ಆಸ್ಪತ್ರೆಗೆ ದಾಸ ಶಿಫ್ಟ್‌: ವಿಮ್ಸ್ ಆಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್.. ಸದ್ಯದಲ್ಲೇ ದರ್ಶನ್‌ಗೆ ಸರ್ಜರಿ

ಆಸ್ಪತ್ರೆಗೆ ದಾಸ ಶಿಫ್ಟ್‌: ವಿಮ್ಸ್ ಆಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್.. ಸದ್ಯದಲ್ಲೇ ದರ್ಶನ್‌ಗೆ ಸರ್ಜರಿ

Published : Oct 24, 2024, 04:13 PM IST

ಹೈಕೋರ್ಟ್​​ನಲ್ಲಿ ಬೇಲ್ ಅರ್ಜಿ ಮುಂದೂಡಿಗೆ ಆದ ಬೆನ್ನಲ್ಲೇ ದರ್ಶನ್​ನ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬೆನ್ನು ನೋವಿನಿಂದ ಬಳಲ್ತಾ ಇರೋ ದರ್ಶನ್​ಗೆ ಟ್ರೀಟ್​ಮೆಂಟ್ ಶುರುಮಾಡಲಾಗಿದೆ. ಆದ್ರೆ ದರ್ಶನ್​​ನ ಆಸ್ಪತ್ರೆಗೆ ಕರೆತರುವ ಸಮಯದಲ್ಲಿ ದೊಡ್ಡ ಹೈಡ್ರಾಮಾನೇ ನಡೆದಿದೆ.

ಹೈಕೋರ್ಟ್​​ನಲ್ಲಿ ಬೇಲ್ ಅರ್ಜಿ ಮುಂದೂಡಿಗೆ ಆದ ಬೆನ್ನಲ್ಲೇ ದರ್ಶನ್​ನ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬೆನ್ನು ನೋವಿನಿಂದ ಬಳಲ್ತಾ ಇರೋ ದರ್ಶನ್​ಗೆ ಟ್ರೀಟ್​ಮೆಂಟ್ ಶುರುಮಾಡಲಾಗಿದೆ. ಆದ್ರೆ ದರ್ಶನ್​​ನ ಆಸ್ಪತ್ರೆಗೆ ಕರೆತರುವ ಸಮಯದಲ್ಲಿ ದೊಡ್ಡ ಹೈಡ್ರಾಮಾನೇ ನಡೆದಿದೆ. ಫ್ಯಾನ್ಸ್ ಹುಚ್ಚಾಟ, ಎಳೆದಾಟದಿಂದ ದರ್ಶನ್ ನೋವಿನಿಂದ ಕಿರುಚುವ ಪರಿಸ್ಥಿತಿ ಎದುರಾಗಿದೆ. ಬೆನ್ನು ನೋವಿನಿಂದ ಪರದಾಡ್ತಾ ಇರೋ ದರ್ಶನ್​ನ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಹುಚ್ಚು ಅಭಿಮಾನಿಗಳು ಸೇರಿಕೊಳ್ತಾರೆ ಅನ್ನೋ ಕಾರಣಕ್ಕೇನೆ ತಡರಾತ್ರಿ ದರ್ಶನ್​​ನ ಆಸ್ಪತ್ರೆಗೆ ಕರೆತರಲಾಗಿದೆ. ಆದ್ರೂ ಕೂಡ ದಾಸನ ಅಂದಾಭಿಮಾನಿಗಳ ಪಡೆ ಆಸ್ಪತ್ರೆಯೆದರು ಸೇರಿ ಗಲಾಟೆ ಮಾಡಿದೆ. ಆಸ್ಪತ್ರೆ ಎದುರು ಸೇರಿದ ಫ್ಯಾನ್ಸ್​ನ ಕಂಟ್ರೋಲ್ ಮಾಡೋದು ಪೊಲೀಸರಿಗೆ ದೊಡ್ಡ ಸವಾಲಾಗಿತ್ತು. 

