ಮಿಲನ ಪ್ರಕಾಶ್ ವಿಚಾರಣೆ ಮಾಡಿದ್ದೇಕೆ ಪೊಲೀಸರು ? 'ಡೆವಿಲ್' ನಿರ್ದೇಶಕರಿಗೂ ದರ್ಶನ್ ಕೇಸ್‌ಗೂ ಏನು ಸಂಬಂಧ?

ಮಿಲನ ಪ್ರಕಾಶ್ ವಿಚಾರಣೆ ಮಾಡಿದ್ದೇಕೆ ಪೊಲೀಸರು ? 'ಡೆವಿಲ್' ನಿರ್ದೇಶಕರಿಗೂ ದರ್ಶನ್ ಕೇಸ್‌ಗೂ ಏನು ಸಂಬಂಧ?

Published : Jul 07, 2024, 09:18 AM IST

 ದರ್ಶನ್ ನಟಿಸುತ್ತಿದ್ದ 'ಡೆವಿಲ್' ಸಿನಿಮಾದ ನಿರ್ದೇಶಕ ಮಿಲನ ಪ್ರಕಾಶ್ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದರು.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ(Renukaswamy murder case) ಈಗಾಗಲೇ ದರ್ಶನ್, ಪವಿತ್ರಾ ಗೌಡ ಸೇರಿ ಅನೇಕರ ಬಂಧನ ನಡೆದಿದೆ. ಪ್ರಕರಣದ ಜೊತೆ, ದರ್ಶನ್(Darshan) ಜೊತೆ ಲಿಂಕ್ ಹೊಂದಿರೋ ಎಲ್ಲರನ್ನೂ ವಿಚಾರಣೆ ಮಾಡಲಾಗುತ್ತಿದೆ. ಈ ವೇಳೆ ಯಾವೆಲ್ಲ ಮಾಹಿತಿ ಹೊರ ಬೀಳುತ್ತದೆ ಅನ್ನೋದು ತುಂಬಾನೇ ಮುಖ್ಯವಾಗುತ್ತದೆ. ಈ ಸಂಬಂಧ ದರ್ಶನ್ ನಟಿಸುತ್ತಿದ್ದ 'ಡೆವಿಲ್' ಸಿನಿಮಾದ(Devil movie) ನಿರ್ದೇಶಕ ಮಿಲನ ಪ್ರಕಾಶ್ (Milan Prakash) ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಸುಮಾರು ಒಂದೂವರೆ ಗಂಟೆಗಳ ಕಾಲ ನಿರ್ದೇಶನ ಮಿಲನ ಪ್ರಕಾಶ್ ಅವರನ್ನು ವಿಚಾರಣೆ ಮಾಡಲಾಗಿದೆ ಎಂದು ವರದಿಯಾಗಿದೆ. ದರ್ಶನ್ ಜೈಲು ಸೇರಿದ ಮೇಲೆ ತೀವ್ರಗೊಂಡ ವಿಚಾರಣೆಯಲ್ಲಿ ಯಶಸ್ಸು ಸೂರ್ಯ, ವಿಲನ ಪ್ರಕಾಶ್ ಅಂತಹ ಹೆಸರುಗಳು ಬಂದಿವೆ. ಇಷ್ಟಕ್ಕೂ ದರ್ಶನ್ ಕೇಸ್‌ನಲ್ಲಿ ಮಿಲನ ಪ್ರಕಾಶ್‌ಗೆ ಪೊಲೀಸರು ನೋಟಿಸ್ ಕೊಟ್ಟಿದ್ದು ಏಕೆ? ಈ ಕೇಸ್ಗೂ ಮಿಲನ ಪ್ರಕಾಶ್ಗೂ ಏನು ಸಂಬಂಧ? ಈ ಪ್ರಶ್ನೆಗಳಿಗೆ ಉತ್ತರವೆಂಬಂತೆ ಒಂದಿಷ್ಟು ಸುದ್ದಿಗಳು ಓಡಾಡುತ್ತಿದೆ. ಅಷ್ಟಕ್ಕೂ ಒಂದೂವರೆ ಗಂಟೆಯಲ್ಲಿ ಪೊಲೀಸರು ಮಿಲನ ಪ್ರಕಾಶ್ರಿಂದ ಏನೆಲ್ಲ ಮಾಹಿತಿ ಪಡೆದರು ಅನ್ನೋದು ಕುತೂಹಲ ಮೂಡಿಸಿದೆ. ದರ್ಶನ್ ನಟಿಸುತ್ತಿದ್ದ 'ಡೆವಿಲ್' ಸಿನಿಮಾದ ನಿರ್ಮಾಪಕ ಕಮ್ ನಿರ್ದೇಶಕ ಮಿಲನ ಪ್ರಕಾಶ್ಗೆ ನೋಟಿಸ್ ನೀಡಿದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗಿದ್ದರು. ಎಸಿಪಿ ಕಚೇರಿಯಲ್ಲಿ ಇವರನ್ನು ವಿಚಾರಣೆಗೆ ಹಾಜರಾಗಿದ್ದು, ರೇಣುಕಾಸ್ವಾಮಿ ಕೊಲೆಯಾದ ಬಳಿಕ ಮೈಸೂರಿನಲ್ಲಿ ದರ್ಶನ್ 'ಡೆವಿಲ್' ಸಿನಿಮಾ ಶೂಟಿಂಗ್ಗೆ ಭಾಗಿಯಾಗಿದ್ದರು. ಅಲ್ಲಿನ ಕೆಲವು ವಿಚಾರಗಳನ್ನು ಮಿಲನ ಪ್ರಕಾಶ್ ಅವರಿಂದ ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ವೀಕ್ಷಿಸಿ:  ಕಬಾಬ್‌ನಲ್ಲೂ .. ಗೋಬಿಯಲ್ಲೂ ವಿಷ..! ಸರ್ಕಾರ ಬ್ಯಾನ್ ಮಾಡಿದ್ರೂ ವ್ಯಾಪಾರಿಗಳು ಬಿಡ್ತಿಲ್ಲ..!

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!