿ ಪಕ್ಕಾ ಕ್ರಾಂತಿಕಾರಿಯಾಗಿ ಘರ್ಜಿಸುತ್ತಿದ್ದಾರೆ. ಉತ್ತರ ಕರ್ನಾಟಕ ರೈತರ ಬದುಕು, ಅನ್ನದಾತನ ಸಮಸ್ಯೆಗಳು, ಹೋರಾಟದ ಕತೆಯನ್ನ ಪವರ್‌ಫುಲ್ ಆಗಿ ತೆರೆ ಮೇಲೆ ತರಲಾಗಿದೆ. ನವೀನ್ ಶಂಕರ್, ಅರ್ಚನಾ ಜೋಯಿಸ್, ಅಚ್ಯುತ್ ಕುಮಾರ್ ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಹಳ ದಿನಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ಉತ್ತರ ಕರ್ನಾಟಕ ಭಾಗದ ಕಥೆಯನ್ನು ಹೊತ್ತ ಸಿನಿಮಾ ಬಂದಿದೆ. ಶ್ರೀಕಾಂತ್ ಕಟಗಿ ನಿರ್ದೇಶಿಸಿದ ಈ ಸಿನಿಮಾದಲ್ಲಿ ಹೀರೋ ನವೀನ್ ಶಂಕರ್ ರೈತನ ಮಗನಾಗಿದ್ದು, ಇಂಜಿನಿಯರಿಂಗ್ ಓದುತ್ತಿರುತ್ತಾನೆ. ವಿದೇಶದಲ್ಲಿ ಕೆಲಸ ಮಾಡೋ ಕನಸು ಕಾಣುವ ನಾಯಕ ರೈತನಾಗಿ ಬದಲಾಗುತ್ತಾನೆ. ರೈತರ ಪರ ಹೋರಾಟಕ್ಕೆ ಇಳಿಯುತ್ತಾನೆ. ಅದು ಯಾಕೆ ಅನ್ನೋದೆ ಈ ಸಿನಿಮಾದಲ್ಲಿ ಇಂಟ್ರೆಸ್ಟಿಂಗ್ ಆಗಿ ಕಟ್ಟಿಕೊಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಕಡಲ ತಡಿಯಲ್ಲಿ ಪ್ರೀತಿಯ ಅಮಲಿನಲ್ಲಿ ರಕ್ಷಿತ್-ರುಕ್ಮಿಣಿ: ಹೇಗಿರುತ್ತೆ ಸಪ್ತ ಸಾಗರದಾಚೆ ಎಲ್ಲೋ ಪ್ರಪಂಚ..?

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more