ಜೈ ಡಿ ಬಾಸ್..  ಡಿ ಬಾಸ್ ಅಂತ ಕೂಗ್ತಾ ಇದ್ದ ಅಭಿಮಾನಿಗಳು ದರ್ಶನ್​ನ ಮುಟ್ಟೋದಕ್ಕೆ ಪ್ರಯತ್ನ ಪಟ್ಟಿದ್ದಾರೆ. ಯುವಕನೊಬ್ಬ ದರ್ಶನ್​ ಕೈಯನ್ನ ಜೋರಾಗಿ ಎಳೆದಿದ್ದು, ಮೊದಲೇ ಬೆನ್ನು ನೋವಿನಿಂದ ಬಳಲ್ತಾ ಇರೋ ದರ್ಶನ್ ನೋವಿನಿಂದ ಕಿರುಚಿಕೊಂಡಿದ್ದಾರೆ. ಹೌದು ಬೆನ್ನು ಹುರಿಯ ನೋವಿನಿಂದ ಬಳಲ್ತಾ ಇರೋ ದರ್ಶನ್​ಗೆ MRI ಸ್ಕ್ಯಾನ್ ಮಾಡಿರೋ ವೈದ್ಯರು , ಸರ್ಜರಿ ಮಾಡಿಸಿಕೊಳ್ಳಬೇಕು ಅಂತ ಸೂಚನೆ ಕೊಟ್ಟಿದ್ದಾರೆ. ವಿಮ್ಸ್ ನ್ಯೂರೋ ಸರ್ಜನ್ ಡಾ.ವಿಶ್ವನಾಥ್ , ದರ್ಶನ್​ ಪರಿಸ್ಥಿತಿಯನ್ನ ನೋಡಿ ಅತಿ ಶಿಘ್ರದಲ್ಲಿ ಸರ್ಜರಿ ಒಳಗಾಗುವಂತೆ ಸೂಚನೆ ಕೊಟ್ಟಿದ್ದಾರೆ. ಹೈಕೋರ್ಟ್ ಕೂಡ ದರ್ಶನ್ ಆರೋಗ್ಯದ ವರದಿ ನೀಡೋದಕ್ಕೆ ಸೂಚನೆ ಕೊಟ್ಟಿದ್ದು 28ನೇ ತಾರೀಖು ಈ ವರದಿ ಹೈಕೋರ್ಟ್​ಗೆ ಸಲ್ಲಿಕೆ ಆಗಲಿದೆ. ದರ್ಶನ್ ಬೆನ್ನು ನೋವಿನ ಕಾರಣಕ್ಕೆ ಶೀಘ್ರ ಬೇಲ್ ನೀಡುವಂತೆ ಈಗಾಗ್ಲೇ ದರ್ಶನ್ ಪರ ವಕೀಲರು ಕೇಳಿಕೊಂಡಿದ್ದಾರೆ.

ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ, ದರ್ಶನ್ ಆರೋಗ್ಯದ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. 28ನೇ ತಾರೀಖು ಈ ವರದಿ ಹೈಕೋರ್ಟ್​ಗೆ ಸಲ್ಲಿಕೆ ಆಗಲಿದ್ದು, ಇದನ್ನ ಪರಿಗಣಿಸಿ ಹೈಕೊರ್ಟ್​ ಬೇಲ್ ನೀಡಬಹುದು ಅನ್ನೋ ಅಸೆ ದರ್ಶನ್ ಪಾಳೆಯದಲ್ಲಿದೆ. ಆದ್ರೆ ಒಂದು ವೇಳೆ 28ನೇ ತಾರೀಖಿಗೂ ಹೈಕೋರ್ಟ್​ನಲ್ಲಿ ಬೇಲ್ ಸಿಗದೇ ಹೋದ್ರೆ ದರ್ಶನ್​ ಅನಿವಾರ್ಯವಾಗಿ ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬೇಕಿದೆ. ಯಾಕಂದ್ರೆ ಈಗಲೇ ದರ್ಶನ್ ನಡೆದಾಡೋಕೆ ಕಷ್ಟಪಡ್ತಿರುವಂತಿದೆ. ದರ್ಶನ್ ಮುಖದಲ್ಲಿ ನೋವಿನ ಗೆರೆಗಳು ಕಾಣ್ತಾ ಇವೆ. ವೈದ್ಯರ ಸಲಹೆಯಂತೆ ಶೀಘ್ರದಲ್ಲಿ ಶತ್ರಚಿಕಿತ್ಸೆ ಪಡೆಯದೇ ಹೋದ್ರೆ ದರ್ಶನ್ ಸ್ಥಿತಿ ಮತ್ತಷ್ಟು ಬಿಗಡಾಯಿಸೋದು ಫಿಕ್ಸ್ ಎನ್ನಲಾಗ್ತಾ ಇದೆ. ದರ್ಶನ್​​ ಕಣ್ಣು ಮತ್ತೆ ಹೈಕೋರ್ಟ್​ ನತ್ತ ನೆಟ್ಟಿದೆ. 

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
Read more