'ಕಾಣೆಯಾದವರ ಬಗ್ಗೆ ಪ್ರಕಟಣೆ'ಗೆ ಮುನಿಸು ಮರೆತು ಒಂದಾದ್ರು ಅಲೋಕ್-ಚಂದನ್ ಶೆಟ್ಟಿ.!

'ಕಾಣೆಯಾದವರ ಬಗ್ಗೆ ಪ್ರಕಟಣೆ'ಗೆ ಮುನಿಸು ಮರೆತು ಒಂದಾದ್ರು ಅಲೋಕ್-ಚಂದನ್ ಶೆಟ್ಟಿ.!

Published : May 16, 2022, 05:05 PM ISTUpdated : May 16, 2022, 05:41 PM IST

 ರ್ಯಾಪ್ ಹಾಡುಗಳ (Rap Song) ಸಕಲ ಸಂಗೀತ ಪ್ರಿಯರಿಗೆ ಇಷ್ಟವಾಗಿರೋ ಚಂದನ್  (Chandan shetty) ಹಾಗೂ ಆಲ್ ಒಕೆ (All Ok)  ವಿಶಿಷ್ಠ ಟೈಟಲ್ನಿಂದ ಗಮನ ಸೇಳೆದಿರೋ ಕಾಣೆಯಾದವರ ಬಗ್ಗೆ ಪ್ರಕಟಣೆ ಸಿನಿಮಾದ ಹಾಡೊಂದನ್ನ ಹಾಡೋಕೆ ಒಂದಾಗಿದ್ದಾರೆ.

ಸ್ಯಾಂಡಲ್‌ವುಡ್ ಸಂಗೀತ ಲೋಕದಲ್ಲಿ ರ್ಯಾಪ್ ಹಾಡುಗಳ (Rap Song) ಬಗ್ಗೆ ಹುಚ್ಚು ಹಚ್ಚಿಸಿದವರಲ್ಲಿ ಚಂದನ್ ಶೆಟ್ಟಿ ಹಾಗು ಆಲ್ ಓಕೆ ಖ್ಯಾತಿಯ ಅಲೋಕ್ ಕುಮಾರ್ ಪ್ರಮುಖರು. ಒಂದ್ ಕಾಲದಲ್ಲಿ ಇಬ್ಬರು ಒಟ್ಟಿಗೆ ಕನ್ನಡ ರ್ಯಾಪ್ ಸಾಂಗ್‌ಗಳನ್ನು ಸೃಷ್ಟಿಸಲು ಮುಂದಾಗಿದ್ರು. ಆದ್ರೆ ಇವರಿಬ್ಬರ ಮೇಲೆ ಅದ್ಯಾರ ಕಣ್ಣು ಬಿದ್ದಿತ್ತೋ ಏನೋ ಚಂದನ್ ಆಲ್ ಒಕೆ ಮಧ್ಯೆ ಎಲ್ಲವೂ ಸರಿ ಇಲ್ಲದಂತಾಗಿತ್ತು. ಇಬ್ಬರ ಮಧ್ಯೆ ನಾನಾ ನೀನಾ ಅನ್ನುವಷ್ಟು ಜಗಳವೂ ಆಗಿತ್ತು. ತಮ್ಮ ಹಾಡುಗಳ ಮೂಲಕದೇ ಒಬ್ಬರಿಗೊಬ್ಬರು ಕಾಲೆಳೆದುಕೊಂಡಿದ್ದೂ ಇದೆ. ಆದ್ರೆ ಈಗ ಈ ರ್ಯಾಪ್ ಕಿಂಗ್ಗಳು ಮತ್ತೆ ಒಂದಾಗಿದ್ದಾರೆ. ಒಂದಾಗಿದ್ದಷ್ಟೆ ಅಲ್ಲ ಇಬ್ಬರು ಸೇರಿ ಕಾಣೆಯಾದವರ ಬಗ್ಗೆ ಪ್ರಕಟಣೆ ಮಾಡುತ್ತಿದ್ದಾರೆ. 

ರ್ಯಾಪ್ ಹಾಡುಗಳ (Rap Song) ಸಕಲ ಸಂಗೀತ ಪ್ರಿಯರಿಗೆ ಇಷ್ಟವಾಗಿರೋ ಚಂದನ್  (Chandan shetty) ಹಾಗೂ ಆಲ್ ಒಕೆ (All Ok)  ವಿಶಿಷ್ಠ ಟೈಟಲ್ನಿಂದ ಗಮನ ಸೇಳೆದಿರೋ ಕಾಣೆಯಾದವರ ಬಗ್ಗೆ ಪ್ರಕಟಣೆ ಸಿನಿಮಾದ ಹಾಡೊಂದನ್ನ ಹಾಡೋಕೆ ಒಂದಾಗಿದ್ದಾರೆ.

ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಸಂಯೋಜನೆಯಲ್ಲಿ ಕ್ರಾಂತಿ ಕುಮಾರ್ ಸಾಹಿತ್ಯ ಸಿರಿಯಲ್ಲಿ ಬಂದಿರೋ ಪಾರ್ಟಿ ಸಾಂಗ್ ಅನ್ನ ಆಲ್ ಓಕೆ ಮತ್ತು ಚಂದನ್ ಶೆಟ್ಟಿ ಇಬ್ಬರು ಒಟ್ಟಿಗೆ ಸೇರಿ ಱಪ್ ಟಚ್ ಕೊಟ್ಟು ಹಾಡಿದ್ದಾರೆ. ಈ ಮೂಲಕ ಇಷ್ಟು ದಿನ ಇಬ್ಬರ ಮಧ್ಯೆ ಇದ್ದ ಮುನಿಸು ದೂರಾಗಿದೆ.

ಕಾಣೆಯಾದವರ ಬಗ್ಗೆ ಪ್ರಕಟಣೆ ಸಿನಿಮಾವನ್ನ ಱಂಬೋ 2 , ಕೃಷ್ಣ ರುಕ್ಕು ಸಿನಿಮಾ ಖ್ಯಾತಿಯ ಅನಿಲ್ ಕುಮಾರ್ ನಿರ್ದೇಶನದ ಜೊತೆಗೆ ಫಸ್ಟ್ ಟೈಮ್ ನಾಯಕನಾಗಿ ನಟಿಸಿದ್ದಾರೆ. ರಂಗಾಯಣ ರಘು ,ಆರ್ಮುಗಂ ರವಿಶಂಕರ್, ತಬಲ ನಾಣಿ ಹಾಗೂ ಚಿಕ್ಕಣ್ಣ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು, ವೆನಿಲಾ ಐಸ್ ಕ್ರೀಮ್ ಮೇಲೆ ಕಾಣೋ ಚರಿಯಂತೆ ಈ ಸಿನಿಮಾದಲ್ಲಿ ಚುಟು ಚುಟು ಬೆಡಗಿ, ಪಠಾಕಿ ಪೋರಿ ಆಶಿಕಾ ರಂಗನಾಥ್ ಅಭಿನಯಿಸಿದ್ದಾರೆ. ಈಗ ಅಲೋಕ್ ಹಾಗು ಚಂದನ್ ಹಾಡಿನಲ್ಲಿ ಒಂದಾಗಿದ್ದು ಇವ್ರಿಬ್ರ ಕೆಮಿಸ್ಟ್ರಿಯ ಕಂಠಸಿರಿ ಭರ್ಜರಿಯಾಗಿದೆ. 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more