'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಸಿನಿಮಾಗೆ ಕಂಟಕ.! ಕೆಂಪೇಗೌಡರ ಬಗ್ಗೆ ಸಿನಿಮಾ ಮಾಡಂಗಿಲ್ಲ ಎಂದ ನಾಗಾಭರಣ!

'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಸಿನಿಮಾಗೆ ಕಂಟಕ.! ಕೆಂಪೇಗೌಡರ ಬಗ್ಗೆ ಸಿನಿಮಾ ಮಾಡಂಗಿಲ್ಲ ಎಂದ ನಾಗಾಭರಣ!

Published : Apr 23, 2024, 11:10 AM IST

ನಾಡಪ್ರಭು ಕೆಂಪೇಗೌಡ.. ಬೆಂಗಳೂರು ನಿರ್ಮಾತೃ. ಇವರ ಬಗ್ಗೆ ಒಂದು ಬಯೋಪಿಕ್ ಸಿನಿಮಾ ಬರಬೇಕು ಅನ್ನೋದು ಹಲವರ ಆಸೆ ಮತ್ತು ನಿರೀಕ್ಷೆ. ಆ ಆಸೆ ನಿರೀಕ್ಷೆಗೆ ನೀರೆರೆಯೋ ಕೆಲಸ ಸ್ಯಾಂಡಲ್‌ವುಡ್‌ನಲ್ಲಿ ಶುರುವಾಗಿತ್ತು. ನಾಡಪ್ರಭು ಕೆಂಪೇಗೌಡರ ಜೀವನಾಧಾರಿತ ಸಿನಿಮಾ ಅನೌನ್ಸ್ ಆಗಿತ್ತು. ದಿನೇಶ್ ಬಾಬು ನಿರ್ದೇಶನದಲ್ಲಿ 'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಸಿನಿಮಾ ಘೋಷಣೆ ಆಗಿತ್ತು.

ನಾಡಪ್ರಭು ಕೆಂಪೇಗೌಡರ ಜೀವನಾಧರಿತ ಸಿನಿಮಾ ಮಾಡಲು ನಾನಾ? ನೀನಾ? ಎನ್ನುವ ಹಗ್ಗಜಗ್ಗಾಟ ಶುರುವಾಗಿದೆ. ಇತ್ತೀಚೆಗೆ ದಿನೇಶ್ ಬಾಬು ನಿರ್ದೇಶನದಲ್ಲಿ 'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಸಿನಿಮಾ(Dharmabheeru Nadaprabhu Kempegowda) ಅನೌನ್ಸ್ ಆಗಿತ್ತು. ಈ ಚಿತ್ರಕ್ಕೆ  ಸಂಗೀತ ನಿರ್ದೇಶಕ ಕಿರಣ್ ತೋಟಂಬೈಲ್ ನಿರ್ಮಾಣ ಹೊಣೆ ಹೊತ್ತಿದ್ದಾರೆ. ಆದ್ರೆ ಈ ಚಿತ್ರ ಆರಂಭಕ್ಕೂ ಮೊದಲೇ ಕಂಟಕ ಎದುರಾಗಿದೆ. ನಿರ್ದೇಶಕ ಟಿ.ಎಸ್. ನಾಗಾಭರಣ(T.S. Nagabharana) ಮತ್ತು ನಿರ್ಮಾಪಕ ಡಾ ಎಂ ಎನ್ ಶಿವರುದ್ರಪ್ಪ ನಾವು ಕೆಂಪೇಗೌಡರ(Nadaprabhu Kempegowda) ಜೀವನವನ್ನಾಧರಿಸಿ ಸಿನಿಮಾ ಮಾಡುತ್ತಿದ್ದೇವೆ. ಹಾಗಾಗಿ 'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಚಲನಚಿತ್ರ ಕುರಿತ ನಿರ್ಮಾಣ, ನಿರ್ದೇಶನ, ಜಾಹೀರಾತು, ವಿತರಣೆ ಅಥವಾ ಸಾರ್ವಜನಿಕರಿಗೆ ಸಂವಹನಗಳನ್ನು ಮಾಡದಂತೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈಗ ಕೋರ್ಟ್ 'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಚಿತ್ರಕ್ಕೆ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿದೆ.

ಅತ್ತ ನಾಗಾಭರಣ ಮತ್ತವರ ತಂಡ 'ಧರ್ಮಭೀರು ನಾಡಪ್ರಭು ಕೆಂಪೇಗೌಡ' ಸಿನಿಮಾ ವಿರುದ್ಧ ಕೋರ್ಟ್ ಮೆಟ್ಟಿಲೇರಿದೆ. ಇತ್ತ 'ಧರ್ಮಭೀರು ನಾಡಪ್ರಭು ಕೆಂಪೇಗೌಡ' ನಿರ್ಮಾಪಕ ಕಿರಣ್ ತೋಟಂಬೈಲ್ ನಾಗಾಭರಣ ವಾದಕ್ಕೆ ಡೋಟ್ ಕೇರ್ ಎನ್ನುತ್ತಿಲ್ಲ. ನಮ್ಮದು ಪ್ಯಾನ್ ವರ್ಲ್ಡ್ ಸಿನಿಮಾ. ಇಂಗ್ಲೀಷ್ ಹಾಗೂ ಕನ್ನಡದಲ್ಲಿ ಸಿನಿಮಾ ಮಾಡುವುದಾಗಿ ಘೋಷಣೆ ಮಾಡಿದ್ದೇವೆ.  ಇದು ಬ್ರಿಟೀಷ್ ಕೌನ್ಸಿಲ್, ಐಎಂಡಿಬಿ ಎಲ್ಲರದಲ್ಲೂ ನಮ್ಮ ಸಿನಿಮಾ ರಿಜಿಸ್ಟರ್ ಆಗಿದೆ. ಇಂಗ್ಲೀಷ್ ಸಿನಿಮಾ ಆಗಿರುವುದರಿಂದ ಇಲ್ಲಿನ ಕಾನೂನು ಅದಕ್ಕೆ ತೊಡಕಾಗುವುದಿಲ್ಲ ಕೆಂಪೇಗೌಡರ ಕಥೆ ಇತಿಹಾಸ. ಇದನ್ನು ಕಾಪಿರೈಟ್ ಮಾಡುತ್ತೇವೆ ಎನ್ನುವುದು ತಪ್ಪಾಗುತ್ತದೆ. ಅದು ಅವರ ದಡ್ಡತನ. ಈ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಲೀಗಲ್ ಟೀಂ ಕೋರ್ಟ್‌ನಲ್ಲಿ ಇದಕ್ಕೆ ಉತ್ತರ ಕೊಡುತ್ತಾರೆ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  'ಕಲ್ಕಿ 2898 AD' ಚಿತ್ರದ ಅಶ್ವಥಾಮ ಟೀಸರ್ ರಿಲೀಸ್..! ಅಶ್ವಥಾಮನಾಗಿ ಎದ್ದು ಬಂದ ಬಿಗ್ ಬಿ ಅಮಿತಾ ಬಚ್ಚನ್..!

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more