ಬಹು ನಿರೀಕ್ಷಿತ 'ಮತ್ಸ್ಯಗಂಧ' ಟ್ರೇಲರ್ ಬಿಡುಗಡೆ! ಹೇಗಿದೆ 'ಕ್ಲಾಸ್' ನಾಯಕನ 'ಮಾಸ್' ಅವತಾರ..?

ಬಹು ನಿರೀಕ್ಷಿತ 'ಮತ್ಸ್ಯಗಂಧ' ಟ್ರೇಲರ್ ಬಿಡುಗಡೆ! ಹೇಗಿದೆ 'ಕ್ಲಾಸ್' ನಾಯಕನ 'ಮಾಸ್' ಅವತಾರ..?

Published : Feb 18, 2024, 11:50 AM ISTUpdated : Feb 18, 2024, 11:51 AM IST

ಕೆಲವೊಂದು ಸಿನಿಮಾಗಳೇ ಹಾಗೆ ಟೈಟಲ್, ಟೀಸರ್‌ನಿಂದಲೇ ಕನ್ನಡ ಸಿನಿ ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಮೂಡಿಸುತ್ತವೆ. ಇದೀಗ ದೀಯಾ ಸಿನಿಮಾ ಖ್ಯಾತಿಯ ನಟ ಪೃಥ್ವಿ ಅಂಬರ್ ನಟನೆಯ ಹೊಸ ಸಿನಿಮಾ ಮತ್ಸ್ಯಗಂಧ ಸಿನಿಮಾ ಕೂಡ ಸಿನಿ ಪ್ರೇಕ್ಷಕರಲ್ಲಿ ಹೊಸ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ.. ಮೀನುಗಾರಿಕೆ ಸಚಿವ ಮಾಂಕಾಳ ಎಸ್ ವೈದ್ಯ ಟ್ರೈಲರ್ ಬಿಡುಗಡೆ ಮಾಡಿದ್ರು.

ಉತ್ತರ ಕನ್ನಡ, ಅಲ್ಲಿನ ಪರಿಸರ, ಸಂಸ್ಕ್ರತಿ ಹಾಗೂ ಬದುಕಿಗೆ ಕೈ ಗನ್ನಡಿ ಹಿಡಿಯುವ ಪ್ರಯತ್ನವೇ ಮತ್ಸ್ಯಗಂಧ ಸಿನಿಮಾ. ಕರಾವಳಿ ಮೀನುಗಾರರ ಭಾಷೆ, ಬದುಕು, ಸಂಪ್ರದಾಯ, ಹೋರಾಟದ ಕಥೆಯ ಮತ್ಸ್ಯಗಂಧದಲ್ಲಿ ಸ್ಯಾಂಡಲ್‌ವುಡ್‌ನ ಲವ್ಲೀ ಹುಡುಗ ಪೃಥ್ವಿ ಅಂಬಾರ್ ಖಾಕಿ ತೊಟ್ಟಿದ್ದು ಅಪರಾಧಿಗಳಿಗೆ ಹಡೆಮುರಿ ಕಟ್ಟಲು ಸಜ್ಜಾಗಿದ್ದಾರೆ. ಮತ್ಸ್ಯಗಂಧದಲ್ಲಿ ದೊಡ್ಡ ತಾರಾಬಳಗ ಇದೆ. ಪೃಥ್ವಿ ಅಂಬಾರ್ ಹಿರಿಯ ನಟ ಶರತ್ ಲೋಹಿತಾಶ್ವ, ಭಜರಂಗಿ ಲೋಕಿ, ಪ್ರಶಾಂತ್ ಸಿದ್ದಿ, ನಾಗರಾಜ್ ಬೈಂದೂರ್, ಮೈಮ್ ರಾಮದಾಸ್ , ದಿಶಾ ಶೆಟ್ಟಿ, ಅಂಜಲಿ ಪಾಂಡೆ, ದಿವ್ಯಾ ಶೆಟ್ಟಿ, ಕಾಂತ್ ರಾಜ್ ಕಡ್ಡಿಪುಡಿ ಹೀಗೆ ಅನೇಕರು ಚಿತ್ರದಲ್ಲಿದ್ದಾರೆ. ಪ್ರಶಾಂತ್ ಸಿದ್ದಿ ಮ್ಯೂಸಿಕ್ ಸಿನಿಮಾಗಿದ್ದು, ಕನ್ನಡ ಪಿಚ್ಚರ್ ಅರ್ಪಿಸುವ ಚಿತ್ರವನ್ನ ಬಿ.ಎಸ್. ವಿಶ್ವನಾಥ್ ನಿರ್ಮಾಣ ಮಾಡಿದ್ದಾರೆ. ದೇವರಾಜ್ ಪೂಜಾರಿ ನಿರ್ದೇಶನದ ಮತ್ಸ್ಯಗಂಧ ಸಿನಿಮಾ ಇದೇ ಫೆಬ್ರವರಿ 23ಕ್ಕೆ ರಾಜ್ಯಾದ್ಯಂತ ತೆರೆಕಾಣುತ್ತಿದೆ.

ಇದನ್ನೂ ವೀಕ್ಷಿಸಿ:  ಒಂದು ಸರಳ ಪ್ರೇಮ ಕಥೆಗೆ ವಿದೇಶದಲ್ಲಿ ಭಾರಿ ಬೇಡಿಕೆ..ವಿನಯ್ ಚಿತ್ರ ನೋಡಿ ಖುಷಿ ಪಟ್ಟ ಕನ್ನಡ ತಾರೆಯರು!

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more