ಅಮ್ಮ ಕಂಡ ಕನಸು ಸಾಕಷ್ಟಿದೆ, ಬಾಕಿಯಿರುವ ಕೆಲಸ ಮಾಡುತ್ತೇನೆ: ವಿನೋದ್ ರಾಜ್

ಅಮ್ಮ ಕಂಡ ಕನಸು ಸಾಕಷ್ಟಿದೆ, ಬಾಕಿಯಿರುವ ಕೆಲಸ ಮಾಡುತ್ತೇನೆ: ವಿನೋದ್ ರಾಜ್

Published : Dec 10, 2023, 09:55 AM IST

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಲೀಲಾವತಿ ಅವರ ಪಾರ್ಥಿವ ಶರೀರ  ಸಾರ್ವಜನಿಕ ದರ್ಶನಕ್ಕೆ ಇಡಲಾಯಿತು. ಈ ವೇಳೆ  ಮೇರು ನಟಿಗೆ ಜನಪ್ರತಿನಿಧಿಗಳು ಅಂತಿಮ ನಮನ ಸಲ್ಲಿಸಲಿದ್ದಾರೆ.ಈ ವೇಳೆ ಕನ್ನಡ ಚಿತ್ರರಂಗದ ಹಲವು ಗಣ್ಯರು, ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಅಶೋಕ್, ಸರ್ಕಾರದ ಹಲವು ಸಚಿವರುಗಳು ಸಹ ಅಂತಿಮ ದರ್ಶನ ಪಡೆದರು.

ಮಹಾನ್ ನಟಿ ಧ್ರುವ ತಾರೆ ಲೀಲಾವತಿಯವರ ಪಾರ್ಥಿವ ಶರೀರವನ್ನು ನೆಲಮಂಗಲದ ಸೋಲದೇವನಹಳ್ಳಿಗೆ(Soladevanahalli) ಕೊಂಡೊಯ್ದು,ಸಕಲ ಸರ್ಕಾರಿ ವಿಧಿವಿಧಾನಗಳಂತೆ ಲೀಲಾವತಿಯವರ(Leelavathi) ತೋಟದಲ್ಲಿ ಅಂತಿಮ ವಿಧಿ ವಿಧಾನಗಳನ್ನು ಪೂರೈಸಿ ಅಂತಿಮ ಸಂಸ್ಕಾರ ಮಾಡಲಾಯಿತು. ಸೋಲದೇವನಹಳ್ಳಿಯಲ್ಲಿರುವ ಫಾರ್ಮ್‌ಹೌಸ್‌ನಲ್ಲಿ(FarmHouse) ಬಂಟರ ಸಂಪ್ರದಾಯದಂತೆ ಮಧ್ಯಾಹ್ನ ಅಂತಿಮ ಸಂಸ್ಕಾರ ನಡೆಯಿತು.ಈ ಸಂದರ್ಭದಲ್ಲಿ ಆಪ್ತರು, ಗಣ್ಯ,ಕುಟುಂಬದವರು ಅಭಿಮಾನಿಗಳು ಭಾಗಿ ಆಗಿದ್ದರು. ತಾಯಿಗೆ ಮಗನಾಗಿ ಅಲ್ಲ. ಮಗನೇ ತಾಯಿಯಂತೆ ಲೀಲಾವತಿಯವರನ್ನು  ಆರೈಕೆ ಮಾಡಿದ್ದರು. ತಾಯಿಯನ್ನು ಕಳೆದುಕೊಂಡು ವಿನೋದ್ ರಾಜ್(Vinod Raj) ಅವರು ತೀವ್ರ ದುಃಖಕ್ಕೆ ಒಳಗಾಗಿದ್ದಾರೆ. ಅಮ್ಮ ಇಲ್ಲ ಎಂಬ ನೋವು  ಅವರನ್ನು ಬಹುವಾಗಿ ಕಾಡುತ್ತಿದೆ. ಅಮ್ಮ ಕಂಡ ಕನಸನ್ನು ಈಡೇರಿಸುವ ಉದ್ದೇಶವನ್ನು ವಿನೋದ್ ಹೊಂದಿದ್ದಾರೆ. ಅಮ್ಮನ ಕನಸು ನನಸು ಮಾಡುತ್ತೇನೆ ಎಂದಿದ್ದಾರೆ ವಿನೋದ್ ರಾಜ್. ಹಿರಿಯ ನಟಿ ಲೀಲಾವತಿಯವರ ಅಗಲಿಕೆಗೆ ಇಡೀ ಕನ್ನಡ ಚಿತ್ರರಂಗ ಕನ್ನಡ ಜನತೆ ಶೋಕಸಾಗರದಲ್ಲಿ ಮುಳುಗಿದೆ. ದುಃಖದಲ್ಲೇ ಅಂತಿಮ ನಮನ ಸಲ್ಲಿಸಿದ್ಧಾರೆ.

ಇದನ್ನೂ ವೀಕ್ಷಿಸಿ:  ಬೆಳ್ತಂಗಡಿಯ ಲೀಲಾವತಿ ಸ್ಟಾರ್ ನಟಿಯಾಗಿದ್ದು ಹೇಗೆ ? 86 ವರ್ಷದ ಸಾರ್ಥಕ ಬದುಕು..ತುಂಬಿದ ಕೊಡ !

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್