ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ 4 ದಿನ ಇರುವಾಗಲೇ ಪ್ರತಿಮೆ ಒಡೆದು ಹಾಕಿದ ಕಿಡಿಗೇಡಿಗಳು

Dec 26, 2020, 12:37 PM IST

ಎರಡು ವರ್ಷದ ಹಿಂದೆ ಮಾಗಡಿ ರಸ್ತೆ ಟೋಲ್‌ಗೇಟ್‌ ಸರ್ಕಲ್‌ನಲ್ಲಿ ಡಾ. ವಿಷ್ಣುವರ್ಧನ್ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿತ್ತು. ಆದರೆ ಕೆಲ ಕಿಡಿಗೇಡಿಗಳು ರಾತ್ರೋ ರಾತ್ರಿ ಒಡೆದು ಹಾಕಿದ್ದಾರೆ. ಕಳೆದ ಬಾರಿ ಸಹ ಇದೇ ರೀತಿ ಮಾಡಲಾಗಿತ್ತು.  ಪ್ರತಿಮೆಯನ್ನು ಪುನರ್ ಪ್ರತಿಷ್ಠಾಪನೆ ಮಾಡಲಾಗಿತ್ತು. ಪದೇ ಪದೆ ಹೀಗೆ ಆಗುತ್ತಿರುವುದಕ್ಕೆ ವಿಷ್ಣು ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಹೆಚ್ಚಿನ ಮಾಹಿತಿ ಹಾಗೂ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna News