ಸ್ಯಾಂಡಲ್‌ವುಡ್ ತೆರೆ ಮೇಲೆ 'ಕ್ಷೇತ್ರಪತಿ' ದರ್ಬಾರ್‌: ಇನ್ಮುಂದೆ ಕನ್ನಡದ ಬಾಕ್ಸಾಫೀಸ್‌ಗೆ ಇವನೇ ಅಧಿಪತಿ..!

ಸ್ಯಾಂಡಲ್‌ವುಡ್ ತೆರೆ ಮೇಲೆ 'ಕ್ಷೇತ್ರಪತಿ' ದರ್ಬಾರ್‌: ಇನ್ಮುಂದೆ ಕನ್ನಡದ ಬಾಕ್ಸಾಫೀಸ್‌ಗೆ ಇವನೇ ಅಧಿಪತಿ..!

Published : Aug 19, 2023, 09:19 AM IST

ಪ್ರೇಕ್ಷಕರ ಮನ ಗೆದ್ದ ಜವಾರಿ ಶೈಲಿಯ 'ಕ್ಷೇತ್ರಪತಿ' 
ರಾಜ್ಯಾದ್ಯಂತ 'ಕ್ಷೇತ್ರಪತಿ' ದರ್ಬಾರ್ ಆರಂಭ..!
ರೈತ ಹೋರಾಟದ ಕತೆಗೆ ಜೀವ ತುಂಬಿದ ನವೀನ್!

ನಮ್ಮ ಎಫರ್ಟ್ ಸರಿಯಾಗಿದ್ರೆ ಸಕ್ಸಸ್ ಕಂಡಿತಾ ನಮ್ಮದೇ. ಈಗ ಅಂತಹ ಸಕ್ಸಸ್ ಹಾದಿ ಹಿಡಿದು ಹೊರಟಿದ್ದಾನೆ ಈ ಕ್ರೇತ್ರಪತಿ(Kshetrapati). ಸ್ಯಾಂಡಲ್‌ವುಡ್‌ನಲ್ಲಿ(sandalwood) ಗುಲ್ಟು ನವೀನ್ ಅಂತಲೇ ಖ್ಯಾತಿಗಳಿಸಿದ್ದ ನವೀನ್ ಶಂಕರ್(Naveen shankar) ನಟನೆಯ ಕ್ಷೇತ್ರಪತಿ ಸಿನಿಮಾ ರಾಜ್ಯಾದ್ಯಂತ ರಿಲೀಸ್ ಆಗಿದೆ. ಈ ಕ್ರೇತ್ರಪತಿಗೆ ಪ್ರೇಕ್ಷಕ ಪ್ರಭುಗಳು ಮಾರು ಹೋಗಿದ್ದಾರೆ. ಕ್ರೇತ್ರಪತಿ ಪ್ರತಿಭಾನ್ವಿತ ನಟ ನವೀನ್ ಶಂಕರ್ ನಾಯಕನಾಗಿ ನಟಿಸಿರೋ ಸಿನಿಮಾ. ನವೀನ್ ಶಂಕರ್‌ಗೆ ಗುಲ್ಟು ಸಿನಿಮಾದ ಕ್ಯಾರೆಕ್ಟರ್ ದೊಡ್ಡ ಹೆಸರು ತಂದುಕೊಡ್ತು. ಗುರುದೇವ ಹೊಯ್ಸಳ ಸಿನಿಮಾದಲ್ಲಿ ಡಾಲಿ ಎದುರು ಬಲಿ ಅನ್ನೋ ರೋಲ್ ಮಾಡಿ ಮತ್ತೆ ವಿಜೃಂಬಿಸಿದ್ರು. ಆದ್ರೆ ಈಗ ಕ್ರೇತ್ರಪತಿ ಸಿನಿಮಾದಲ್ಲಿ ಪಕ್ಕಾ ಕ್ರಾಂತಿಕಾರಿಯಾಗಿ ಘರ್ಜಿಸುತ್ತಿದ್ದಾರೆ. ಉತ್ತರ ಕರ್ನಾಟಕ ರೈತರ ಬದುಕು, ಅನ್ನದಾತನ ಸಮಸ್ಯೆಗಳು, ಹೋರಾಟದ ಕತೆಯನ್ನ ಪವರ್‌ಫುಲ್ ಆಗಿ ತೆರೆ ಮೇಲೆ ತರಲಾಗಿದೆ. ನವೀನ್ ಶಂಕರ್, ಅರ್ಚನಾ ಜೋಯಿಸ್, ಅಚ್ಯುತ್ ಕುಮಾರ್ ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಹಳ ದಿನಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ಉತ್ತರ ಕರ್ನಾಟಕ ಭಾಗದ ಕಥೆಯನ್ನು ಹೊತ್ತ ಸಿನಿಮಾ ಬಂದಿದೆ. ಶ್ರೀಕಾಂತ್ ಕಟಗಿ ನಿರ್ದೇಶಿಸಿದ ಈ ಸಿನಿಮಾದಲ್ಲಿ ಹೀರೋ ನವೀನ್ ಶಂಕರ್ ರೈತನ ಮಗನಾಗಿದ್ದು, ಇಂಜಿನಿಯರಿಂಗ್ ಓದುತ್ತಿರುತ್ತಾನೆ. ವಿದೇಶದಲ್ಲಿ ಕೆಲಸ ಮಾಡೋ ಕನಸು ಕಾಣುವ ನಾಯಕ ರೈತನಾಗಿ ಬದಲಾಗುತ್ತಾನೆ. ರೈತರ ಪರ ಹೋರಾಟಕ್ಕೆ ಇಳಿಯುತ್ತಾನೆ. ಅದು ಯಾಕೆ ಅನ್ನೋದೆ ಈ ಸಿನಿಮಾದಲ್ಲಿ ಇಂಟ್ರೆಸ್ಟಿಂಗ್ ಆಗಿ ಕಟ್ಟಿಕೊಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಕಡಲ ತಡಿಯಲ್ಲಿ ಪ್ರೀತಿಯ ಅಮಲಿನಲ್ಲಿ ರಕ್ಷಿತ್-ರುಕ್ಮಿಣಿ: ಹೇಗಿರುತ್ತೆ ಸಪ್ತ ಸಾಗರದಾಚೆ ಎಲ್ಲೋ ಪ್ರಪಂಚ..?

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more